ಹನುಮನ ದೇವಾಲಯಗಳಿಗೆ ಭಕ್ತ ಸಾಗರ


Team Udayavani, Dec 28, 2020, 6:08 PM IST

ಹನುಮನ ದೇವಾಲಯಗಳಿಗೆ ಭಕ್ತ ಸಾಗರ

ಚಿಂತಾಮಣಿ: ಹನುಮ ಜಯಂತಿ ಪ್ರಯುಕ್ತ ತಾಲೂಕಿನ ಹಲವು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ದೇಗುಲಗಳಿಗೆ ಆಗಮಿಸಿದರ್ಶನ ಪಡೆದರು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ರವರು ಕಂಗಾನಹಳ್ಳಿ ಸೀತಾರಾಮಾಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಅಂಬಾಜಿ ದುರ್ಗಾ ಹೋಬಳಿಯ ಕಂಗಾನಹಳ್ಳಿಯಲ್ಲಿ ನೆಲೆಸಿರುವ ಸೀತಾರಾಮಾಂಜನೇಯ ಸ್ವಾಮಿ, ಐಮರೆಡ್ಡಿಹಳ್ಳಿ ಗೇಟ್‌ ಚೀಮನಹಳ್ಳಿಯ ಅಭಯಾಂಜನೇಯಸ್ವಾಮಿ, ಬೂರಗಮಾಕಲ ಹಳ್ಳಿಯ ಸೀತಾರಾಮಾಂಜನೇಯಸ್ವಾಮಿ, ಅಂಬಾಜಿ ದುರ್ಗಾ ಬೆಟ್ಟದ ತಪ್ಪಲಿನ ಆಂಜನೇಯ ಸ್ವಾಮಿ, ವರದಾದ್ರಿ ಬೆಟ್ಟದ ವರದಾಂಜನೇಯ ಸ್ವಾಮಿ ದೇವಾಲಯಗಳಿಗೆ ಬೆಳಗ್ಗೆಯಿಂದಲೇ ಸಹಸ್ರಾರು ಭಕ್ತರು ಆಗಮಿಸಿ ದರ್ಶನ ಪಡೆದರು.

ಬೆಳಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಹೋಮ,ಪ್ರಧಾನ ಹೋಮ, ಪರಿವಾರ ದೇವತಾ ಹೋಮ, ಪೂರ್ಣಾಹುತಿ,ಅಷ್ಟಾವದನ ಸೇವೆ, ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಹನುಮ ಜಯಂತಿ ಪ್ರಯುಕ್ತಸ್ವಾಮಿಗೆ ಹಾಗೂ ದೇವಾಲಯಗಳಿಗೆ ಹೂವಿನ ಅಲಂಕಾರ ಮತ್ತು ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರು ತಾಲೂಕಿನ ಕಂಗಾನಹಳ್ಳಿಯ ಸೀತಾರಾಮಾಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ದೇವಾಲಯದ ಆವರಣದಲ್ಲಿ ಭಜನೆ ಹಾಗೂ ಆಂಧ್ರದ ಜಾನಪದ ಕಲಾವಿದರು ನಡೆಸಿಕೊಟ್ಟ ಚಕ್ಕಲ ಭಜನೆಗಮನ ಸೆಳೆಯುತು. ಕಂಗಾನಹಳ್ಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ದೇವಾಲಯದ ಕಮಿಟಿಯಿಂದ ಮುದ್ದೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಆದಿಚುಂಚನಗಿರಿ ಶಾಖಾ ಮಠದಲ್ಲಿ ಪೂಜೆ :

ಚಿಕ್ಕಬಳ್ಳಾಪುರ: ನಗರ ಸೇರಿದಂತೆ ಜಿಲ್ಲಾದ್ಯಂತ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಂಜಿನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠದಲ್ಲಿರುವ ಆಂಜನೇಯಸ್ವಾಮಿ ದೇವಾಲಯದಲ್ಲಿ ಅಭಿಷೇಕ, ಹೋಮ ಮತ್ತು ಪೂಜಾ ಕಾರ್ಯಕ್ರಮವನ್ನು ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ್‌ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಶಿಡ್ಲಘಟ್ಟ ತಾಲೂಕಿನ ಚೌಡಸಂದ್ರದಲ್ಲಿ ಅಭಯ ಆಂಜನೇಯಸ್ವಾಮಿದೇವಾಲಯ, ಭಕ್ತರಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಗಳು ನೆರವೇರಿತು. ಶಿಡ್ಲಘಟ್ಟ ನಗರದ ಮಯೂರ ಸರ್ಕಲ್‌ ಬಳಿಯ ಮಹಾಮುಖ್ಯ ಪ್ರಾಣ ದೇವಾಲಯದ ಅಶ್ವತ್ಥಕಟ್ಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅರ್ಚಕ ರಾಘವೇಂದ್ರರಾವ್‌ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.