ಅರ್ಹರಿಗೆ ಬ್ಯಾಂಕ್ ಸಾಲ ನೀಡಿ
Team Udayavani, Jul 6, 2020, 6:40 AM IST
ಚಿಕ್ಕಬಳ್ಳಾಪುರ: ಬ್ಯಾಂಕಿಂಗ್ಯೇತರ ಕಂಪನಿಗಳಿಗೂ ಹಾಗೂ ಸೂಕ್ಷ್ಮ, ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೀಡಿರುವ ಜಿಇಸಿಎಲ್ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಲ ನೀಡಬೇಕೆಂದು ಜಿಪಂ ಸಿಇಒ ಫೌಝೀಯಾ ತರುನ್ನುಮ್ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಬ್ಯಾಂಕ್ಗಳ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆದ ಸಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರದ ಆದೇಶದಂತೆ 3 ಲಕ್ಷ ಕೋಟಿ ರೂ. ಕೋವಿಡ್-19 ತುರ್ತು ಪರಿಸ್ಥಿತಿ ಪ್ಯಾಕೇಜ್ ಆಗಿ ಘೋಷಣೆ ಮಾಡಲಾಗಿದೆ ಎಂದರು. ಕಿಸಾನ್ ಕ್ರೆಡಿಟ್ ಹೊಂದಿರುವ, ಅವಶ್ಯವಿರುವ ರೈತರು ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಯಾವುದೇ ಮೇಲಾಧಾರ ವಿಲ್ಲದೆ ಸಾಲ ನೀಡಬೇಕು.
ಪಶುಸಂಗೋಪನೆ ಹಾಗೂ ಮೀನುಗಾರಿಕೆಗೆ ಹಣಕಾಸಿನ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ಗಳು ಮುಂದಾಗಬೇಕು ಎಂದರು. ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲಾದ್ಯಂತ ಎಲ್ಲಾ ಬ್ಯಾಂಕ್ಗಳಲ್ಲಿ ಉಳಿದ ಯೋಜನೆಗಳ ಅರ್ಜಿಗಳನ್ನು ಸಕಾಲಕ್ಕೆ ಜಾರಿಗೊಳಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ರೈತರಿಗೆ ವ್ಯವಸಾಯಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗಬೇಕು. ಬಿತ್ತಿಪತ್ರಗಳನ್ನು ಪಂಚಾಯಿತಿ,
ನಾಡ ಕಚೇರಿ ಸೇರಿದಂತೆ ವಿವಿಧೆಡೆಯಲ್ಲಿ ಅಂಟಿಸುವುದ ರೊಂದಿಗೆ ಜಾಹೀರಾತು ನೀಡಬೇಕು. ಇದರಿಂದ ಸಮಾಜದಲ್ಲಿ ಸಣ್ಣ ರೈತರು ಅಭಿವೃದಿಯಾಗಲು ಸಾಧ್ಯ ವಾಗುತ್ತದೆ. ಬ್ಯಾಂಕ್ ಗಳು ಒಗ್ಗೂಡಿ ಕೆಲಸ ಮಾಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ್, ಜಿಲ್ಲಾ ಕೈಗಾರಿಕಾ ಕೇಂದ್ರ ವ್ಯವಸ್ಥಾಪಕ ಅತಿಕುಲ್ಲಾ ಷರೀಫ್, ನಬಾರ್ಡ್ನ ಜಿಲ್ಲಾ ವ್ಯವಸ್ಥಾಪಕ ಶಂಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ