ಮೊದಲ ರಾತ್ರಿಯಂದೆ ಡೆತ್ನೋಟ್ ಬರೆದು ಸಾವಿಗೆ ಶರಣಾದ ವರ!
Team Udayavani, Feb 7, 2018, 10:59 AM IST
ಚಿಕ್ಕಬಳ್ಳಾಪುರ: ಮದುವೆಯ ಸಂಭ್ರಮದಲ್ಲಿರುವಾಗಲೆ ಮೊದಲ ರಾತ್ರಿಯಂದೆ ವರನೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಸೂಲಿಕುಂಟೆ ಎಂಬಲ್ಲಿ ಮಂಗಳವಾರ ನಡೆದಿದೆ.
ಸೋಮವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಬೆಸ್ಕಾಂ ಲೈನ್ ಮ್ಯಾನ್ ಮುನಿರಾಜು (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕಬಳ್ಳಾಪುರದ ಕಲ್ಯಾಣಮಂಟಪವೊಂದರಲ್ಲಿ ಅಕ್ಕನ ಮಗಳ ಜೊತೆ ಮದುವೆ ನಡೆದಿತ್ತು.
ಸಾವಿಗೆ ಶರಣಾಗುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ನನಗೆ ಮದುವೆ ಇಷ್ಟವಿರಲಿಲ್ಲ. ವೈವಾಹಿಕ ಜೀವನವೂ ಇಷ್ಟವಿಲ್ಲ ಹೀಗಾಗಿ ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ.ನಾನು ಮಾಡಿರುವ ಸಾಲವನ್ನು ಸಂದಾಯ ಮಾಡಿ ಎಂದು ಬರೆದಿರುವ ಬಗ್ಗೆ ವರದಿಯಾಗಿದೆ.ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ರೋದನ ಮುಗಿಲು ಮುಟ್ಟಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ