ಅಮಾನಿಕೆರೆಗೆ ಎಚ್.ಎನ್.ವ್ಯಾಲಿ ನೀರು
Team Udayavani, May 25, 2020, 8:03 AM IST
ಶಿಡ್ಲಘಟ್ಟ: ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಬ್ಬಾಳ-ನಾಗವಾರ ಕೆರೆಯ ಶುದ್ಧೀ ಕರಿಸಿದ ನೀರು ಹರಿಯುತ್ತಿದ್ದು, ಶೀಘ್ರದಲ್ಲಿ ಶಿಡ್ಲಘಟ್ಟ ನಗರದ ಅಮಾನಿಕೆರೆಗೆ ಹೆಚ್.ಎನ್.ವ್ಯಾಲಿ ನೀರು ಹರಿ ಯಲಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು. ನಗರದ ಕದಿರಿಪಾಳ್ಯದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾ ವರಿ ಯೋಜನೆ ಜಾರಿಗೊಳಿಸಲು ಹೋರಾಟ ನಡೆಸಿದ ಫಲದಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಚ್.ಎನ್.ವ್ಯಾಲಿ ನೀರು ಹರಿಸಲು ಯೋಜನೆ ರೂಪಿಸಿದ್ದರಿಂದ ಅವಳಿ ಜಿಲ್ಲೆಗಳಿಗೆ ಶುದ್ಧೀಕರಿಸಿದ ನೀರು ಕೆರೆಗಳಿಗೆ ಹರಿಯಲಿದೆ.
ಇದರಿಂದ ಅಂತರ್ಜಲ ಮಟ್ಟ ವೃದಿಯಾಗಿ ರೈತರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆ ಗಳಲ್ಲಿ ಹೂಳೆತ್ತುವ ಜಲಸಂವರ್ಧನೆ ಯೋಜನೆ ಯನ್ನು ತಮ್ಮ ಕಾಲಾವಧಿಯಲ್ಲಿ ಜಾರಿಗೊಳಿಸಲಾಗಿತ್ತು. ನಂತರ ಬಂದ ಸರ್ಕಾರ ಈ ಯೋಜನೆಯನ್ನು ಮುಂದುವರಿ ಸಿಲ್ಲ. ಇದೀಗ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಅಂರ್ತಜಲ ಮಟ್ಟ ವೃದಿಗೊಳಿಸುವ ಕಾಮಗಾರಿಗಳನ್ನು ಸರ್ಕಾರ ಕೈಗೊಂಡಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ನಾರಾಯಣ ಸ್ವಾಮಿ, ರಿಯಾಝ್ಪಾಷ, ವಕೀಲ ಮುನಿರಾಜು, ಭಾಜಪ ಮುಖಂಡ ಬಿ.ಕೆಂಪರೆಡ್ಡಿ, ನಗರಸಭೆ ಪೌರಾ ಯುಕ್ತ ತ್ಯಾಗರಾಜ್, ಆರೋಗ್ಯ ನಿರೀಕ್ಷಕಿ ಶೋಭಾ, ನಗರಸಭೆ ನೀರು ಸರಬರಾಜು ವಿಭಾಗದ ಮುರಳಿ, ಜೆಇ ರಮೇಶ್, ಪ್ರಸಾದ್,ಸುಧಾಕರ್, ಶ್ರೀನಿವಾಸ್, ರೆಡ್ಡಿ, ಮನೋಹರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ