ಸೀಬೆಹಣ್ಣು ವ್ಯಾಪಾರಿಗಳ ಬದುಕು ಅತಂತ್ರ

ಶಿಡ್ಲಘಟ್ಟ ತಾಲೂಕು ಹೆಚ್‌.ಕ್ರಾಸ್‌ನಲ್ಲಿ ವ್ಯಾಪಾರ | ಖರೀದಿಗೆ ಸಾರ್ವಜನಿಕರು, ಪ್ರಯಾಣಿಕರ ಹಿಂದೇಟು

Team Udayavani, Oct 11, 2020, 3:17 PM IST

cb-tdy-1

ಚಿಕ್ಕಬಳ್ಳಾಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರಗಳು ಕೈಗೊಂಡಕ್ರಮಗಳಿಂದ ವಿವಿಧ ರೀತಿಯ ವ್ಯಾಪಾರ ವಹಿವಾಟುಗಳಲ್ಲಿ  ತೊಡಗಿಸಿಕೊಂಡಿರುವ ಜನರು ಇನ್ನೂ ಸಹ ಅತಂತ್ರ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಚ್‌ಕ್ರಾಸ್‌ನ ಸೀಬೆಹಣ್ಣು ಮಾರಾಟಗಾರರು ಜೀವಂತ ಸಾಕ್ಷಿಯಾಗಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ, ಕೋವಿಡ್ ಸಂಕಷ್ಟದಲ್ಲಿ ಸಿಲುಕಿರುವ ಕೂಲಿ ಕಾರ್ಮಿಕರು ಸೇರಿದಂತೆ ಕೆಲವರಿಗೆ ಆರ್ಥಿಕ ನೆರವು ನೀಡಿದೆ. ಆದರೆ ಶಿಡ್ಲಘಟ್ಟ ತಾಲೂಕಿನ ಹೆಚ್‌ಕ್ರಾಸ್‌ ನಲ್ಲಿ ಸೀಬೆಹಣ್ಣು ಮಾರಾಟ ಮಾಡಿ ಜೀವನ ನಡೆಸುತ್ತಿರುವ ಮಾರಾಟಗಾರರ ಬದುಕು ಅತಂತ್ರವಾಗಿದ್ದು, ವ್ಯಾಪಾರವಿಲ್ಲದೆ ಜೀವನ ನಡೆಸುವುದೇಕಷ್ಟಕರವಾಗಿದೆ.

ಸಣ್ಣ ವ್ಯಾಪಾರಿಗಳ ಪರಿಸ್ಥಿತಿ ಚಿಂತಾಜನಕ: ಕೋಲಾರ-ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಇರುವ ಹೆಚ್‌ಕ್ರಾಸ್‌ ಎಂದಾಕ್ಷಣ ನೆನಪಾಗುವುದು ಸೀಬೆ ಹಣ್ಣು ಮತ್ತು ಐತಿಹಾಸಿಕ ಸೀತಾ ರಾಮಾಂಜನೇಯಸ್ವಾಮಿ ದೇವಾಲಯ ನೆನಪು ಬರುವುದು ಸಹಜ. ಇತ್ತೀಚೆಗೆ ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿರುವ ಹೆಚ್‌ಕ್ರಾಸ್‌ನಲ್ಲಿ 3 ಜಿಲ್ಲೆಗಳ ಜನರ ಸಂಗಮ ಆಗುತ್ತದೆ. ಆದರೆ ಕೋವಿಡ್ ಸೋಂಕಿನ ಪ್ರಭಾವ ಸೀಬೆಹಣ್ಣಿನ ವ್ಯಾಪಾರದ ಮೇಲೆಯೂ ಸಹ ಬಿದ್ದಿದ್ದು, ಸಣ್ಣ ವ್ಯಾಪಾರಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ.

ಖರೀದಿಸಲು ಹಿಂದೇಟು: ಹೆಚ್‌ಕ್ರಾಸ್‌ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳೆಯುವ ಸೀಬೆಹಣ್ಣುಗಳನ್ನು ರೈತರಿಂದ ಖರೀದಿಸಿ ಸಣ್ಣ ಪ್ರಮಾಣದಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳು ಸೀಬೆಹಣ್ಣು ಮಾರಾಟ ಮಾಡಲು ಪರದಾಡುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಚಿಂತಾಮಣಿ ಹೊಸಕೋಟೆ ಮಾರ್ಗ ಮಧ್ಯೆ ಸಂಚರಿಸುವ ಕಾರ್‌ -ಸಾರಿಗೆ-ಖಾಸಗಿ ಬಸ್‌ಗಳಲ್ಲಿ ಬರುವ ಪ್ರಯಾಣಿಕರಿಗೆ ಸೀಬೆಹಣ್ಣು ಮಾರಾಟ ಮಾಡಲು ನಾಮುಂದು ತಾಮುಂದು ಎಂದು ತಟ್ಟೆ ಹಿಡಿದುಕೊಂಡು ಹೋದರೂ ಸಹ ಸೀಬೆಹಣ್ಣು ಖರೀದಿಸಲು ಪ್ರಯಾಣಿಕರು ಹಿಂದೆ ಮುಂದೆ ಆಲೋಚನೆ ಮಾಡುತ್ತಿದ್ದಾರೆ. ಇದರಿಂದ ಸೀಬೆಹಣ್ಣಿನ ವ್ಯಾಪಾರ ನೆಚ್ಚಿಕೊಂಡಿರುವ ಸುಮಾರು 70 ರಿಂದ 100 ಜನ ವ್ಯಾಪಾರಿಗಳ ಬದುಕು ಅತಂತ್ರವಾಗಿದೆ. ಸೀಬೆಹಣ್ಣಿನ ಜೊತೆಗೆ ಹೂ ಮತ್ತು ಕಡಲೆಕಾಯಿ ಮಾರಾಟಗಾರರ ಪರಿಸ್ಥಿತಿ ಕೂಡ ಇದಕ್ಕಿಂತ ಹೊರತಾಗಿಲ್ಲ.

ನೆರವು ನೀಡಲುಕ್ರಮ :  ಹೆಚ್‌ಕ್ರಾಸ್‌ನಲ್ಲಿ ಬೀದಿಬದಿಯ ವ್ಯಾಪಾರಿಗಳಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ರಾಜ್ಯ ಹೆದ್ದಾರಿಯಲ್ಲಿ ವ್ಯಾಪಾರಮಾ ಡಿಕೊಳ್ಳುವವರಿಗೆ ಪಂಚಾಯಿತಿಯಿಂದ ಪರವಾನಿಗೆ ನೀಡಲು ಅವಕಾಶವಿಲ್ಲ. ಲೋಕೋಪಯೋಗಿ ಇಲಾಖಾಧಿಕಾರಿಗಳ ಅನುಮತಿ ಪಡೆಯಬೇಕಾಗುತ್ತದೆ. ಸೀಬೆಹಣ್ಣಿನ ವ್ಯಾಪಾರಿಗಳು ಸಂಚರಿಸಿ ವ್ಯಾಪಾರ ಮಾಡುತ್ತಾರೆ ಪಂಚಾಯಿತಿ ವ್ಯಾಪ್ತಿಗೆ ಬರುವ ಸಣ್ಣ ವ್ಯಾಪಾರಿಗಳಿಗೆ ಸರ್ಕಾರದಿಂದ ದೊರೆಯುವ ನೆರವು ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ನಯನ ನಿಖತ್‌ಆರಾ ತಿಳಿಸಿದ್ದಾರೆ.

ಸೌಲಭ್ಯ ಕಲ್ಪಿಸಲು ತೊಂದರೆ :  ಶಿಡ್ಲಘಟ್ಟ ತಾಲೂಕಿನ ಹೆಚ್‌ಕ್ರಾಸ್‌ನಲ್ಲಿ ಸೀಬೆಹಣ್ಣಿನವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಬಹುತೇಕ ಸಣ್ಣ ವ್ಯಾಪಾರಿಗಳು ಕೋಲಾರ ಮತ್ತು ಹೊಸಕೋಟೆ ತಾಲೂಕಿನವರು ಹೆಚ್ಚಾಗಿದ್ದಾರೆ. ಹೀಗಾಗಿ ಶಿಡ್ಲಘಟ್ಟ ತಾಲೂಕಿನ ಅಧಿಕಾರಿಗಳು ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲು ತೊಂದರೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಹೊಸಕೋಟೆ ಮತ್ತು ಕೋಲಾರ ತಾಲೂಕಿನ ಅಧಿಕಾರಿಗಳು ಬೀದಿಬದಿಯಲ್ಲಿ ವ್ಯಾಪಾರ ಮಾಡುವ ಇವರ ನೆರವಿಗೆ ಧಾವಿಸಬೇಕಾಗಿದೆ.

ಕೋವಿಡ್ ಸೋಂಕಿನಿಂದ ಸೀಬೆಹಣ್ಣಿನ ವ್ಯಾಪಾರ ತೀರಕಡಿಮೆಯಾಗಿದೆ. ಹಿಂದೆ 500 ರೂ.ಗಳಿಂದ 1000 ರೂ. ಸಂಪಾದನೆ ಮಾಡುತ್ತಿದ್ವಿ. ಈಗ 500 ರೂ. ಸಂಪಾದನೆ ಮಾಡುವುದುಕಷ್ಟವಾಗಿದೆ. ನಮ್ಮ ಸಂಕಷ್ಟಕ್ಕೆ ಸ್ಪಂದಿಸುವವರೇ ಇಲ್ಲ. ಸರ್ಕಾರಿ ಸೌಲಭ್ಯ ಒದಗಿಸಲುಯಾರು ಮುಂದೆ ಬರುತ್ತಿಲ್ಲ. ಶ್ರೀನಿವಾಸ್‌, ಸೀಬೆಹಣ್ಣಿನ ಬೀದಿಬದಿ ವ್ಯಾಪಾರಿ

 

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.