500 ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಹಸಿರು ಹೊದಿಕೆ


Team Udayavani, Mar 22, 2022, 3:48 PM IST

500 ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಹಸಿರು ಹೊದಿಕೆ

ಚಿಕ್ಕಬಳ್ಳಾಪುರ: ಅಂತಾರಾಷ್ಟ್ರೀಯ ಅರಣ್ಯದಿನದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕ್ಲೀನ್‌ ಅಂಡ್‌ ಗ್ರೀನ್‌ ಮಾಡಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ.

ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಮಾಡಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿದರೂ ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ಅರಣ್ಯವನ್ನು ಲೂಟಿ ಮಾಡುತ್ತಿದ್ದಾರೆ. ಇನ್ನೂ ಹಲವರು ಅಭಿವೃದ್ಧಿ ಹೆಸರಿ ನಲ್ಲಿ ಸಮೃದ್ಧವಾಗಿ ಬೆಳೆದಿರುವ ಗಿಡ-ಮರಗಳನ್ನು ಕಡಿದು ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ಸಂಪತ್ತು ಉಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೂ ಜಿಲ್ಲೆಯಲ್ಲಿ ಅರಣ್ಯ ಸಂಪತ್ತು ಉಳಿಸುವ ಸಲುವಾಗಿ ಒಂದು ಅಭಿ ಯಾನವನ್ನು ನಡೆಸುವುದು ಅನಿವಾರ್ಯವಾಗಿದೆ.

ಹಸಿರು ಹೊದಿಕೆ: ಇಂಡಿಯನ್‌ ಸ್ಟೇಟ್‌ ಆಫ್ ಫಾರೆಸ್ಟ್‌ ರಿಪೋರ್ಟ್‌-2021 ಪ್ರಕಾರ 2 ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ಸುಮಾರು 500 ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಹಸಿರು ಹೊದಿಕೆ (ಫಾರೆಸ್ಟ್‌ ಕವರ್‌) ಪ್ರಮಾಣ ಹೆಚ್ಚಿಸಲಾಗಿದೆ.

ಜಿಲ್ಲೆಯು ಒಟ್ಟು 4045.00 ಕಿ.ಮೀ. ಪ್ರದೇಶವನ್ನು ಹೊಂದಿದ್ದು, ಅದರಲ್ಲಿ 684.32 ಕಿ.ಮೀ (ಶೇ.16.9) ಅರಣ್ಯ ಪ್ರದೇಶವಿದೆ. ಇದರಲ್ಲಿ ಪ್ರಮುಖವಾಗಿ ಚಿಕ್ಕ ಬಳ್ಳಾಪುರ ವಲಯದ ನರಸಿಂಹದೇವರ ಬೆಟ್ಟ, ನಂದಿ ಬೆಟ್ಟ ಶಿಡ್ಲಘಟ್ಟ ವಲಯದಲ್ಲಿ ತಲಕಾಯಲಬೆಟ್ಟ, ಚಿಂತಾಮಣಿ ವಲಯದ ಕೈವಾರ, ಕೈಲಾಸಗಿರಿ, ಕಾಡುಮಲ್ಲೇಶ್ವರ ಬೆಟ್ಟ, ಅಂವಾಜಿದುರ್ಗ ಬೆಟ್ಟ, ಬಾಗೇಪಲ್ಲಿ ವಲಯದ ಇಟಕಲ್‌ ದುರ್ಗ, ಗುಮ್ಮ ನಾಯಕನ ಪಾಳ್ಯ, ಗೌರೀಬಿದನೂರು ವಲಯದ ಭೀಮೇಶ್ವರ ಬೆಟ್ಟ, ಎಮ್ಮೆಗುಡ್ಡ, ಕುರುಡಿ ಹಾಗೂ ಗುಡಿ ಬಂಡೆ ವಲಯದಲ್ಲಿ ಎಲ್ಲೋಡು ಅರಣ್ಯ ಪ್ರದೇಶ ಗಳಿವೆ. ಇಲ್ಲಿ ಹಲವಾರು ವನ್ಯಜೀವಿಗಳು, ಪ್ರಾಣಿ ಪಕ್ಷಿ ಸಂಕುಲಗಳಿದ್ದು, ಪ್ರಾಕೃತಿಕ ಸೌಂದರ್ಯವನ್ನು ಹೆಚ್ಚಿಸುತ್ತಿದೆ.

ಪ್ರವಾಸಕ್ಕೂ ಅನುಕೂಲ: ಚಿಕ್ಕಬಳ್ಳಾಪುರ ವಲಯ ವ್ಯಾಪ್ತಿಯಲ್ಲಿನ ಸ್ಕಂದಗಿರಿ, ನಂದಿಬೆಟ್ಟ, ಆವಲಬೆಟ್ಟ ಮತ್ತು ಚಿಂತಾಮಣಿ ವಲಯದ ಕೈವಾರ ಪ್ರದೇಶಗಳು ಚಾರಣ (ಟ್ರಕ್ಕಿಂಗ್‌) ಪ್ರದೇಶವಾಗಿದ್ದು, ವಿವಿಧ ಕಡೆ ಗಳಿಂದ ಸದರಿ ಪ್ರದೇಶಗಳಿಗೆ ಚಾರಣಾರ್ಥಿಗಳಾಗಿ ಬಂದು ಪ್ರಾಕೃತಿಕ ಸೌಂದರ್ಯವನ್ನು ಸವಿಯುತ್ತಿ ದ್ದಾರೆ, ಚಿಕ್ಕಬಳ್ಳಾಪುರ ವಲಯ ವ್ಯಾಪ್ತಿಯಲ್ಲಿ ಕೇತೇನಹಳ್ಳಿ, ಚನ್ನಗಿರಿ ಫಾಲ್ಸ್‌ನಲ್ಲಿ ಮಳೆಗಾಲದಲ್ಲಿ ಹೆಚ್ಚಿನ ನೀರು ಮೇಲಿಂದ ಹರಿದು ಬಂದು ಫಾಲ್ಸ್‌ ನನ್ನು ನೋಡಲು ಹೆಚ್ಚು ಜನರು ಆಗಮಿಸುತ್ತಿದ್ದಾರೆ.

ದಂಡಿಗಾನಹಳ್ಳಿ, ಜಕ್ಕಲಮಡಗು, ಶ್ರೀನಿವಾಸಕೆರೆ, ಗುಡಿಬಂಡೆ ಕೆರೆ ವ್ಯಾಪ್ತಿಗೆ ಸುತ್ತಮುತ್ತಲ ಅರಣ್ಯ ಪ್ರದೇಶಗಳಿಂದ ಹರಿದು ಬಂದ ನೀರು ಸಂಗ್ರಹವಾಗಿ ಸುತ್ತಮುತ್ತಲಿನ ನಗರ/ಗ್ರಾಮೀಣ ಪ್ರದೇಶಗಳ ಜನರಿಗೆ ಕುಡಿವ ನೀರು ಸರಬರಾಜಾಗುತ್ತಿದೆ ನಗರ ಪ್ರದೇಶದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಮಾಹಿತಿ ಮತ್ತು ಹೆಚ್ಚಿನ ಅರಿವು ಮೂಡಿ ಸುವ ಸಲುವಾಗಿ ನಗರ ಪ್ರದೇಶಕ್ಕೆ ಹೊಂದಿ ಕೊಂಡಂತಿರುವ ಅರಣ್ಯ ಪ್ರದೇಶಗಳಾದ ಚಿಂತಾಮಣಿ ವಲಯ ವ್ಯಾಪ್ತಿಯಲ್ಲಿರುವ ಕೈವಾರ ತಪೋವನ, ಕಾಡುಮಲ್ಲೇಶ್ವರ ಬೆಟ್ಟ, ಗಡಿಗವಾರಹಳ್ಳಿ, ಚಿಕ್ಕಬಳ್ಳಾ ಪುರ ವಲಯದ ಸುಲಾಪ್ಪನದಿನ್ನೆ ಅರಣ್ಯ ಪ್ರದೇಶ ಸೇರಿದಂತೆ ವಿವಿಧೆಡೆ ಸಸ್ಯೋದ್ಯಾನ/ದೇವರಕಾಡು ನಿರ್ಮಿಸಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ 2017-18ನೇ ಸಾಲಿನಲ್ಲಿ ಒಟ್ಟು ಎಲ್‌ಪಿಜಿ ಗ್ಯಾಸ್‌ ಮತ್ತು ಸ್ಟೌವುಗಳನ್ನು ಫಲಾನುಭವಿಗಳಿಗೆ ವಿತರಿಸಿದ್ದು, 2021-22ನೇ ಸಾಲಿನಲ್ಲಿ ಎಸ್‌.ಸಿ.ಪಿ ಯೋಜನೆಯಡಿ 36 ಫಲಾನು ಭವಿಗಳಿಗೆ ಮತ್ತು ಟಿ.ಎಸ್‌.ಪಿ ಯೋಜನೆಯಡಿ 58 ಫಲಾನುಭವಿಗಳಿಗೆ ಉಚಿತವಾಗಿ ಗ್ಯಾಸ್‌ ಸಿಲಿಂಡರ್‌ ಗಳನ್ನು ವಿತರಣೆ ಮಾಡಲಾಗಿದೆ.

ರೈತರಿಗೆ ಸಸಿಗಳ ವಿತರಣೆ : ಚಿಕ್ಕಬಳ್ಳಾಪುರ ಪ್ರಾದೇಶಿಕ ಅರಣ್ಯ ವಿಭಾಗದಿಂದ 2021-22ನೇ ಸಾಲಿನಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಸಾರ್ವಜನಿಕರು/ ರೈತರ ಜಮೀನುಗಳಲ್ಲಿ ನಾಟಿ ಮಾಡಲು 341 ಫಲಾನುಭವಿಗಳಿಗೆ ಒಟ್ಟು 428044 ಸಸಿಗಳನ್ನು ವಿತರಿಸಿದ್ದು, ಪ್ರತಿ ಮೂರು ವರ್ಷಗಳು ಬದುಕುಳಿದ ಸಸಿಗಳಿಗೆ ಕ್ರಮವಾಗಿ ಮೊದಲನೆ ವರ್ಷ ರೂ. 35.00, ಎರಡನೇ ವರ್ಷ ರೂ. 45.00 ಹಾಗೂ ಮೂರನೆ ವರ್ಷ ರೂ. 45.00 ರಂತೆ ಪ್ರತಿ ಸಸಿಗೆ ಪ್ರೋತ್ಸಾಹ ಧನವನ್ನು ನೀಡಿ ಅರಣ್ಯ ಬೆಳೆಸಲು ಪ್ರೋತ್ಸಾಹಿಸಲಾಗುತ್ತಿದೆ. ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಯೋಜನೆಯಡಿಯಲ್ಲಿಯೂ 7000 ಸಸಿಗಳನ್ನು ಜನರಿಗೆ ರಿಯಾಯ್ತಿ ದರದಲ್ಲಿ ವಿತರಿಸಲಾಗುತ್ತಿದೆ.

ನೆಡುತೋಪುಗಳ ನಿರ್ಮಾಣ : ಚಿಕ್ಕಬಳ್ಳಾಪುರ ಪ್ರಾದೇಶಿಕ ಅರಣ್ಯ ವಿಭಾಗದಿಂದ ಅರಣ್ಯ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳಡಿ ನೆಡುತೋಪು ನಿರ್ಮಾಣ ಮತ್ತು ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಹಾಗೂ ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡುವ ಸಲುವಾಗಿ ಬೆಂಕಿ ನಿಯಂತ್ರಣ ಮಾಡಲು, ಅಕ್ರಮ ಸಾಗಾಣಿಕೆಗಳನ್ನು ತಡೆಯಲು, ವನ್ಯಜೀವಿಗಳ ರಕ್ಷಣಾ ಕಾರ್ಯ, ಅರಣ್ಯ ಪ್ರದೇಶಗಳ ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅರಣ್ಯ ಪ್ರದೇಶಗಳಿಗೆ ಮುಳ್ಳುತಂತಿ ಬೇಲಿ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.