ಗೌರಿಬಿದನೂರು: ಕೆರೆ ಕೋಡಿ ಹರಿದು ಸರ್ಕಾರಿ ಶಾಲೆ, ಗ್ರಾಮಪಂಚಾಯತ್ ಕಚೇರಿ ಜಲಾವೃತ
Team Udayavani, Oct 17, 2022, 2:31 PM IST
ಗೌರಿಬಿದನೂರು: ತಾಲ್ಲೂಕಿನ ಹೊಸೂರು ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಕಾದಲವೇಣಿ ಕೆರೆಯು ದಶಕದ ಬಳಿಕ ತುಂಬಿ ಕೋಡಿ ಹರಿದಿದ್ದು ಇದರಿಂದಾಗಿ ಕೆರೆಯಂಗಳದಲ್ಲಿ ನಿರ್ಮಾಣ ವಾಗಿರುವ ಗ್ರಾ.ಪಂ ಕಾರ್ಯಾಲಯ ಹಾಗೂ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಸುಮಾರು ಎರಡು ಅಡಿಯಷ್ಟು ನೀರು ನಿಂತಿದೆ.
ಇಂದು ಶಾಲೆ ಆರಂಭವಾಗಿದ್ದು, ದಸರಾ ರಜೆ ದಿನ ಮುಗಿಸಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದಾರೆ, ಆದರೆ ಶಾಲಾ ಆವರಣದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಕಾರಣ ವಿದ್ಯಾರ್ಥಿಗಳು ತರಗತಿಗಳಿಗೆ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಗ್ರಾ.ಪಂ ಕಾರ್ಯಾಲಯದ ಗೋಡೆಗಳ ಸಮೀಪಕ್ಕೆ ಬಂದಿರುವ ಕೆರೆ ನೀರಿನಿಂದಾಗಿ ಅಧಿಕಾರಿಗಳು ಆತಂಕದಲ್ಲಿದ್ದಾರೆ. ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಸುತ್ತಲೂ ನೀರು ತುಂಬಿರುವ ಕಾರಣ ಮತ್ತಷ್ಟು ಅಪಾಯ ಎದುರಾಗಿದೆ.
ಅತಿವೃಷ್ಟಿ ಮಳೆಯಿಂದ ರೈತಾಪಿ ವರ್ಗದ ಜನತೆ ಜಾನುವಾರುಗಳಿಗೆ ಮೇವು ಒದಗಿಸುವುದು ದೊಡ್ಡ ಸಾಹಸವಾಗಿದ್ದು, ನಿತ್ಯ ಸುರಿಯುತ್ತಿರುವ ಮಳೆಯ ಪರಿಣಾಮ ಬೆಳೆದು ನಿಂತಿರುವ ಮುಸುಕಿನ ಜೋಳ ಕಟಾವು ಮಾಡಿ ಜೋಳ ಮತ್ತು ಮೇವು ಸಂಗ್ರಹಿಸಲು ಅಡಚಣೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ.
ಇದನ್ನೂ ಓದಿ : ಮಂಗಳೂರು: ಬಸ್ ಚಕ್ರ ಹರಿದು ಬಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್