High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!


Team Udayavani, Apr 14, 2024, 4:19 PM IST

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಜನರ ನೆತ್ತಿ ಸುಡುತ್ತಿರುವ ಉರಿ ಬಿಸಿಲಿಗೆ ಜಿಲ್ಲೆಯ ಜನ ಜೀವನ ಹೈರಾಣ ಆಗುತ್ತಿದ್ದು, ಕಾದ ಕೆಂಡದಂತೆ ಆಗಿರುವ ತಾಪಮಾನಕ್ಕೆ ತೀವ್ರ ಕಂಗಾಲಾಗಿರುವ ಜನ ಮಳೆರಾಯನ ಕೃಪೆಗಾಗಿ ಆಕಾಶದ ಕಡೆಗೆ ದಿಟ್ಟಿಸಿ ನೋಡುತ್ತಿದ್ದು, ತಕ್ಷಣ ಮಳೆ ಕೃಪೆ ತೋರದಿದ್ದರೆ ಜಿಲ್ಲೆ ಇನ್ನಷ್ಟು ಬಿಸಿಲಿನ ಸಂಕಷ್ಟಕ್ಕೆ ಒಳಗಾಗಲಿದೆ.

ಹೌದು, ಕಳೆದ ವರ್ಷ ಮುಂಗಾರು, ಹಿಂಗಾರು ಕೈ ಕೊಟ್ಟಿದ್ದರಿಂದ ರೈತರ ಬೆಳೆದ ಬೆಳೆಗಳು ಒಣಗಿ ಜಿಲ್ಲೆಯು ಸಂಪೂರ್ಣವಾಗಿ ಮಳೆಯ ಅವಕೃಪೆಗೆ ಒಳಗಾಗಿ ದ್ದರಿಂದ ಸರ್ಕಾರ ಜಿಲ್ಲೆಯನ್ನು ಸಂಪೂರ್ಣ ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಿತು. ಸರಿ ಸುಮಾರು ವರ್ಷದಿಂದ ಜಿಲ್ಲೆಯಲ್ಲಿ ಹನಿ ಮಳೆ ಆಗಿಲ್ಲ. ಇದರ ಪರಿಣಾಮ ಬೇಸಿಗೆಯ ರಣ ಬಿಸಿಲು ಜನರನ್ನು ಇನ್ನಿಲ್ಲದಂತೆ ಕಾಡ ತೊಡಗಿದೆ.

ಆರೋಗ್ಯದಲ್ಲಿ ಏರುಪೇರು:  ಜಿಲ್ಲಾದ್ಯಂತ ತಾಪಮಾನ ಸುಮಾರು 38 ಡಿಗ್ರಿ ತಲುಪಿದ್ದು, ಸಾಮಾನ್ಯವಾಗಿ ಬೇಸಿಗೆಯಲ್ಲಿ ಜಿಲ್ಲೆಯ ತಾಪಮಾಣ ಕನಿಷ್ಠ 32 ರಿಂದ 35 ರೊಳಗೆ ಇರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಏಪ್ರಿಲ್‌ ತಿಂಗಳ ಆರಂಭದಿಂದ ಬೇಸಿಗೆಯ ಬಿಸಿ ಜನರನ್ನು ಸಾಕಷ್ಟು ಸಂಕಷ್ಟಕ್ಕೀಡು ಮಾಡಿದ್ದು, ಜನ ಜೀವನ ಅಸ್ತವ್ಯಸ್ಥ ಮಾಡಿದೆ. ಬಿಸಿಲಿನ ಪರಿಣಾಮ ಜನರ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಕಂಡಿದ್ದು, ಬೇಸಿಗೆಯಲ್ಲಿ ಜನ ಕೆಮ್ಮು, ನೆಗಡಿ, ತೀವ್ರ ತಲೆನೋವು, ಜ್ವರದ ಬಿಸಿಗೆ ನಲುಗುವಂತಾಗಿದೆ. ಜೊತೆಗೆ ಮಕ್ಕಳು, ವಯೋ ವೃದ್ಧರು. ಮಹಿಳೆಯರು ಬೇಸಿಗೆಯ ಪ್ರಖರತೆಗೆ ಮನೆಯಿಂದ ಹೊರ ಬರಲು ಹಿಂದೇಟು ಹಾಕುವ ಸ್ಥಿತಿ ಇದ್ದು, ಮಹಿಳೆಯರು, ಮಕ್ಕಳು ಮನೆಯಿಂದ ಹೊರಗೆ ಬರಲು ಛತ್ರಿ ಬಳಸಿ ತಿರುಗಾಡುವ ಸ್ಥಿತಿಗೆ ಬಿಸಿಲು ತಂದೊಡ್ಡಿದೆ. ಮೊದಲೇ ಚಿಕ್ಕಬಳ್ಳಾಪುರ ಬಯಲು ಪ್ರದೇಶವಾಗಿದ್ದು ಹಲವು ವರ್ಷಗಳಿಂದ ಶಾಶ್ವತ ನೀರಾವರಿ ಇಲ್ಲದೇ ಮಳೆಯನ್ನೆ ಅಶ್ರಯಿಸಿಕೊಂಡು ಜಿಲ್ಲೆಯ ಜನತೆ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಈ ವರ್ಷ ಹಿಂಗಾರು ಮುಂಗಾರು ಎರಡು ರೈತರಿಗೆ ಕೈ ಕೊಟ್ಟಿದ್ದು ಬದುಕಿಗೆ ಆಸರೆ ಆಗಬೇಕಿದ್ದ ಬೆಳೆ ಕಳೆದುಕೊಂಡಿರುವ ರೈತರು ಮತ್ತೂಂದು ಕಡೆ ಮಳೆ ಕೊರತೆಯಿಂದ ಕಾಡುತ್ತಿರುವ ಬರಗಾಲಕ್ಕೆ ಬದುಕಿನ ಬಂಡಿ ಮುನ್ನೆಸುವುದು ಸವಾಲಾಗಿ ಪರಿಣಮಿಸಿದೆ.

ಮಳೆ ಬಿದ್ದರೆ ಅಷ್ಟೇ ಜಿಲ್ಲೆಯ ಜನರಿಗೆ ನೆಮ್ಮದಿ.. :

ಬರಡು ಜಿಲ್ಲೆಯಲ್ಲಿ ಸದ್ಯ ಬಿಸಿಲಿನ ಪರಿಣಾಮ ಭೂಮಿ ಕಾಲಿಡದಷ್ಟು ಕಾದ ಕೆಂಡವಾಗಿದೆ. ಬೇಸಿಗೆಯಿಂದ ಸಾಕಷ್ಟು ರೋಗ ರುಜನಗಳು ಆವರಿಸಿಕೊಂಡು ಜನ ಆಂತಕದಲ್ಲಿದ್ದಾರೆ. ನೀರಿನಲ್ಲದೇ ಕೃಷಿ ಚಟುವಟಿಕೆಗಳು ಸ್ತಬ್ದವಾಗಿ ತೊಡಗಿವೆ. ಕುಡಿಯುವ ನೀರಿಗೂ ಜನ ಪರದಾಡುವಂತಾಗಿದೆ. ಮಳೆ ಬಿದ್ದರೆ ಮಾತ್ರ ಜಿಲ್ಲೆಯ ಜನರಿಗೆ ನೆಮ್ಮದಿ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೃಪೆ ತೋರಿದ್ದರೂ ಜಿಲ್ಲೆಯಲ್ಲಿ ಮಳೆಗಾಗಿ ಜನ ಚಾತಕಪಕ್ಷಿಗಳಂತೆ ಎದುರು ನೋಡುತ್ತಿದ್ದಾರೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.