40 ಸಾವಿರ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ
Team Udayavani, Dec 27, 2020, 7:52 PM IST
ಬಾಗೇಪಲ್ಲಿ: ಬ್ರಾಹ್ಮಣರಲ್ಲಿ ಬಡವರು ಮತ್ತು ಕಡುಬಡವರು ಇದ್ದಾರೆ ಎಂದು ಕೋವಿಡ್ ಲಾಕ್ಡೌನ್ ಸಮಯದಲ್ಲಿ ತಿಳಿದು ಬಂದಿದೆ. ಸಮುದಾಯದ ಪುರೋಹಿತರ, ಅಡುಗೆ ಭಟ್ಟರ ಪಟ್ಟಿ ತಯಾರಿಸಿ ಸುಮಾರು 40 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ನೀಡಲಾಯಿತು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ತಿಳಿಸಿದರು.
ಪಟ್ಟಣದ ಹೊರ ವಲಯದ ಗಡಿದಂ ಶ್ರೀ ಗಾಯತ್ರಿ ದೇವಾಲಯದ ಸಭಾಂಗಣದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾ ದಿಂದ ಆಯೋಜನೆ ಮಾಡಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಉತ್ತಮ ವ್ಯಾಸಂಗ ಮಾಡಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾಗಿದೆ ಎಂದರು.
ಬ್ರಾಹ್ಮಣ ಸಂಘದ ತಾಲೂಕು ಅಧ್ಯಕ್ಷ ಎಸ್.ಮುನಿರಾಮಯ್ಯ ಮಾತನಾಡಿ, ಬ್ರಾಹ್ಮಣರ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎಲ್ಲಾ ಸಮುದಾಯಗಳಂತೆ ಬ್ರಾಹ್ಮಣ ಸಮುದಾಯಕ್ಕೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡುವಂತೆ ಆದೇಶ ಮಾಡಿದ್ದಾರೆ. ವಿಪ್ರಸಮುದಾಯದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಶೇ.1.5 ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿಪಥದಲ್ಲಿ ಸಾಗಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 10% ಮೀಸಲಾತಿ ನೀಡಿರುವುದು ಸ್ವಾಗತಾರ್ಹ ಎಂದರು. ಬ್ರಾಹ್ಮಣ ಮಹಾಸಭಾ ಜಿಲ್ಲಾಧ್ಯಕ್ಷ ಅಬ್ಬೂರು ವೆಂಕಟೇಶಯ್ಯ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಪಾರಿತೋಷಕ, ಪಠ್ಯಪುಸ್ತಕ, ಬ್ಯಾಗ್, ಲೇಖನಿ ಸಾಮಗ್ರಿಗಳನ್ನು ನೀಡಿ ಪುರಸ್ಕರಿಸಿದರು.
ಸಂಘದ ತಾ.ಅಧ್ಯಕ್ಷ ಎಸ್.ಮುನಿರಾಮಯ್ಯ, ಉಪಾಧ್ಯಕ್ಷಡಿ.ಎಸ್.ಹನುಮೇಶ್, ಪ್ರ.ಕಾರ್ಯದರ್ಶಿ ಸಿ.ವೆಂಕಟರಾವ್, ಖಜಾಂಚಿ ಎನ್.ನಾಗರಾಜ್, ಸಹ ಕಾರ್ಯದರ್ಶಿ ಎಸ್.ವೇಣು,ಸಂಚಾಲಕ ಎಸ್. ನಾರಾಯಣರಾವ್, ಸಂಘಟನಾ ಕಾರ್ಯದರ್ಶಿ ಜಿ.ಲಕ್ಷ್ಮಿನಾರಾಯಣ, ಬಿ.ಎಸ್.ಕೃಷ್ಣ, ಪಿ.ಎಲ್.ನಾಗರಾಜರಾವ್, ವ್ಯವಸ್ಥಾಪಕ ಬಿ.ಎಸ್.ಸೀತಾರಾಮಯ್ಯ, ಜಂಟಿ ಸಂಘಟನಾಕಾರ ಎಸ್.ಎನ್.ನಂಜುಂಡರಾವ್, ಸಹ ಸಂಚಾಲಕ ಎಂ.ಆರ್. ನರಸಿಂಗರಾವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್