ಪೌರತ್ವದ ಕಿಚ್ಚಿನ ನಡುವೆ ಅಂತರ್ ಧರ್ಮೀಯ ವಿವಾಹ; ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿಯ ಮದುವೆ
Team Udayavani, Dec 19, 2019, 11:08 AM IST
ಚಿಕ್ಕಬಳ್ಳಾಪುರ: ರಾಷ್ಟ್ರದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ತೀವ್ರ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಗೌರಿಬಿದನೂರಲ್ಲಿ ಬಿಜೆಪಿ ಮುಖಂಡರ ಪೌರೋಹಿತ್ಯದಲ್ಲಿ ಹಿಂದೂ ಯುವಕ ಮುಸ್ಲಿಂ ಯುವತಿಯೊಂದಿಗೆ ವಿವಾಹ ಆಗಿರುವ ಘಟನೆ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು, ಮಂಜುನಾಥ್ ಜೊತೆ ಸುಹಾನ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಇವರು ಗೌರಿಬಿದನೂರು ನಗರದ ಉಪ್ಪಾರಕಾಲೋನಿ ನಿವಾಸಿಗಳಾಗಿದ್ದಾರೆ.
ಯುವತಿಯ ಪೋಷಕರ ಜೊತೆ ಸಂಧಾನಕ್ಕೆ ಪ್ರಯತ್ನಿಸಿದ್ದ ಬಿಜೆಪಿ ಮುಖಂಡರ ಸಂಧಾನ ವಿಫಲವಾಗಿದ್ದು ಯುವತಿ ಪೋಷಕರ ವಿರೋಧದ ನಡುವೆ ವಿವಾಹ ನಡೆದಿದೆ.
ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಹಾಗೂ ಮಂಜುನಾಥ್ ಇಂದು ದಾಂಪತ್ಯ ಜೀವನಕ್ಕೆ ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ರವಿನಾರಾಯಣ ರೆಡ್ಡಿ ಮುಂದಾಳತ್ವದಲ್ಲಿ ವಿವಾಹ ನಡೆದಿದ್ದು, ಅವರು ಸದ್ಯ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಹಾಲಿ ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ