ಬಾಲಕಾರ್ಮಿಕ ಪದ್ಧತಿ ತೊಲಗಿಸಿ
Team Udayavani, Jun 13, 2020, 6:55 AM IST
ಚಿಕ್ಕಬಳ್ಳಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾನೂನು ಅರಿವು ಪ್ರಚಾರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಹಸಿರು ನಿಶಾನೆ ತೋರಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ದೇಶದ ಸರ್ವಾಂಗೀಣ ಅಭಿವೃದಿಗೆ ಮಾರಕವಾಗಿರುವುದರಿಂದ ಜೊತೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿರುವುದರಿಂದ ಬಾಲ ಕಾರ್ಮಿಕ ಪದ್ಧತಿ ಆಚರಣೆ ಶಿಕ್ಷಾರ್ಹ ಅಪರಾಧ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ, ರಾಜ್ಯ ವಕೀಲರ ಪರಿಷತ್ ಉಸ್ತುವಾರಿ ಸದಸ್ಯ ಶ್ರೀನಿವಾಸ್ ಬಿ.ವಿ, ಜಿಲ್ಲಾ ವಕೀಲರ ಸಂಘ ಉಪಾಧ್ಯಾಕ್ಷ ಬಾಲಾಜಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಡಾ.ವಿ.ಅಶೋಕ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹೆಚ್.ದೇವರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಬಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್, ಕಾರ್ಮಿಕ ಅಧಿಕಾರಿಗಳಾದ ಆರ್.ವರಲಕ್ಷ್ಮೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ