ಟೈರ್ ಕಳ್ಳರನ್ನು ಹಿಡಿದು ತಂದು ವಾಪಸ್ಸು ಕಳಿಸಿದ್ರು!
ಕಳವು ಪ್ರಕರಣದಲ್ಲಿ ಬಂಧಿಸಿದ್ದರೂ ಪ್ರಕರಣ ದಾಖಲಿಸದೇ ಬಿಟ್ಟಿರುವ ಆರೋಪ
Team Udayavani, May 6, 2020, 2:07 PM IST
ಚಿಕ್ಕಬಳ್ಳಾಪುರ ನಗರ ಠಾಣೆ ಆವರಣದಲ್ಲಿ ಪೇದೆ ಹರೀಶ್ ನಿಲ್ಲಿಸಿ ಹೋಗಿರುವ ಲಾರಿಯೊಂದು ಪೊಲೀಸರ ಅಕ್ರಮ ಬಯಲು ಮಾಡಿದೆ.
ಚಿಕ್ಕಬಳ್ಳಾಪುರ: ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು. ಲಕ್ಷಾಂತರ ರೂ. ಮೌಲ್ಯದ ಲಾರಿ ಟೈರುಗಳ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಚೇತನ್ ಕುಮಾರ್ ಮಾರ್ಗದರ್ಶನದಲ್ಲಿ ಠಾಣೆ ಅಪರಾಧ ವಿಭಾಗದ ಪೇದೆಗಳಾದ ಹರೀಶ್, ರಮಣಾರೆಡ್ಡಿ ಮತ್ತಿತರ ತಂಡ ಹಲವು ದಿನಗಳ ಹಿಂದೆ ಬಂಧಿಸಿದ್ದು, ತದ ನಂತರ ಪ್ರಕರಣ ದಾಖಲಿಸದೇ ಆರೋಪಿಗಳೊಂದಿಗೆ ಶಾಮೀಲಾಗಿ ಠಾಣೆಯಿಂದ ಬಿಟ್ಟು ಕಳುಹಿಸಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.
ಲಾರಿ ತಂದು ನಿಲ್ಲಿಸಿದ್ದು ಅನುಮಾನ: ಕಳೆದ ಮಾ.23 ರಂದು ಪೇದೆ ಹರೀಶ್ ಕೆಎ-40, ಎ.8858 ಹತ್ತು ಚಕ್ರದ ಲಾರಿಯನ್ನು ನಗರ ಠಾಣೆ ಆವರಣದಲ್ಲಿ ತಂದು ನಿಲ್ಲಿಸಿ ಹೋದಾಗ ಮಾಲೀಕರು ಬಂದು ಲಾರಿ ಬಿಡುವಂತೆ ಕೇಳಿದಾಗ ಈ ಟೈರು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಇಡೀ ಘಟನೆಯ ಪ್ರಮುಖ ಸೂತ್ರಧಾರಿ ಹರೀಶ್ ಎಂಬಾತನಾಗಿದ್ದು, ಅದಕ್ಕೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಗ್ರಾಮಾಂತರ ಠಾಣೆ ಪಿಎಸ್ಐ ಚೇತನ್ ಕುಮಾರ್ ಟೈರು ಕಳವು ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆ ತಂದು ಬಳಿಕ ಅವರೊಂದಿಗೆ ಶಾಮೀಲಾಗಿ
ಬಿಡುಗಡೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ವರದಿ ಕೇಳಿದ ಎಸ್ಪಿ: ಬಂಧಿಸಿದ್ದ ಕಳ್ಳರ ಮೇಲೆ ಯಾವುದೇ ಪ್ರಕರಣ ದಾಖಲಿಸದೇ ಅವರನ್ನು ಠಾಣೆಯಿಂದ ಬಿಡುಗೊಳಿಸಿದ ವಿಷಯದ ಬಗ್ಗೆ ಎಸ್ಪಿ ಜಿ. ಕೆ.ಮಿಥುನ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ.
ತನಿಖೆ: ಈ ಕುರಿತು ಉದಯವಾಣಿ, ಎಸ್ಪಿ ಜಿ.ಕೆ. ಮಿಥುನ್ ಕುಮಾರ್ರನ್ನು ಸಂಪರ್ಕಿಸಿದಾಗ ಅವರು, ಈ ಬಗ್ಗೆ ಮಾಹಿತಿ ನನ್ನ ಗಮನಕ್ಕೂ ಬಂದಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆ ವರದಿ ಬಂದ ಬಳಿಕ ಸಮಗ್ರ ಮಾಹಿತಿ ತಿಳಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ