ತ್ಯಾಜ್ಯ ನೀರಿನಿಂದ ಹಿಪ್ಪು ನೇರಳೆ ತೋಟ


Team Udayavani, May 17, 2019, 1:43 PM IST

chikk-4

ಚಿಕ್ಕಬಳ್ಳಾಪುರ: ವ್ಯರ್ಥವಾಗುತಿದ್ದ ಮನೆ ಬಳಕೆ ನೀರನ್ನೇ ಬಳಸಿಕೊಂಡು ತಾಲೂಕಿನ ಕುಪ್ಪಳ್ಳಿಯ ರೈತ ಮುನಿಯಪ್ಪ ಹಿಪ್ಪುನೇರಳೆ ಸೊಪ್ಪಿನ ತೋಟ ಬೆಳೆದು ಜಿಲ್ಲೆಯ ಇತರೇ ರೈತರಿಗೆ ಮಾದರಿಯಾಗಿದ್ದು, ಮುನಿಯಪ್ಪ ತೋಟ ಈಗ ಇತರೇ ರೈತರಿಗೆ ಪ್ರಯೋಗಾಲಯ ಶಾಲೆಯಾಗಿ ಪರಿಣಮಿಸಿದೆ.

ಇತ್ತೀಚಿಗೆ ಬಯಲುಸೀಮೆಯಲ್ಲಿ ತೀವ್ರ ಮಳೆ ಕೊರತೆ, ಅಂತರ್ಜಲ ಕುಸಿತದಿಂದ ಕೈಕೊಡುತ್ತಿರುವ ಕೊಳವೆ ಬಾವಿಗಳಿಂದ ಲಕ್ಷಾಂತರ ರೂ. ಬಂಡವಾಳ ಹಾಕಿ ಕೈಸುಟ್ಟುಕೊಳ್ಳುತ್ತಿರುವ ರೈತರು ನೊಂದು ಕೃಷಿಯಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಮುನಿಯಪ್ಪ ಕೊಳಚೆ ನೀರನ್ನು ಬಳಸಿ ಹಿಪ್ಪುನೇರಳೆ ಸೊಪ್ಪು ಬೆಳೆದಿದ್ದಾರೆ.

ವ್ಯರ್ಥ ನೀರು ಸಂಗ್ರಹ: ಎರಡು ವರ್ಷಗಳ ಹಿಂದೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ)ಯೋಜನೆಯಡಿ ತಮ್ಮ ಮಳೆ ಆಶ್ರಿತ 30 ಗುಂಟೆ ಜಮೀನಿನಲ್ಲಿ ಹಿಪ್ಪುನೇರಳೆಯ 330 ಸಸಿಗಳನ್ನು ನಾಟಿ ಮಾಡಿಸಿದರು. ಬೇಸಿಗೆಯಲ್ಲಿ ಮರಗಡ್ಡಿ ಬೆಳೆಸಲು ಮುನಿಯಪ್ಪ ಟ್ಯಾಂಕರ್‌ ನೀರು ಮೊರೆ ಹೋಗುತ್ತಿದ್ದರು.

ಟ್ಯಾಂಕರ್‌ ನೀರಿನ ಖರ್ಚು, ಸೊಪ್ಪಿನ ಆದಾಯ ಸರಿ ಹೊಂದದಿರುವುದರಿಂದ ನೀರಿನ ಬಗ್ಗೆ ಪರ್ಯಾಯ ಯೋಚನೆ ಮಾಡುವ ಸಂದರ್ಭದಲ್ಲಿ ತ್ಯಾಜ್ಯ ನೀರಿನ ಬಳಕೆಯ ಚಿಂತನೆ ಮಾಡಿ ತನ್ನ ಮನೆ, ತಟ್ಟೆ, ಪಾತ್ರೆ, ಬಟ್ಟೆ ತೊಳೆದು ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ ರೇಷ್ಮೆ ಸೊಪ್ಪು ಬೆಳೆಯಲು ನಿರ್ಧರಿಸಿದರು.

ಪ್ರತಿಫ‌ಲಕ್ಕೆ ವಿಳಂಬ ಇಲ್ಲ: ಕಳೆದ ಮೂರು ತಿಂಗಳಿಂದ ಮನೆಯಲ್ಲಿ ಸಂಗ್ರಹವಾಗುವ ತ್ಯಾಜ್ಯ ನೀರನ್ನು 20 ಲೀ. ಕ್ಯಾನ್‌ಗಳಿಗೆ ತುಂಬಿಕೊಂಡು ತೋಟದಲ್ಲಿ ಗಿಡಗಳಿಗೆ ಹರಿಸಲು ಮುಂದಾದ ಮುನಿಯಪ್ಪಗೆ ಅದರ ಪ್ರತಿಫ‌ಲ ತಿಳಿಯಲು ಹೆಚ್ಚು ದಿನ ಕಾಯಲಿಲ್ಲ.

ಹನಿ ನೀರಾವರಿ ಮಾದರಿಯಲ್ಲಿ ಗಿಡಗಳಿಗೆ ನೀರುಣಿಸಿದರೆ ಇನ್ನೂ ಹೆಚ್ಚು ಪ್ರಯೋಜನಕಾರಿ ಎಂಬುದನ್ನು ಅರಿತು ಖಾಲಿ ಯಾದ ಕುಡಿಯುವ ನೀರಿನ ಬಾಟಲಿಗಳನ್ನು ಸಂಗ್ರಹಿಸಿ ಗಿಡ ಗಳಿಗೆ ಬುಡಕ್ಕೆ ಕಟ್ಟಿ ಅವುಗಳಿಗೆ ನೀರು ತುಂಬಿಸಿದರು. ಹೀಗಾಗಿ ಮುನಿಯಪ್ಪ ಪ್ರಯೋಗ ಯಶಸ್ಸು ಕಂಡು ಈಗ 30 ಗುಂಟೆ ಜಮೀನಲ್ಲಿ ಹಿಪ್ಪುನೇರಳೆ ಸೊಪ್ಪು ಸಾಕಷ್ಟು ಇಳುವರಿ ಜೊತೆಗೆ ಗುಣಮಟ್ಟದ ಸೊಪ್ಪು ಬೆಳೆದಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯ ಹನಿ ಹನಿ ನೀರಿಗೂ ಹಾಹಾಕಾರ ಎದುರಾಗಿ ರೈತರು ಲಕ್ಷಾಂತರ ರೂ. ವೆಚ್ಚ ಮಾಡಿ ಹಾಕಿಸುತ್ತಿ ರುವ ಕೊಳವೆ ಬಾವಿಗಳು ವಿಫ‌ಲವಾಗಿ ಕೃಷಿ ಚಟುವಟಿಕೆಗಳಿಂದ ದೂರ ಸರಿಯುತ್ತಿರುವ ಸಂದರ್ಭದಲ್ಲಿ ಕುಪ್ಪಳ್ಳಿಯ ರೈತ ಮುನಿಯಪ್ಪ ತನ್ನ ಅಲ್ಪ ಜಮೀನಿನಲ್ಲಿ ತ್ಯಾಜ್ಯ ನೀರು ಬಳಸಿ ಕೊಂಡು ರೇಷ್ಮೆ ಸೊಪ್ಪು ಬೆಳೆದಿರುವುದು ನಿಜಕ್ಕೂ ಶ್ಲಾಘನೀಯ ವಿಚಾರ.

ಸಮೃದ್ಧ ಇಳುವರಿ

ಎರಡು ವರ್ಷದ ಹಿಂದೆ ಹಳ್ಳದ ನೀರು ತಂದು ತೋಟಕ್ಕೆ ಹಾಕುತ್ತಿದ್ದೆ. ಈಗ ಹಳ್ಳ ಕೂಡ ಒಣಗಿದೆ. 1,500ರಿಂದ 1,900 ಅಡಿ ಆಳಕ್ಕೆ ಕೊಳವೆಬಾವಿ ಕೊರೆಯಿಸಿದರೂ ನೀರು ಸಿಗುವುದು ಖಚಿತವಿಲ್ಲ. ಹಿಡುವಳಿ ಬೇರೆ ಚಿಕ್ಕದು. ನೀರಿಗಾಗಿ ಏನು ಮಾಡೋಣ ಎಂದು ಯೋಚಿಸುತ್ತಿದ್ದಾಗ ವ್ಯರ್ಥವಾಗುತ್ತಿದ್ದ ಮನೆ ಬಳಕೆ ನೀರು ಗಮನಕ್ಕೆ ಬಂತು. ಪ್ರತಿ ದಿನ ಮನೆಯಲ್ಲಿ ಸಂಗ್ರಹವಾಗುವ ತ್ಯಾಜ್ಯ ನೀರನ್ನು ಬಳಸಿಕೊಂಡು ಹೀಪ್ಪು ನೇರಳೆ ಸೊಪ್ಪು ಬೆಳೆದಿದ್ದೇನೆ. ಇಳುವರಿ ಕೂಡ ಚೆನ್ನಾಗಿ ಬಂದಿದೆ ಎಂದು ಮುನಿಯಪ್ಪ ಸಂತಸದಿಂದ ನುಡಿದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.