ನಿರ್ಗತಿಕರಿಗೆ ಸಹಾಯ ಮಾಡಿ: ಎಸ್‌.ಎಚ್‌.ಕೋರಡ್ಡಿ


Team Udayavani, Sep 8, 2019, 3:00 AM IST

nirgatika

ಚಿಕ್ಕಬಳ್ಳಾಪುರ: ನಾಗರಿಕ ಸಮಾಜದ ಯಾವುದೇ ವ್ಯಕ್ತಿಯಾಗಲಿ ನಿರ್ಗತಿಕರನ್ನು ಕಂಡಲ್ಲಿ ಅವರಿಗೆ ಕೈಲಾದಷ್ಟು ಸಹಾಯ ಮಾಡಬೇಕು. ಜೊತೆಗೆ ಧಾರ್ಮಿಕ, ಸಾಮಾಜಿಕವಾಗಿ ಸತ್ಯದ ಹಾದಿಯಲ್ಲಿ ಪ್ರತಿಯೊಬ್ಬರು ನಡೆದರೆ ಮಾತ್ರ ಎಲ್ಲರ ಜೀವನವು ಸುಖಮಯವಾಗಿರುತ್ತದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ಅಭಿಪ್ರಾಯಪಟ್ಟರು.

ನಗರದ ಹೊರ ವಲಯದ ಸುಲ್ತಾನಪೇಟೆಯ ಶ್ರೀ ಸತ್ಯಸಾಯಿ ವೃದ್ಧಾಶ್ರಮದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಪ್ರಯುಕ್ತ ವೃದ್ಧಾಶ್ರಮದ ವಯೋ ವೃದ್ಧರಿಗೆ ಹಾಲು, ಹಣ್ಣು ವಿತರಿಸಿ ಅವರು ಮಾತನಾಡಿದರು.

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೌಷ್ಟಿಕ ಆಹಾರ ಸೇವನೆ ಮುಖ್ಯ. ಜೀವನದಲ್ಲಿ ನಡೆದು ಹೋದ ಕಹಿ ಘಟನೆಗಳನ್ನು ನೆನೆದು ಕೊರಗದೆ ವೃದ್ಧಾಶ್ರಮದ ಪರಿಸರ ವಾತಾವರಣದಲ್ಲಿ ಜ್ಞಾನ, ಸಂಗೀತದ ಮೂಲಕ ತಮ್ಮ ನೋವು ಮರೆಯಬೇಕು ಎಂದು ವೃದ್ಧರಿಗೆ ಸಲಹೆ ನೀಡಿದರು.

ದೈಹಿಕ ಬೆಳವಣಿಗೆಗೆ ತೊಂದರೆ: ಪ್ರತಿಯೊಬ್ಬ ಮನುಷ್ಯನಿಗೂ ಹಸಿವು ಇರುತ್ತದೆ. ಗುಣಮಟ್ಟದ ಪೌಷ್ಟಿಕಾಂಶವುಳ್ಳ ಆಹಾರ ಸೇವನೆ ಅಗತ್ಯ. ಇತ್ತೀಚಿನ ದಿನಗಳಲ್ಲಿ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಎದ್ದು ಕಾಣುತ್ತಿದೆ. ಮಕ್ಕಳಿಗೆ ತರಹೇವಾರಿ ತಿನಿಸುಗಳನ್ನು ಜಿಂಕ್‌ಫ‌ುಡ್‌ ಮಾದರಿಯಲ್ಲಿ ಕೊಡಲಾಗುತ್ತಿದೆ. ಇದರಿಂದ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ತೊಂದರೆಯಾಗುತ್ತಿದೆ ಎಂದರು.

ನಾಗರಿಕ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪೌಷ್ಟಿಕಾಂಶವುಳ್ಳ ಆಹಾರ ಸಿಗಬೇಕಿದೆ. ಇಲ್ಲದಿದ್ದರೆ ದೇಶದ ಅಭಿವೃದ್ಧಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ಜೀವನದಲ್ಲಿ ಮನುಷ್ಯ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಹಿಂದೆ ನಡೆದ ದುರ್ಘ‌ಟನೆಗಳನ್ನು ಮರೆತು ಇಲ್ಲಿನ ಶಾಂತಿಯುತವಾದ ವಾತವಾರಣವನ್ನು ಸವಿಯಬೇಕು ಎಂದರು.

ನೀರಿನ ಸಮಸ್ಯೆ ಶೀಘ್ರ ನಿವಾರಣೆ: ಇಲ್ಲಿ ವಾಸವಾಗಿರುವ ವಯೋವೃದ್ಧರಿಗೆ ಈ ಆಶ್ರಮ ಆಶ್ರಯ ನೀಡಿ ಅವರ ಕ್ಷೇಮಾಭಿವೃದ್ಧಿ ಮಾಡುತ್ತಿದೆ. ಅವರಿಗೆ ದೈನಂದಿನ ಊಟ, ವಸತಿ, ಬಟ್ಟೆ ಎಲ್ಲಾ ಉಚಿತವಾಗಿ ನೀಡುತ್ತಿದೆ. ಸರ್ಕಾರ ಮತ್ತು ದಾನಿಗಳ ಹಣದ ಸಹಾಯದಿಂದ ಈ ಆಶ್ರಮವು ಅನೇಕ ವರ್ಷಗಳಿಂದ ಮುಂದುವರಿಯುತ್ತಾ ವೃದ್ಧರಿಗೆ ಆಶ್ರಯವನ್ನು ಕಲ್ಪಿಸಿದೆ. ಈಗಾಗಲೇ ಆಶ್ರಮದಲ್ಲಿರುವ ನೀರಿನ ಸಮಸ್ಯೆ, ವೈದ್ಯಕೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುತ್ತೇವೆ ಎಂದು ನ್ಯಾಯಾಧೀಶರು ಭರವಸೆ ನೀಡಿದರು.

ಯೋಗ, ಧ್ಯಾನ ಮಾಡಿ: ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌.ತಮ್ಮೇಗೌಡ ಮಾತನಾಡಿ, ಈ ವೃದ್ಧಾಶ್ರಮದಲ್ಲಿರುವರು ಅನಾಥರೆಂಬ ಭಾವನೆಯನ್ನು ಮನಸ್ಸಿನಿಂದ ತೆಗೆದುಹಾಕಬೇಕು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ವಯಸ್ಸಾದವರ ಮನಸ್ಸಿನಲ್ಲಿ ನಾವು ಅಸಹಾಯಕರು, ನಿಶಕ್ತರು ಎಂಬ ಕೀಳರಿಮೆಯಿಂದ ತಮ್ಮ ಚೈತನ್ಯ ಕಳೆದುಕೊಳ್ಳುತ್ತಾರೆ. ಅವರಿಗೆ ಮಕ್ಕಳಿಂದ ಪ್ರೀತಿ, ಮಮಕಾರ ಸಿಕ್ಕಿರುವುದಿಲ್ಲ.

ಇಂತಹವರು ಪ್ರತಿನಿತ್ಯ ಯೋಗ ಮತ್ತು ಧ್ಯಾನ ಮಾಡಲು ಪ್ರಾಮುಖ್ಯತೆ ನೀಡುವ ಮೂಲಕ ಮನಸ್ಸಿನ ಕಹಿ ಘಟನೆಗಳಿಂದ ನೆಮ್ಮದಿ ದೊರಕಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್‌ ನ್ಯಾಯಾಧೀಶ ಎಚ್‌.ದೇವರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್‌ ಕುಮಾರ್‌, ಸುಲ್ತಾನ್‌ಪೇಟೆಯ ಸತ್ಯ ಸಾಯಿ ವೃದ್ಧಾಶ್ರಮದ ವ್ಯವಸ್ಥಾಪಕ ಮುರಳಿ, ವಕೀಲರು ಮತ್ತು ಯೋಗ ಶಿಕ್ಷಕ ವೀಣಾ ಲೋಕನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ವೃದ್ಧರನ್ನು ನೋಡಿ ಭಾವುಕರಾದ ನ್ಯಾಯಾಧೀಶರು: ವೃದ್ಧಾಶ್ರಮದಲ್ಲಿರುವ 40 ಕ್ಕೂ ಹೆಚ್ಚು ಮಂದಿ ವೃದ್ಧರನ್ನು ನೋಡಿ ಒಮ್ಮೆ ಭಾವುಕರಾದ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ, ವೃದ್ಧರನ್ನು ತಮ್ಮ ತಂದೆ ತಾಯಿಗಳಂತೆ ಭಾವಿಸಿ ಅವರಿಗೆ ಯಾವುದೇ ಅಡಚಣೆಗಳು ಉಂಟಾಗದಂತೆ, ಮಕ್ಕಳಂತೆ ಸ್ನೇಹ ಪ್ರೀತಿಯಿಂದ ನೋಡಿಕೊಳ್ಳಬೇಕು ಎಂದು ಶ್ರೀ ಸತ್ಯಸಾಯಿ ವೃದ್ಧಾಶ್ರಮದ ಆಯೋಜಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ 40 ಮಂದಿ ವಯೋವೃದ್ಧರಿಗೆ ಹಾಲು, ಹಣ್ಣುಗಳನ್ನು ನೀಡಿ ಅವರ ಆರೋಗ್ಯ, ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು 40 ಮಂದಿ ವಯೋವೃದ್ಧರಿಗೆ ಹಾಲು, ಹಣ್ಣು ವಿತರಿಸಿ ಆರೋಗ್ಯ, ಯೋಗ ಕ್ಷೇಮ ವಿಚಾರಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.