ಸರ್ಕಾರಿ ಶಾಲೆ-ಅಂಗನವಾಡಿಗೆ ಹೈಟೆಕ್ ಸ್ಪರ್ಶ
Team Udayavani, Aug 10, 2020, 9:41 AM IST
ಶಿಡ್ಲಘಟ್ಟ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ-ಹೈನುಗಾರಿಕೆ ಮತ್ತು ತರಕಾರಿ ಉತ್ಪಾದನೆಯಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕವಾಗಿ ಸಹ ಅಭಿವೃದ್ಧಿಗೊಳಿಸಲು ದೃಢ ಸಂಕಲ್ಪ ಮಾಡಿರುವ ಜಿಪಂ ಸಿಇಒ ಫೌಝೀಯಾ ತರುನ್ನುಮ್, ಇದೀಗ ಜಿಲ್ಲೆಯ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿ ಮಾಡಲು ಮುಂದಾಗಿದ್ದಾರೆ.
ಜಿಲ್ಲೆಯ 30 ಸರ್ಕಾರಿ ಶಾಲೆಗಳು ಮತ್ತು 30 ಅಂಗನವಾಡಿ ಕೇಂದ್ರಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮಾದರಿಯಾಗಿ ಪರಿವರ್ತಿಸಿ ಇದೇ ಆ.15 ಸ್ವಾತಂತ್ರ್ಯ ದಿನದಂದು ಮಾದರಿಯಾಗಿ ಪರಿವರ್ತನೆಯಾಗುವ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮೂಲಕ ಲೋಕಾರ್ಪಣೆ ಮಾಡಲು ಶತಾಯಗತಾಯ ಪ್ರಯತ್ನದಲ್ಲಿ ತೊಡಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರತಾಲೂಕಿನ ಮುದ್ದೇನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಜಿಪಂ ಸಿಇಒ ಫೌಝೀಯಾ ತರುನ್ನುಮ್, ಜಿಲ್ಲೆಯಲ್ಲಿ 30 ಸರ್ಕಾರಿ ಶಾಲೆ , 30 ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಪರಿವರ್ತಿಸಲು ಈಗಾಗಲೇ ಕೆಲಸ ಆರಂಭಿಸಿದ್ದೇವೆ. ಸ್ವಾತಂತ್ರ್ಯ ದಿನಾಚರಣೆ ಮೊದಲು ಎಷ್ಟು ಕಾಮಗಾರಿ ಪೂರ್ಣಗೊಳುತ್ತದೆಯೋ ಅದನ್ನು ಉಸ್ತುವಾರಿ ಸಚಿವರಿಂದ ಉದ್ಘಾಟನೆ ಮಾಡಿಸುತ್ತೇವೆ. ಜಿಲ್ಲೆಯ ಮುದ್ದೇನ ಹಳ್ಳಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರು ವ್ಯಾಸಂಗ ಮಾಡಿದಸರ್ಕಾರಿ ಪ್ರೌಢ ಶಾಲೆಯನ್ನು ಸಕಲ ಸೌಲಭ್ಯದೊಂದಿಗೆ ಮಾದರಿಯಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಮುದ್ದೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯ 4 ಎಕರೆ ಜಮೀನಿನಲ್ಲಿ ಕಾಂಪೌಂಡ್, ವಿದ್ಯಾರ್ಥಿಗಳಿಗಾಗಿ ಖೋ ಖೋ, ಕಬಡ್ಡಿ, ವಾಲಿಬಾಲ್ ಕೋರ್ಟ್, ಗ್ರಂಥಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳ ಅನುಕೂಲ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ