ಬೆಲೆ ಕುಸಿಯುವ ಭೀತಿಯಲ್ಲಿ ದ್ರಾಕ್ಷಿ ಬೆಳೆಗಾರರು


Team Udayavani, Mar 18, 2020, 3:00 AM IST

bele-drakshi

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ವೈರಸ್‌ ಭೀತಿಗೆ ಈಗಾಗಲೇ ಕುಕ್ಕುಟೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿರುವಾಗಲೇ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಲ್ಲಿ ಕೊರೊನಾ ವೈರಸ್‌ ಬೆಲೆ ಕುಸಿತದ ಭೀತಿ ಸೃಷ್ಟಿಸಿದ್ದು, ಕಟಾವುಗೆ ಸಿದ್ಧವಾಗಿ ಈಗಷ್ಟೇ ಮಾರುಕಟ್ಟೆ ಪ್ರವೇಶಿಸುತ್ತಿರುವ ದ್ರಾಕ್ಷಿ ವಿದೇಶಕ್ಕೆ ರಫ್ತಾಗದೇ ಬೆಲೆ ಕುಸಿಯುವ ಆತಂಕ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಲ್ಲಿ ಆವರಿಸಿದೆ.

ರಾಜ್ಯದಲ್ಲಿಯೇ ಅತ್ಯಧಿಕ ಪ್ರಮಾಣದಲ್ಲಿ ದ್ರಾಕ್ಷಿ ಬೆಳೆಯುವುದಕ್ಕೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಬರೋಬ್ಬರಿ 2,300 ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ. ಕೆಲವು ಕಡೆ ಕಟಾವು ಆರಂಭಗೊಂಡು ಮಾರುಕಟ್ಟೆಗೆ ಬರುತ್ತಿದ್ದೆ ಮತ್ತೆ ಕೆಲವು ಕಡೆ ಕಟಾವು ಆರಂಭಗೊಳ್ಳಲು ದಿನಗಣನೆ ಶುರುವಾಗಿದೆ. ಆದರೆ ರೈತರಿಗೆ ಮಾತ್ರ ನಿರೀಕ್ಷಿತ ಬೆಲೆ ಸಿಗುತ್ತಾ? ಹಾಕಿದ ಬಂಡವಾಳ ಕೈ ಸೇರುತ್ತಾ ಎನ್ನುವ ಆತಂಕ ಕೊರೊನಾ ವೈರಸ್‌ ಸೃಷ್ಟಿಸಿದೆ.

ರೈತರಲ್ಲಿ ಬೆಲೆ ಕುಸಿತದ ಆತಂಕ ಏಕೆ?: ಜಿಲ್ಲೆಯಲ್ಲಿ ಬೆಳೆಯುವ ಸೀಡ್‌ಲೆಸ್‌ ದ್ರಾಕ್ಷಿ, ದಿಲ್‌ಖುಷ್‌ ಹಾಗೂ ಅನಾಬಿ ಮತ್ತಿತರ ತರಹೇವಾರಿ ದ್ರಾಕ್ಷಿ ಅಂತಾರಾಷ್ಟ್ರೀಯ ಗಮನ ಸೆಳೆದಿದೆ. ವಿಶೇಷವಾಗಿ ನೆರೆಯ ಬಾಂಗ್ಲಾ ದೇಶಕ್ಕೆ ಜಿಲ್ಲೆಯ ದ್ರಾಕ್ಷಿ ವ್ಯಾಪಕ ಪ್ರಮಾಣದಲ್ಲಿ ರಫ್ತು ಆಗುತ್ತದೆ. ನೆರೆಯ ಕೇರಳ ರಾಜ್ಯಕ್ಕೂ ಜಿಲ್ಲೆಯ ದ್ರಾಕ್ಷಿ ಪೂರೈಕೆ ಆಗುತ್ತದೆ. ಆದರೆ ಹಲವು ತಿಂಗಳಿಂದ ಭಾರತ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿ ಇಡೀ ಮಾರುಕಟ್ಟೆ ವ್ಯವಸ್ಥೆ ತಲ್ಲಣಗೊಂಡಿದೆ.

ಬೆಲೆ ಕುಸಿತ ಸಾಧ್ಯತೆ: ಹಲವು ರಾಷ್ಟ್ರಗಳು ಲಾಕ್‌ಔಟ್‌ ಘೋಷಿಸಿ ಶಟ್‌ಡೌನ್‌ಗೆ ಮುಂದಾಗಿರುವುದರಿಂದ ಜಿಲ್ಲೆಯ ದ್ರಾಕ್ಷಿ ಬಾಂಗ್ಲಾಗೆ ರಫ್ತು ಆಗುವುದು ಕುಸಿದರೆ ಏನು ಗತಿ ಎಂಬ ಆತಂಕ ಜಿಲ್ಲೆಯ ದ್ರಾಕ್ಷಿ ಬೆಳೆಗಾರರದ್ದಾಗಿದೆ. ಕಳೆದ ವರ್ಷ ಉತ್ತಮ ಫ‌ಸಲು ಬಂದರೂ ಅಕಾಲಿಕ ಮಳೆ, ಅಲಿಕಲ್ಲು ಮಳೆಗೆ ದ್ರಾಕ್ಷಿ ನೆಲಕಚ್ಚಿ ಕಚ್ಚಿ ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದೇ ದ್ರಾಕ್ಷಿ ಬೆಳೆಗಾರರು ತೀವ್ರ ನಷ್ಟ ಅನುಭವಿಸಿದರು. ಆದರೆ ಈ ಬಾರಿ ಕೂಡ ಉತ್ತಮ ಇಳುವರಿ ಬಂದಿದ್ದು, ಉತ್ತಮ ಬೆಲೆ ನಿರೀಕ್ಷಿಸಿದ್ದರೂ ಕೊರೊನಾ ವೈರಸ್‌ನಿಂದ ಬೆಲೆ ಕೈಕೊಡುವ ಸಾಧ್ಯತೆ ದಟ್ಟವಾಗಿದೆ.

ರಫ್ತು ನಿಂತರೆ ಸಂಕಷ್ಟ: ದೇಶದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಹಾಗೂ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕು ಹಾಗೂ ರಾಜ್ಯದ ಬಾಗಲಕೋಟೆ, ವಿಜಾಪುರ ಜಿಲ್ಲೆಗಳಲ್ಲಿ ಮಾತ್ರ ದ್ರಾಕ್ಷಿ ಬೆಳೆಯಲಾಗುತ್ತಿದೆ. ಆದರೆ ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾ ಮಾರುಕಟ್ಟೆಗೆ ರಫ್ತು ಆಗುವುದು ನಿಂತರೆ ದ್ರಾಕ್ಷಿ ಬೆಳೆಗಾರರ ಪರಿಸ್ಥಿತಿ ಏನು ಎಂಬ ಆತಂಕ ರೈತರದ್ದಾಗಿದೆ.

ಎರಡು ವರ್ಷಗಳಿಂದ ಬೆಲೆ ಕುಸಿತ, ಮತ್ತೂಂದೆಡೆ ಪ್ರಕೃತಿ ವಿಕೋಪಕ್ಕೆ ಸಿಲುಕಿ ದ್ರಾಕ್ಷಿ ನಾಶವಾಗಿ ರೈತರು ಸಂಕಷ್ಟ ಅನುಭವಿಸಿಕೊಂಡು ಬರುತ್ತಿದ್ದು, ಈ ವರ್ಷ ದ್ರಾಕ್ಷಿ ಹೇರಳವಾಗಿ ಬೆಳೆದಿದ್ದರೂ ಅದು ಹೊರ ದೇಶಗಳಿಗೆ ರಫ್ತು ಆಗುತ್ತಾ ಇಲ್ಲವೋ ಎನ್ನುವ ಆತಂಕದಲ್ಲಿ ಬೆಳೆಗಾರರಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹೇಳುವ ಪ್ರಕಾರ ಕೇರಳಕ್ಕೆ ದ್ರಾಕ್ಷಿ ಪೂರೈಕೆ ಕಡಿಮೆ ಆಗಲಿದೆ. ಜೊತೆಗೆ ಬಾಂಗ್ಲಾ ದೇಶ ಕೂಡ ವಿವಿಧ ವಸ್ತುಗಳ ಆಮದು ಮಾಡಿಕೊಳ್ಳುವುದು ಸ್ಥಗಿತಗೊಳಿಸಿದರೆ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಮೇಲೆ ಸಾಕಷ್ಟು ಪರಿಣಾಮ ಬೀರುವುದು ನಿಶ್ಚಿತ.

ಕೊರೊನಾ ವೈರಸ್‌ ಭೀತಿ ಎಲ್ಲದರ ಮೇಲೆಯು ಪರಿಣಾಮ ಬೀರಿದೆ. ಜಿಲ್ಲೆಯಲ್ಲಿ ಬೆಳೆಯುವ ದ್ರಾಕ್ಷಿ ಏಪ್ರಿಲ್‌ ತಿಂಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದೆ. ಜಿಲ್ಲೆಯ ದ್ರಾಕ್ಷಿ ಬಾಂಗ್ಲಾ ಹಾಗೂ ಕೇರಳಕ್ಕೆ ಹೆಚ್ಚು ರಫ್ತು ಆಗುವುದರಿಂದ ಕೊರೊನಾ ವೈರಸ್‌ ಹರಡುವ ಭೀತಿಯಿಂದ ಬಾಂಗ್ಲಾಗೆ ಜಿಲ್ಲೆಯಿಂದ ದ್ರಾಕ್ಷಿ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುವುದು ಅನುಮಾನ ಹಾಗೂ ಬೆಲೆ ಕುಸಿಯುವ ಸಾಧ್ಯತೆ ಇದೆ.
-ಕುಮಾರಸ್ವಾಮಿ, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ

ದ್ರಾಕ್ಷಿ ಸೇವನೆ ಮಾಡಿದರೆ ಕೊರೊನಾ ವೈರಸ್‌ ತಡೆಯುವ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಆದರೆ ಕೊರೊನಾ ಹರಡುವ ಭೀತಿಯಿಂದ ದ್ರಾಕ್ಷಿ ದೇಶದ ರಫ್ತು ಮಾರುಕಟ್ಟೆ ಮೇಲೆ ಪರಿಣಾಮ ಬೀರುವುದರಿಂದ ಜಿಲ್ಲೆಯಲ್ಲಿ ಬೆಳೆಯುವ ದ್ರಾಕ್ಷಿ ಸಾಗಾಟ ಹಾಗೂ ಮಾರಾಟವಾಗದೇ ಬೆಲೆ ಕುಸಿಯುವ ಸಾಧ್ಯತೆ ಇದೆ.
-ಆರ್‌.ಆಂಜನೇಯರೆಡ್ಡಿ, ದ್ರಾಕ್ಷಿ ಬೆಳೆಗಾರರು, ನಾಯನಹಳ್ಳಿ

ಎರಡು ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದಿದ್ದೇವೆ. ಕಟಾವುಗೆ ಇನ್ನೂ 15, 20 ದಿನ ಹೋಗಬೇಕು. ಆದರೆ ನಮ್ಮ ದ್ರಾಕ್ಷಿ ಬಹುತೇಕ ಬಾಂಗ್ಲಾಗೆ ರಫ್ತು ಆಗುವುದರಿಂದ ಸದ್ಯ ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ದೇಶದಲ್ಲಿ ದ್ರಾಕ್ಷಿ ರಫ್ತು ಆಗುವ ಅನುಮಾನ ಇದೆ. ಹೀಗಾಗಿ ದ್ರಾಕ್ಷಿ ಬೆಳೆ ಕುಸಿದರೆ ನಮಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತದೆ. ಸರ್ಕಾರ ದ್ರಾಕ್ಷಿ ಬೆಳೆಗಾರರಿಗೆ ತೊಂದರೆ ಆಗದಂತೆ ರಫ್ತುಗೆ ಸೂಕ್ತ ಕ್ರಮ ವಹಿಸಬೇಕು
-ಚೆನ್ನಕೃಷ್ಣ, ಇಂಟಪ್ಪನಹಳ್ಳಿ, ದ್ರಾಕ್ಷಿ ಬೆಳೆಗಾರರು

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.