ವಿಮಾ ಕಂತಿಗೆ ಜಿಎಸ್‌ಟಿ: ಆಕ್ರೋಶ


Team Udayavani, Jan 11, 2020, 3:00 AM IST

vima-kantu

ಚಿಕ್ಕಬಳ್ಳಾಪುರ: ಭಾರತೀಯ ಜೀವಿ ವಿಮಾ ನಿಗಮದಲ್ಲಿ ಪಾಲಿಸಿದಾರರ ಮೇಲೆ ವಿಧಿಸುತ್ತಿರುವ ಜಿಎಸ್‌ಟಿಯನ್ನು ಕೂಡಲೇ ರದ್ದುಗೊಳಿಸಿ ಪಾಲಿಸಿದಾರರ ಬೋನಸ್‌ನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶುಕ್ರವಾರ ಜಿಲ್ಲಾ ಕೇಂದ್ರದ ಎಲ್‌ಐಸಿ ಶಾಖಾ ಕಚೇರಿ ಎದುರು ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ಪ್ರತಿಭಟನಾ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ವಿ.ರವೀಂದ್ರನಾಥ್‌ ನೇತೃತ್ವದಲ್ಲಿ ಜಿಲ್ಲೆಯ ಎಲ್‌ಐಸಿ ಪ್ರತಿನಿಧಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಡೀ ದಿನ ಧರಣಿ ನಡೆಸಿ ಗಮನ ಸೆಳೆದು ಪಾಲಿಸಿದಾರರ ಮೇಲೆ ಜಿಎಸ್‌ಟಿ ವಿಧಿಸುತ್ತಿರುವುದನ್ನು ತೀವ್ರ ಖಂಡಿಸಿ ಕೂಡಲೇ ಜಿಎಸ್‌ಟಿ ಹಾಕುವುದನ್ನು ಕೇಂದ್ರ ಸರ್ಕಾರ ಕೈ ಬಿಡಬೇಕೆಂದರು.

ಕಳವಳ: ಪಾಲಿಸಿದಾರರ ಮೇಲೆ ಜಿಎಸ್‌ಟಿ ವಿಧಿಸುತ್ತಿರುವುದರಿಂದ ಜೀವ ವಿಮಾ ಕಂತು ಪಾವತಿ ಮಾಡುವ ಪಾಲಿಸಿದಾರರ ಮೇಲೆ ಹೆಚ್ಚು ಆರ್ಥಿಕ ಹೊರೆ ಆಗುತ್ತದೆ. ಇದರಿಂದ ಪ್ರತಿನಿಧಿಗಳ ವಹಿವಾಟು ಮೇಲೆ ದುಷ್ಪರಿಣಾಮ ಬೀರುತ್ತದೆ. ಎಲ್‌ಐಸಿ ದೇಶದ ಆರ್ಥಿಕ ಭದ್ರತೆಗೆ ಸಾಕಷ್ಟು ಕೊಡುಗೆ ನೀಡಿದ್ದು, ಇಂತಹ ಸಂದರ್ಭದಲ್ಲಿ ಪಾಲಿಸಿದಾರರ ಮೇಲೆ ಜಿಎಸ್‌ಟಿ ಹಾಕುವುದರಿಂದ ಅದರ ನೇರ ಪರಿಣಾಮ ಪ್ರತಿನಿಧಿಗಳ ಮೇಲೆ ಉಂಟಾಗುತ್ತದೆ ಎಂದು ಪ್ರತಿಭಟನಾ ನಿರತ ಎಲ್‌ಐಸಿ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಚಿಕ್ಕಬಳ್ಳಾಪುರ ಶಾಖಾ ಅಧ್ಯಕ್ಷ ಎಂ.ಸೋಮಶೇಖರ್‌ ಮಾತನಾಡಿ, ಕೇಂದ್ರ ಸರ್ಕಾರ ಪಾಲಿಸಿದಾರರ ವಿಮಾ ಕಂತಿನ ಮೇಲೆ ಜಿಎಸ್‌ಟಿ ರದ್ದುಗೊಳಿಸಿ, ಪಾಲಿಸಿದಾರರ ಬೋನಸ್‌ ಹೆಚ್ಚಿಸಬೇಕು. ಐಆರ್‌ಡಿಎ ಪ್ರಕಾರ ಪ್ರತಿನಿಧಿಗಳ ಗ್ರೂಪ್‌ ಇನುÏರೆನ್ಸ್‌ ಮತ್ತು ಗ್ರಾಚ್ಯುಟಿಯನ್ನು ಹೆಚ್ಚಿಸಿ ಪ್ರತಿನಿಧಿಗಳ ಹಿತ ಕಾಯಬೇಕೆಂದರು.

ಪಾಲಿಸಿ ಮಾಡಿಸಲು ಹಿಂದೇಟು: ಈಗಾಗಲೇ ಐಆರ್‌ಡಿಎ ದೃಢೀಕರಿಸಿರುವ ಪ್ರತಿನಿಧಿಗಳ ಎಲ್ಲಾ ಬೇಡಿಕೆಗಳನ್ನು ಎಲ್‌ಐಸಿ ಆಡಳಿತ ಮಂಡಳಿ ಸಮರ್ಪಕವಾಗಿ ಜಾರಿಗೊಳಿಸಬೇಕೆಂದರು. ಎಲ್‌ಐಸಿ ನಂಬಿಕೊಂಡು ದೇಶದಲ್ಲಿ ಲಕ್ಷಾಂತರ ಪ್ರತಿನಿಧಿಗಳು ಇದ್ದಾರೆ. ಆದರೆ ಇತ್ತೀಚೆಗೆ ಹಲವು ನಿರ್ಧಾರಗಳು ಪ್ರತಿನಿಧಿಗಳ ವಾರ್ಷಿಕ ಗುರಿ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರಮುಖವಾಗಿ ಜಿಎಸ್‌ಟಿ ವಿಧಿಸುತ್ತಿರುವುದರಿಂದ ಯಾರು ಪಾಲಿಸಿ ಮಾಡಿಸಲು ಮುಂದೆ ಬರುತ್ತಿಲ್ಲ ಎಂದರು. ಅನೇಕ ಬಾರಿ ಸಾಕಷ್ಟು ಹೋರಾಟ, ಧರಣಿ ನಡೆಸಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆಗಳು ಈಡೇರಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಲ್‌ಐಸಿ ಪ್ರತಿನಿಧಿಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಮೋಹನ್‌ಬಾಬು, ಖಜಾಂಚಿ ರಮೇಶ್‌ಗುಪ್ತಾ, ಸದಸ್ಯರಾದ ಟಿ.ಸಿ.ಲಕ್ಷ್ಮಣ್‌, ಗೌರಿಬಿದನೂರು ಮಂಜುನಾಥ್‌, ಬಾಗೇಪಲ್ಲಿ ಬೈಯ್ನಾರೆಡ್ಡಿ, ಸಿ.ಎಸ್‌.ನಾರಾಯಣ, ವೆಂಕಟೇಶ್‌ಪ್ರಸಾದ್‌, ವೆಂಕಟಶಿವಾರೆಡ್ಡಿ, ಬಿ.ಎನ್‌.ಗುರುರಾಜ್‌, ಶ್ರೀಕಾಂತ್‌, ಚಂದ್ರಕೀರ್ತಿ, ಎನ್‌.ರಾಮಚಂದ್ರರೆಡ್ಡಿ ಸೇರಿದಂತೆ ಅನೇಕ ಎಲ್‌ಐಸಿ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನ್ಯಾಯಯುತವಾದ ಬೇಡಿಕೆಗಳು ಈಡೇರಿಸದಿದ್ದಲ್ಲಿ ಜ.18, 20 ರಂದು ಮತ್ತೂಮ್ಮೆ ಶಾಂತಿಯುತ ಪ್ರತಿಭಟಿನೆ ನಡೆಸಲಾಗುವುದು. ಅಷ್ಟರೊಳಗಾಗಿ ಎಲ್‌ಐಸಿ ಆಡಳಿತ ಮಂಡಳಿಯು ಪ್ರತಿನಿಧಿಗಳು ಮುಂದಿಟ್ಟಿರುವ ಬೇಡಿಕೆಗಳು ಈಡೇರದಿದ್ದ ಪಕ್ಷದಲ್ಲಿ ಜ.21 ರಂದು ದೇಶವ್ಯಾಪ್ತಿ ಎಲ್ಲಾ ಶಾಖೆಗಳಲ್ಲಿ ಹೊಸ ಪಾಲಿಸಿಗಳು, ರಿನಿವಲ್ಸ್‌ ಹಾಗೂ ಆ ದಿನದ ಎಲ್‌ಐಸಿ ಶಾಖೆಗಳ ಪೂರ್ಣ ವಹಿವಾಟನ್ನು ಸ್ಥಗಿತಗೊಳಿಸಿ ಧ‌ರಣಿ ನಡೆಸಲಾಗುವುದು.
-ವಿ.ರವೀಂದ್ರನಾಥ್‌, ಪ್ರತಿನಿಧಿಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷರು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.