ಸ್ಪರ್ಧಾತ್ಮಕ ಜ್ಞಾನದಿಂದ ಉತ್ತಮ ಭವಿಷ್ಯ
Team Udayavani, Feb 23, 2021, 3:21 PM IST
ಗೌರಿಬಿದನೂರು: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇಆಸಕ್ತಿಯಿಂದ ಕಲಿಕೆಯ ಜತೆಗೆ ಬದುಕಿಗೆ ಆಸರೆಯಾಗುವಸ್ಪರ್ಧಾತ್ಮಕ ಜ್ಞಾನ ಹಾಗೂ ಉನ್ನತ ಮಟ್ಟದ ಶಿಕ್ಷಣ ಪಡೆದು ಸಮುದಾಯದ ಏಳಿಗೆಗೆ ಸಹಕಾರಿಯಾಗಬೇಕೆಂದು ಎಂದು ಜಿಪಂ ಸದಸ್ಯೆ ಸರಸ್ವತಮ್ಮ ಅಶ್ವತ್ಥ ನಾರಾಯಣಗೌಡ ತಿಳಿಸಿದರು.
ಕುರೂಡಿಯಲ್ಲಿ ನಂದಗೋಕುಲ ಯಾದವ ಸಂಘದಿಂದ ಆಯೋಜಿಸಿದ್ದ 2019-20 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ತಾಲೂಕಿನ ಬಹುತೇಕ ಗ್ರಾಮದಲ್ಲಿ ಸಮುದಾಯದವರು ವಾಸವಾಗಿದ್ದು, ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಾಮಾಜಿಕ,ಶೈಕ್ಷಣಿಕ, ರಾಜಕೀಯ, ಆರ್ಥಿಕ ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಲು ಪ್ರಾಮಾಣಿಕವಾಗಿ ಶ್ರಮಿಸ ಬೇಕಾಗಿದೆ ಎಂದರು.
ಕರ್ನಾಟಕ ಯಾದವ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ್ ಮಾತನಾಡಿ, ಸಮುದಾಯವು ಎಲ್ಲ ಆಯಾಮಗಳಲ್ಲಿ ಅಭಿವೃದ್ಧಿಯಾಗಬೇಕಾದರೆ ಯುವಕರಜವಾಬ್ದಾರಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ ಮತ್ತುಸಹಕಾರದೊಂದಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾ ತಂಡಗಳೊಂದಿಗೆ ಶ್ರೀಕೃಷ್ಣಭಾವಚಿತ್ರವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು. ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು.ತಾಲೂಕು ಘಟಕದ ಅಧ್ಯಕ್ಷ ವೈ.ಆ.ಅಂಬರೀಶ್, ಮುಖಂಡರಾದ ಟಿ.ಪಿ.ರಾಮಯ್ಯ, ಬಿ.ಪಿ. ಅಶ್ವತ್ಥನಾರಾಯಣಗೌಡ, ಬಿ.ಕೆ. ನಾರಾಯಣಸ್ವಾಮಿ, ಆ.ಮುನಿಲಕ್ಷ್ಮಮ್ಮ, ಹರಿಕೃಷ್ಣ ಯಾದವ್, ನವೀನ್ ಯಾದವ್, ಚಂದ್ರಶೇಖರ್, ಬೆಟ್ಟಸ್ವಾಮಿ, ರಾಮ ಚಂದ್ರ, ಸಿ.ಡಿ.ನರಸಿಂಹಮೂರ್ತಿ, ಸಿದ್ದಗಂಗಪ್ಪ, ಎನ್. ಬಾಲಪ್ಪ, ಸುನೀಲ್, ಮೋಹನ್ ಕುಮಾರ್, ಈರಣ್ಣ, ಮುನಿ ಕೃಷ್ಣ, ಎಂ.ಕೆ. ನಾರಾಯಣಪ್ಪ, ಯರ್ರಗುಂಟೆ ಕೃಷ್ಣ, ಮುತ್ತೇಗೌಡ, ಪ್ರಕಾಶ್, ವಿಶ್ವನಾಥ್, ನರಸಿಂಹಮೂರ್ತಿ, ರಾಜೇಶ್ವರಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ