96 ಸಾವಿರ ಮಕ್ಕಳಿಗೆ ಆಹಾರ ಧಾನ್ಯ ಭಾಗ್ಯವಿಲ್ಲ

ಅಕ್ಷರದಾಸೋಹ ಬಿಸಿಯೂಟ ಯೋಜನೆ ಆಹಾರಧಾನ್ಯ ಸ್ಥಗಿತ

Team Udayavani, Sep 8, 2020, 3:58 PM IST

Cb-tdy-1

ಸಾಂದರ್ಭಿಕ ಚಿತ್ರ

ಶಿಡ್ಲಘಟ್ಟ: ಸರ್ಕಾರಿ ಶಾಲಾ ಮಕ್ಕಳ ದಾಖಲಾತಿ ಮತ್ತು ಪೌಷ್ಟಿಕಾಂಶ ವೃದ್ಧಿಸುವ ಉದ್ದೇಶದಿಂದ ಅಕ್ಷರದಾಸೋಹ ಬಿಸಿಯೂಟ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಕಿಟ್‌ (ಆಹಾರ ಧಾನ್ಯಗಳು) ಯೋಜನೆಯಿಂದ ಜಿಲ್ಲೆಯ 96,434 ವಿದ್ಯಾರ್ಥಿಗಳು ಈ ಭಾಗ್ಯದಿಂದ ವಂಚಿತಗೊಂಡಿದ್ದಾರೆ.

ಆಹಾರಧಾನ್ಯ ಸ್ಥಗಿತ ಕೋವಿಡ್‌ ಕಾರಣದಿಂದ ಶಾಲೆಯಿಂದ ದೂರ ಉಳಿದಿದ್ದ ವಿದ್ಯಾರ್ಥಿಗಳ ಮನೆಗಳಿಗೆ ತಲುಪುತ್ತಿದ್ದ ಆಹಾರ ಸಾಮಗ್ರಿಗಳು ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿದ್ದು, ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸುವ ಸಲುವಾಗಿ ಜಾರಿಗೊಳಿಸಿದ ಯೋಜನೆ ಹಳ್ಳ ಹಿಡಿಯುಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೋವಿಡ್‌-19 ಸಂಕಷ್ಟದ ಪರಿಸ್ಥಿತಿ ನಿವಾರಿಸಲು ಮತ್ತು ಬರಪೀಡಿತ ಮತ್ತು ಬರಪೀಡಿತರಹಿತ ತಾಲೂಕುಗಳಲ್ಲಿ ಇರುವ 1,636 ಸರ್ಕಾರಿ ಶಾಲೆ, ಅನುದಾನಿತ ಶಾಲೆಗಳ 96,434 ವಿದ್ಯಾರ್ಥಿಗಳಿಗೆ ಮಾರ್ಚ್‌, ಏಪ್ರೀಲ್‌, ಮೇ ಅಂತ್ಯದವರೆಗೆ ಆಹಾರ ಧಾನ್ಯಗಳ (ಕಿಟ್‌)ನ್ನು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಶಾಲಾ ಶಿಕ್ಷಕರಿಂದ ನಡೆಸಲಾಯಿತು. ಆದರೆ ಕಳೆದ ಮೂರು ತಿಂಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ಭಾಗ್ಯ ಇಲ್ಲದಂತಾಗಿದೆ.

ನೌಕರರ ಅತಂತ್ರ ಪರಿಸ್ಥಿತಿ: ಕೋವಿಡ್‌ನಿಂದ ಮಕ್ಕಳು ಶಾಲೆಗೆ ಬರದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆಯಾಗಬಾರದು ಎಂದು 1636 ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳ 96,434 ಮಕ್ಕಳು ಈ ಯೋಜನೆಯಿಂದ ಲಾಭ ಪಡೆಯುತ್ತಿದ್ದರು. ಆದರೇ ಮೇ ಅಂತ್ಯಕ್ಕೆ ಯೋಜನೆ ಸ್ಥಗಿತಗೊಂಡಿದ್ದು, ಜೂನ್‌-ಜುಲೈ ಮತ್ತು ಆಗಸ್ಟ್‌ ತಿಂಗಳ ಆಹಾರ ಧಾನ್ಯಗಳು ಸರ್ಕಾರದಿಂದ ಪೂರೈಕೆಯಾಗಬೇಕಾಗಿದೆ.ಮತ್ತೂಂದೆಡೆ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ನೌಕರರು ಸಹ ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ.

21 ದಿನ ಸರಬರಾಜು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 21 ದಿನಗಳ ಕಾಲ (ಮಾರ್ಚ್‌ 13 ರಿಂದ ಏಪ್ರಿಲ್‌ 10 ವರೆಗೆ) 1 ರಿಂದ 5ನೇ ತರಗತಿಯ ಮಕ್ಕಳಿಗೆ ಪ್ರತಿನಿತ್ಯ 100 ಗ್ರಾಂ ಅಕ್ಕಿ (ಗೋಧಿ), 50 ಗ್ರಾಂ ಬೇಳೆ, ಒಟ್ಟು ತಲಾ ಒಂದು ಮಗುವಿಗೆ 21 ದಿನಗಳ ಅವಧಿಯಲ್ಲಿ 2 ಕೆ.ಜಿ. 100 ಗ್ರಾಂ ಅಕ್ಕಿ (ಗೋಧಿ), 1 ಕೆ.ಜಿ.50 ಗ್ರಾಂ ಬೇಳೆ ಪೂರೈಕೆ ಮಾಡಲಾಗಿತ್ತು. ಅದೇ ರೀತಿ 6 ರಿಂದ 10 ನೇ ತರಗತಿಯ ಮಕ್ಕಳಿಗೆ ಪ್ರತಿನಿತ್ಯ 150 ಗ್ರಾಂ ಅಕ್ಕಿ (ಗೋಧಿ), 75 ಗ್ರಾಂ ಬೇಳೆ ಸಹಿತ 21 ದಿನಗಳ ಅವಧಿಗೆ 1.5 ಕೆ.ಜಿ. ಬೇಳೆ, 7 ಕೆ.ಜಿ. 750 ಗ್ರಾಂ ಅಕ್ಕಿ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿತ್ತು. 37 ದಿನ ಸರಬರಾಜು: ಏಪ್ರಿಲ್‌ 11ರಿಂದ ಮೇ 30 ವರೆಗೆ ಬರಪೀಡಿತ ಮತ್ತು ಬರಪಪೀಡಿತವಲ್ಲದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ 37 ದಿನಗಳ ಕಾಲ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲಾಗಿತ್ತು. ಈ ಅವಧಿಯಲ್ಲಿ ಪ್ರಾಥಮಿಕ ಶಾಲೆಗಳ ಮಗುವಿಗೆ ಪ್ರತಿನಿತ್ಯ 100 ಗ್ರಾಂ ಅಕ್ಕಿ, 50 ಗ್ರಾಂ ಬೇಳೆ (3 ಕೆ.ಜಿ.700 ಗ್ರಾಂ ಅಕ್ಕಿ) (2 ಕೆ.ಜಿ. 250 ಗ್ರಾಂ ಬೇಳೆ) ಸರಬರಾಜು ಮಾಡಲಾಗಿತ್ತು. ಇದೇ ಮಾದರಿಯಲ್ಲಿ 6 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೆ ಪ್ರತಿನಿತ್ಯ 150 ಗ್ರಾಂ ಅಕ್ಕಿ (ಗೋಧಿ), 75 ಗ್ರಾಂ ಬೇಳೆಯಂತೆ 37 ದಿನಗಳ ಅವಧಿಯಲ್ಲಿ 3 ಕೆ.ಜಿ.500 ಗ್ರಾಂ ಬೇಳೆ ಹಾಗೂ 5 ಕೆ.ಜಿ. 500 ಗ್ರಾಂ ಅಕ್ಕಿ ಸರಬರಾಜು ಮಾಡಲಾಗಿತ್ತು.

ಆಹಾರ ಧಾನ್ಯ ಪೂರೈಕೆ ಮಾಡಲಿ: ಕೋವಿಡ್‌-19 ಸಂದರ್ಭದಲ್ಲಿ ಯಾರೂ ಸಹ ಹಸಿವಿನಿಂದ ಅಸುನೀಗಬಾರದೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳುಪಡಿತರ ಚೀಟಿ ಹೊಂದಿರುವ ಬಡವರಿಗೆ ಉಚಿತವಾಗಿ ಮತ್ತು ಕ್ರಮಬದ್ಧವಾಗಿ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿದೆ. ಆದರೆ ದೇಶದ ಭವಿಷ್ಯ ಎಂದು ಪ್ರತಿಬಿಂಬಿ  ಸುವ ವಿದ್ಯಾರ್ಥಿಗಳು ಪೌಷ್ಟಿಕ ಆಹಾರಕ್ಕಾಗಿ ಕಳೆದ 3 ತಿಂಗಳಿಂದ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಸಂಬಂಧಿ ಸಿದ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲು ಮುಂದಾಗಬೇಕಾಗಿದೆ.

ಮೂರು ತಿಂಗಳಿಗೆ ಸೀಮಿತವೇ? :  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 909 ಪ್ರಾಥಮಿಕ ಶಾಲೆಗಳ 44,150 ಮಕ್ಕಳು, 572 ಹಿರಿಯ ಪ್ರಾಥಮಿಕ ಶಾಲೆಗಳ 30,712 ಹಾಗೂ 150 ಪ್ರೌಢ ಶಾಲೆಗಳ 21,572 ಮಕ್ಕಳು ಆಹಾರ ಧಾನ್ಯ ಭಾಗ್ಯದಿಂದ ವಂಚಿತಗೊಂಡಿದ್ದು, ಅಕ್ಷರ ದಾಸೋಹ ಯೋಜನೆಯ ಇಲಾಖಾ ಅಧಿಖಾರಿಗಳು ಸರ್ಕಾರದಿಂದ ಆಹಾರ ಧಾನ್ಯಗಳು ಸರಬರಾಜು ಆಗುವ ನಿರೀಕ್ಷೆಯಲ್ಲಿದ್ದಾರೆ. ಇದರಿಂದ ಪೌಷ್ಟಿಕಾಂಶ ಹೆಚ್ಚಿಸುವ ಯೋಜನೆ ಕೇವಲ ಮೂರು ತಿಂಗಳಿಗೆ ಸೀಮಿತವೇ ಎಂದು ಪೋಷಕರು ಪ್ರಶ್ನಿಸುವಂತಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೂನ್‌-ಜುಲೈ ಮತ್ತು ಆಗಸ್ಟ್‌ ತಿಂಗಳಿನ ಅಕ್ಷರದಾಸೋಹ ಬಿಸಿಯೂಟ ಯೋಜನೆಯ ಆಹಾರಧಾನ್ಯಗಳನ್ನು ಬಿಡುಗಡೆ ಮಾಡಲು ಇಲಾಖೆಯ ಜಂಟಿ ನಿರ್ದೇಶಕರಿಂದಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಿದರೆ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳುತ್ತೇವೆ. – ಜಿ.ರಘುನಾಥ್‌ರೆಡ್ಡಿ, ಜಿಲ್ಲಾ ಅಕ್ಷರದಾಸೋಹ ಯೋಜನೆಯ ಶಿಕ್ಷಣಾಕಾರಿ

 

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.