ಜಿಲ್ಲಾದ್ಯಂತ ಹದ ಮಳೆ, ಬಿತ್ತನೆ ಚುರುಕು
Team Udayavani, Sep 5, 2017, 4:02 PM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ 34.5 ಮಿ.ಮೀ. ಮಳೆ ದಾಖಲಾಗಿದ್ದು, ಮಂದಗತಿಯಲ್ಲಿ ಸಾಗಿದ್ದ ಬಿತ್ತನೆ ಕಾರ್ಯ ಜಿಲ್ಲೆಯಲ್ಲಿ ಚುರುಕಗೊಂಡಿದೆ.
ಯಾವ ತಾಲೂಕಿನಲ್ಲಿ ಎಷ್ಟು ಮಳೆ?: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಸೆ.4 ರವರೆಗೂ ಒಟ್ಟು 41.8 ಮಿ.ಮೀ. ಮಳೆ ಆಗಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 27.2 ಮಿ.ಮೀ., ಚಿಂತಾಮಣಿ ತಾಲೂಕಿನಲ್ಲಿ 48.5 ಮಿ.ಮೀ., ಗೌರಿಬಿದನೂರು ತಾಲೂಕಿನಾದ್ಯಂತ 26.5 ಮಿ.ಮೀ., ಗುಡಿಬಂಡೆ ತಾಲೂಕಿನಲ್ಲಿ 25.4 ಮಿ.ಮೀ. ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 29.8 ಮಿ.ಮೀ. ಮಳೆ ದಾಖಲಾಗಿ ಒಟ್ಟಾರೆ ಜಿಲ್ಲಾದ್ಯಂತ 34.5 ಮಿ.ಮೀ. ಮಳೆ ಆಗಿದೆ. ಬಾಗೇಪಲ್ಲಿ ಹಾಗೂ ಚಿಂತಾಮಣಿ ತಾಲೂಕಿನಲ್ಲಿ ನಾಲ್ಕು ದಿನಗಳಲ್ಲಿ ಅತಿ ಹೆಚ್ಚು ಮಳೆ ಬಿದ್ದಿದೆ. ಜಿಲ್ಲೆಯಲ್ಲಿ ಒಟ್ಟು ಸಂಚಿತ
ಮಳೆ ಸೆ.4 ಅಂತ್ಯಕ್ಕೆ ವಾಡಿಕೆ ಮಳೆ 358.9 ಮಿ.ಮೀ. ಮಳೆ ಆಗಬೇಕಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ
340.3 ಮಿ.ಮೀ. ಮಳೆಯಾಗಿದೆ.
ಶೇ.5 ರಷ್ಟು ಮಳೆ ಕೊರತೆ: ಜಿಲ್ಲೆಯಲ್ಲಿ ಆಗಸ್ಟ್ ಅಂತ್ಯದವರೆಗೂ ಶೇ.5 ರಷ್ಟು ಮಳೆ ಪ್ರಮಾಣ ಕೊರತೆಯಾಗಿದೆ. ಕಳೆದ ವರ್ಷಕ್ಕೆ ಹೊಲಿಕೊಂಡರೆ ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ 17 ಮಿ.ಮೀ., ಚಿಕ್ಕಬಳ್ಳಾಪುರ 4, ಗುಡಿಬಂಡೆ 19 ಹಾಗೂ ಶಿಡ್ಲಘಟ್ಟದಲ್ಲಿ 5 ಮಿ.ಮೀ. ಮಳೆ ಕೊರತೆ ಕಂಡಿದೆ.
ಬಿತ್ತನೆಯಲ್ಲಿ ಗುಡಿಬಂಡೆ ಫಸ್ಟ್: ಜಿಲ್ಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ಶೇ.84 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಬಿತ್ತನೆಯ ಗುರಿ ಹೊಂದಿರುವ 1.54 ಲಕ್ಷ ಹೆಕ್ಟೇರ್ ಪೈಕಿ ಆಗಸ್ಟ್ ಅಂತ್ಯಕ್ಕೆ ಜಿಲ್ಲೆಯಲ್ಲಿ 1,29,866 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಕೆ. ಮಲ್ಲಿಕಾರ್ಜು ಮಾಹಿತಿ ನೀಡಿದ್ದಾರೆ. ಬಿತ್ತನೆ ಕಾರ್ಯದಲ್ಲಿ ಶೇ.92 ರಷ್ಟು ಪ್ರಗತಿ ಸಾಧಿಸಿ ಗುಡಿಬಂಡೆ ಮೊದಲ ಸ್ಥಾನದಲ್ಲಿದ್ದರೆ ಶೇ.94 ರಷ್ಟು
ಗುರಿ ಸಾಧಿಸಿ ಶಿಡ್ಲಘಟ್ಟ ಎರಡನೇ ಸ್ಥಾನದಲ್ಲಿದ್ದು, ಬಾಗೇಪಲ್ಲಿ ಶೇ.85, ಚಿಕ್ಕಬಳ್ಳಾಪುರ ಶೇ.82,
ಚಿಂತಾಮಣಿ ಶೇ.80, ಗೌರಿಬಿದನೂರು ಶೇ.81 ಬಿತ್ತನೆಯ ಗುರಿ ಸಾಧಿಸಿದೆ.
ಶೇ.84 ರಷ್ಟು ಬಿತ್ತನೆ ಪೂರ್ಣ: ಬಾಗೇಪಲ್ಲಿ ತಾಲೂಕಿನಲ್ಲಿ 31,899 ಹೆಕ್ಟೇರ್ ಪೈಕಿ 27,185 ಹೆಕ್ಟೇರ್ನಲ್ಲಿ ಬಿತ್ತನೆಯಾಗಿದ್ದರೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 17,579 ಹೆಕ್ಟೇರ್ ಪೈಕಿ 14,354 ಹೆಕ್ಟೇರ್, ಚಿಂತಾಮಣಿ ತಾಲೂಕಿನಲ್ಲಿ 35,918 ಹೆಕ್ಟೇರ್ ಪೈಕಿ 28,735, ಗೌರಿಬಿದನೂರು ತಾಲೂಕಿನಲ್ಲಿ 39,445 ಹೆಕ್ಟೇರ್ ಪೈಕಿ 32,092
ಹೆಕ್ಟೇರ್, ಗುಡಿಬಂಡೆ ತಾಲೂಕಿನಲ್ಲಿ 11,886 ಹೆಕ್ಟೇರ್ ಪೈಕಿ 11,261 ಹೆಕ್ಟೇರ್ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 17,273 ಹೆಕ್ಟೇರ್ ಪೈಕಿ 16,239 ಹೆಕ್ಟೇರ್ನಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ.
ಕೆರೆಕಟ್ಟೆಗೆ ನೀರು: ನಾಲ್ಕೈದು ದಿನಗಳಿಂದ ಬೀಳುತ್ತಿರುವ ಧಾರಾಕಾರ ಮಳೆ ಜೂನ್, ಜುಲೈ ತಿಂಗಳಲ್ಲಿ ಬಿದಿದ್ದರೆ ಉತ್ತಮ ಬಿತ್ತನೆ ಕಾರ್ಯ ನಡೆಯುತ್ತಿತ್ತು. ಈಗಾಗಲೇ ನೆಲಗಡಲೆಗೆ ಬಿತ್ತನೆಗೆ ಅವಧಿ ಮುಗಿದೆ. ಆದ್ದರಿಂದ ಈಗ
ಬೀಳುತ್ತಿರುವ ಮಳೆ ರಾಗಿ, ಮುಸುಕಿನ ಜೋಳ ಹಾಗೂ ಹುರುಳಿ ಬಿತ್ತನೆಗೆ ಅನುಕೂಲವಾಗಲಿದೆ. ಮುಸುಕಿನ ಜೋಳಕ್ಕೆ ಅವಕಾಶ ಇರುವುದರಿಂದ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಸಮಸ್ಯೆ ನಿವಾರಣೆಯಾಗಲಿದೆ. ಕೆರೆ, ಕುಂಟೆಗಳಿಗೆ ನೀರು ಹರಿದು ಬಂದಿರುವುದರಿಂದ ಕುಡಿವ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಲಿದೆ
ಎನ್ನುತ್ತಾರೆ ಅಣಕನೂರು ರೈತ ಬಚ್ಚನ್ನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ