ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರ ಬಳಸಿದರೆ ಹೆಚ್ಚು ಇಳುವರಿ
Team Udayavani, Jun 20, 2019, 3:00 AM IST
ಚಿಕ್ಕಬಳ್ಳಾಪುರ: ರೈತರು ಯಾವುದೇ ಬೆಳೆ ತೆಗೆಯಬೇಕಾದರೂ ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಸಮತೋಲನ ಬಳಕೆಯಿಂದ ಮಣ್ಣಿನ ಆರೋಗ್ಯ ಕಾಪಾಡಲು ಸಾಧ್ಯ. ಇದರಿಂದ ರೈತರಿಗೆ ಬೇಸಾಯದ ಖರ್ಚು ಕಡಿಮೆಯಾಗುವುದಲ್ಲದೇ ಗುಣಮಟ್ಟದ ಇಳುವರಿಯಿಂದ ಅಧಿಕ ಲಾಭ ಪಡೆಯಬಹುದು ಎಂದು ಕುರುಬೂರು ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಬಿ.ಗಾಯತ್ರಿ ತಿಳಿಸಿದರು.
ಜಿಲ್ಲೆಯ ಕುರುಬೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಜಿಲ್ಲೆಯ ರೈತರಿಗೆ ಪ್ರಮುಖ ಬೆಳೆಗಳಲ್ಲಿ ರಸಗೊಬ್ಬರ ಅಸಮತೋಲನ ಬಳಕೆ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸಗೊಬ್ಬರಗಳ ಬಳಕೆಯಿಂದ ಭೂಮಿಯ ಫಲವತ್ತತೆ ಕ್ಷಿಣಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ರೈತರು ರಸಗೊಬ್ಬರಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದರು.
ಒಮ್ಮೆ ಮಣ್ಣಿನ ಫಲವತತ್ತೆ ಕುಸಿದರೆ ಅದರ ಪುನಶ್ಚೇತನ ಬಹಳ ಕಷ್ಟ. ರೈತರು ಡಿಎಪಿ ರಸಗೊಬ್ಬರವನ್ನು ಹೆಚ್ಚಾಗಿ ಬಳಸುವುದು ಸೂಕ್ತವಲ್ಲ ಹಾಗೂ ಪೊಟ್ಯಾಷ್ನ ಬಳಕೆಗೆ ಒತ್ತು ನೀಡಬೇಕು. ರೈತರಿಗೆ ಯಾವ ಬೆಳೆಗೆ ಯಾವ ಗೊಬ್ಬರ ಬಳಸಬೇಕು, ರಾಸಾಯನಿಕ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಕುರಿತು ರೈತರಿಗೆ ಸೂಕ್ತ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಡಾ.ಆರ್.ಮಂಜುನಾಥ, ಬೇಸಾಯಶಾಸ್ತ್ರದ ವಿಜ್ಞಾನಿಗಳಾದ ವಿಶ್ವನಾಥ್ ಕೊಟ್ಟಿಗೆ ಗೊಬ್ಬರವನ್ನು ಟ್ರೆçಕೋಡರ್ಮದೊಂದಿಗೆ ಉಪಚರಿಸಿ ಮಣ್ಣಿಗೆ ಸೇರಿಸುವ ತಂತ್ರಜ್ಞಾನದ ಬಗ್ಗೆ ತಿಳಿಸಿ ಮಣ್ಣಿನಿಂದ ಹರಡುವ ರೋಗಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು. ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಹಾಯಕಿ ಅರುಣಾ, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ 30 ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ