ದವಸ ಧಾನ್ಯಗಳಿಗೂ ಜಿಎಸ್‌ಟಿ ಬರೆ; ಶೇ.5 ಜಿಎಸ್‌ಟಿ ಕೈಬಿಡಲು ಮನವಿ

ಸ್ಪೇರ್‌ ಪಾಟ್ಸ್‌ ಗೆ ಶೇ.5 ಜಿಎಸ್‌ಟಿ ತೆರಿಗೆ ಇತ್ತು. ಇದೀಗ ಅದನ್ನು ಶೇ.18 ಮಾಡಿದ್ದಾರೆ.

Team Udayavani, Jul 15, 2022, 5:51 PM IST

ದವಸ ಧಾನ್ಯಗಳಿಗೂ ಜಿಎಸ್‌ಟಿ ಬರೆ; ಶೇ.5 ಜಿಎಸ್‌ಟಿ ಕೈಬಿಡಲು ಮನವಿ

ಚಿಕ್ಕಬಳ್ಳಾಪುರ: ಅಕ್ಕಿ, ಬೇಳೆ, ಗೋಧಿ  ಸಹಿತ ದವಸಧಾನ್ಯ, ಆಹಾರ ಪದಾರ್ಥಗಳ ಮೇಲೆ ಶೇ.5 ಜಿಎಸ್‌ಟಿ ವಿಧಿ ಸಲು ಕೌನ್ಸಿಲ್‌ ತೀರ್ಮಾನಿಸಿದ್ದು, ಕೂಡಲೇ ವಾಪಸ್‌ ಪಡೆಯಬೇಕೆಂದು ಜಿಲ್ಲಾ ಅಕ್ಕಿ ಗಿರಣಿದಾರರ ಸಂಘದ ಅಧ್ಯಕ್ಷ ಬಿ.ಆರ್‌.ಶ್ರೀನಿವಾಸಮೂರ್ತಿ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಕ್ಕಿ-ಗೋಧಿ ಸಹಿತ ಶೇ.60 ಅವಶ್ಯಕ ವಸ್ತುಗಳನ್ನು ಜನ ನಿತ್ಯ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಕೇಂದ್ರದ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಶೇ.5 ಜಿಎಸ್‌ಟಿ ವಿಧಿಸಲು ತೀರ್ಮಾನಿಸುವ ಮೂಲಕ ರೈತರು, ಗ್ರಾಹಕರಿಗೆ ಬರೆ ಎಳೆಯುವ ಕೆಲಸವನ್ನು ಮಾಡಲಾಗಿದೆ. ಕೂಡಲೇ ನಿರ್ಧಾರ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿದರು.

ದವಸಧಾನ್ಯಗಳ ಮೇಲೆ ತೆರಿಗೆ: ದವಸ ಧಾನ್ಯಗಳಿಗೆ ಜಿಎಸ್‌ಟಿ ವಿಧಿ ಸಿದರೆ ನೇರವಾಗಿ ಜನಸಾಮಾನ್ಯರಿಗೆ ಬರೆ ಎಳೆದಂತೆ ಆಗುತ್ತದೆ. ಒಂದು ವೇಳೆ ಜಿಎಸ್‌ಟಿ ವಿಧಿಸಿದರೆ ಅಕ್ಕಿ ಬೆಲೆ ಕೇಜಿಗೆ 5 ರೂ. ಹೆಚ್ಚಳ ಆಗುತ್ತದೆ. ಬೇಳೆ ಕಾಳಿನ ಬೆಲೆ 10 ರೂ. ಹೆಚ್ಚಾಗುತ್ತದೆ. ಈಗಾಗಲೇ ಕೊರೊನಾ ಸೋಂಕಿನಿಂದ ಜನ ಸಾಮಾನ್ಯರು, ರೈತರು ಕಂಗಾಲು ಆಗಿದ್ದಾರೆ. ಈ ಮಧ್ಯೆ ಕೇಂದ್ರದ ಜಿಎಸ್‌ಟಿ ಕೌನ್ಸಿಲ್‌ ದವಸ ಧಾನ್ಯಗಳ ಮೇಲೆ ತೆರಿಗೆ ವಿಧಿಸುವ ಕ್ರಮ ಅವೈಜ್ಞಾನಿಕವಾಗಿದೆ ಎಂದು ದೂರಿದರು.

ಗ್ರಾಹಕರಿಗೆ ಹೊರೆ: ಈಗಾಗಲೇ ಜಿಲ್ಲೆಯಲ್ಲಿ ರೈತರು ಕಷ್ಟದಲ್ಲಿದ್ದಾರೆ. ಹೂಡಿರುವ ಬಂಡವಾಳ ಕೈಗೆಟುಕುತ್ತಿಲ್ಲ. ಸಾರಿಗೆ, ಲೇಬರ್‌ ವೆಚ್ಚ ಜಾಸ್ತಿಯಾಗಿದೆ. ಈ ಮಧ್ಯೆ ಸ್ಪೇರ್‌ ಪಾಟ್ಸ್‌ ಗೆ ಶೇ.5 ಜಿಎಸ್‌ಟಿ ತೆರಿಗೆ ಇತ್ತು. ಇದೀಗ ಅದನ್ನು ಶೇ.18 ಮಾಡಿದ್ದಾರೆ. ಇದು ನೇರವಾಗಿ ಗ್ರಾಹಕರಿಗೆ ಹೊರೆಯಾಗುತ್ತದೆ ಎಂದು ವಿವರಿಸಿದರು.

ಅನಿರ್ದಿಷ್ಟಾವಧಿ ಹೋರಾಟ: ರೈತರು, ಗ್ರಾಹಕರಿಗೆ ತೊಂದರೆಯುಂಟು ಮಾಡಿರುವ ನಿರ್ಧಾರವನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಪತ್ರ ಸಲ್ಲಿಸಲಾಗಿದೆ. ಜಿಎಸ್‌ಟಿ ವಿಧಿ ಸುವ ನಿರ್ಧಾರವನ್ನು ವಾಪಸ್‌ ಪಡೆಯದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಅಕ್ಕಿ ಗಿರಣಿದಾರರ ಸಂಘದ ಉಪಾಧ್ಯಕ್ಷ ತಲ್ಲಂ ರಾಧಾಕೃಷ್ಣ, ಕಾರ್ಯದರ್ಶಿ ನಾಗೇಶ್‌, ಖಜಾಂಚಿ ಎಂ.ಎಲ್‌.ಸಂತೋಷ, ವರ್ತಕರ ಸಂಘದ ಪ್ರತಿನಿ ಧಿಗಳಾದ ಚಿಕ್ಕಬಳ್ಳಾಪುರದ ಎಂಟಿಎಂ ಡಿ.ಎಸ್‌.ನಟರಾಜ್‌, ನಂಜುಂಡರಾಮಯ್ಯ ಶೆಟ್ಟಿ, ಗೌರಿಬಿದನೂರು ಎಸ್‌.ವಿ.ರತ್ನಯ್ಯಶೆಟ್ಟಿ, ಎನ್‌.ಆರ್‌.ರಾಧಾಕೃಷ್ಣ ಗುಪ್ತ, ಶಿಡ್ಲಘಟ್ಟದಿಂದ ಮಹೇಶ್‌, ಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.