ಗ್ರಾಪಂ: ಜಿಲ್ಲೆಯಲ್ಲಿ ಶೇ.89.42 ಮತದಾನ
Team Udayavani, Dec 23, 2020, 3:47 PM IST
ಶಿಡ್ಲಘಟ್ಟ ಕ್ಷೇತ್ರದ ಮಾಜಿ ಶಾಸಕ ಎಂ.ರಾಜಣ್ಣ ಎಲ್.ಮುತ್ತುಕದಳ್ಳಿಯಲ್ಲಿ ಮತದಾನ ಮಾಡಿದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಂಗಳವಾರ ನಡೆದ ಗ್ರಾಪಂ ಚುನಾವಣೆ ಸಣ್ಣ ಪುಟ್ಟ ಘಟನೆಗಳು ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ.89.42 ಮತದಾನವಾಗಿದೆ.
ಶಿಡ್ಲಘಟ್ಟ, ಬಾಗೇಪಲ್ಲಿ ಹಾಗೂ ಚಿಂತಾಮಣಿ ತಾಲೂಕುಗಳಲ್ಲಿ 84 ಗ್ರಾಪಂಗಳ 1,288 ಸ್ಥಾನಗಳಿಗೆ ನಡೆದ ಚುನಾವಣೆಗೆ 720 ಮತಗಟ್ಟೆ ತೆರೆಯಲಾಗಿತ್ತು. ಬೆಳಗ್ಗೆ 7ರಿಂದ ಮತದಾನ ಆರಂಭಗೊಂಡು ಸಂಜೆ 5ಗಂಟೆ ವರೆಗೆ ಮತದಾನ ಮಾಡಿದರು.
ಗ್ರಾಪಂ ಚುನಾವಣೆಗೆ ಯಾವುದೇ ರೀತಿಯ ರಾಜಕೀಯ ಚೆನ್ಹೆ ಇಲ್ಲದಿದ್ದರೂ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.
ಥರ್ಮಲ್ ಸ್ಕ್ರೀನಿಂಗ್: ಕೆಲವರು ಆಟೋ ಮತ್ತು ಕಾರು ಗಳ ಮೂಲಕ ಮತದಾರರನ್ನು ಕರೆತಂದು ಮತದಾನ ಮಾಡುತ್ತಿದ್ದ ದೃಶ್ಯಗಳು ಕಂಡುಬಂದಿತು. ಮತಗಟ್ಟೆ ಕೇಂದ್ರಗಳ ಬಳಿ ಆಶಾ ಕಾರ್ಯಕರ್ತರು ಮತದಾರರಿಗೆ ಥರ್ಮಲ್ ಸ್ಕ್ಯಾನರ್ ಮೂಲಕ ಆರೋಗ್ಯ ತಪಾಸಣೆಮಾಡಿ ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸುವ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಟ್ಟರು. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ 25 ಗ್ರಾಪಂಗಳ380 ಸ್ಥಾನ, ಶಿಡ್ಲಘಟ್ಟ ತಾ.24 ಗ್ರಾಪಂಗಳ 352 ಸ್ಥಾನ, ಚಿಂತಾಮಣಿ ತಾ.35 ಗ್ರಾಪಂಗಳ 556 ಸ್ಥಾನಗಳಿಗೆ ಶಾಂತಿಯುತವಾಗಿ ಚುನಾವಣೆ ನಡೆದಿದೆ.
ಹಾಲಿ-ಮಾಜಿ ಶಾಸಕರಿಂದ ಮತದಾನ: ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರು ತಮ್ಮ ಪತ್ನಿರತ್ನಮ್ಮ ಅವರೊಂದಿಗೆ ಸ್ವಗ್ರಾಮ ಹಂಡಿಗನಾಳ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರು. ಅದೇ ರೀತಿ ಮಾಜಿ ಶಾಸಕ ಎಂ.ರಾಜಣ್ಣ ಅವರು ಅವರ ಪತ್ನಿ ಶಿವಲೀಲಾ ಮತ್ತು ಪುತ್ರಿಯೊಂದಿಗೆ ಸ್ವಗ್ರಾಮ ಎಲ್.ಮುತ್ತುಕದಹಳ್ಳಿ ಮತಗಟ್ಟೆಕೇಂದ್ರದಲ್ಲಿ ಮತದಾನ ಮಾಡಿದರು.
ಶತಾಯುಷಿಗಳಿಂದ ಮತದಾನ: ಬೆಳಗ್ಗೆ 7 ರಿಂದ 9ರ ತನಕ ಆಮೆಗತಿಯಲ್ಲಿ ನಡೆದರೂ ಸಹ ತದನಂತರ ಉತ್ಸಾಹದಿಂದ ಮತದಾನ ಮಾಡಿದರು.ಶಿಡ್ಲಘಟ್ಟ ತಾ.ಆನೂರು ಗ್ರಾಪಂನ ಬೆಳ್ಳೂಟಿ ಗ್ರಾಮದಲ್ಲಿಶತಾಯುಷಿ ನಂಜಮ್ಮ ಹಾಗೂ ಮುನಿಶಾಮಪ್ಪಕುಟುಂಬ ಸದಸ್ಯರೊಂದಿಗೆ ಬಂದು ಹಕ್ಕು ಚಲಾಯಿಸಿದರು. ಬೆಳ್ಳೂಟಿ ಗ್ರಾಮದಲ್ಲಿ ಮತದಾನ ಮಾಡಲು ಬಂದ ಮತದಾರರಿಗೆ ಮಾಸ್ಕ್, ಎಲೆ, ಅಡಕೆ ನೀಡಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು