ಜೀವವೈವಿಧ್ಯ ತಾಣವಾಗಿ ಗುರುತಿಸಿ: ಅನಂತ ಹೆಗಡೆ
Team Udayavani, Aug 30, 2020, 1:33 PM IST
ಗುಡಿಬಂಡೆ: ಪಟ್ಟಣದ ಸುರಸದ್ಮಗಿರಿ ಬೆಟ್ಟ ಹಾಗೂ ಎಲ್ಲೋಡು ಗ್ರಾಮದ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಬೆಟ್ಟವನ್ನು ಸಂರಕ್ಷಣೆ ಮಾಡಲು ಸಮಿತಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಿ ಜೀವ ವೈವಿಧ್ಯ ತಾಣವನ್ನಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದಜೀವ ವೈವಿಧ್ಯ ಕಾಯ್ದೆ ಸಮಿತಿಗಳ ಸಮಾಲೋಚನಾ ಸಭೆಯಲ್ಲಿ ಈ ವೇಳೆ ಮಾತನಾಡಿದ ಅವರು, ಜೈವಿಕ ವೈವಿಧ್ಯ ಅಧಿನಿಯಮಗಳ ಪ್ರಕಾರ ಪ್ರತಿ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಜೀವ ವೈವಿಧ್ಯ ನಿರ್ವಹಣಾ ಸಮಿತಿ ರಚಿಸಬೇಕು. ಈ ಸಮಿತಿಯು ತನ್ನ ಅಧಿಕಾರ ವ್ಯಾಪ್ತಿ ಯಲ್ಲಿ ಜೀವ ವೈವಿಧ್ಯ ಸಂರಕ್ಷಣೆ, ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆ, ಜೀವಿಗಳ ಆವಾಸ ಸ್ಥಾನಗಳನ್ನು ಗುರುತಿಸುವಿಕೆ, ನದಿ ಮೂಲಗಳ ಗುರುತಿಸುವ ಹಾಗೂ ಸಂರಕ್ಷಣೆ ಸೇರಿದಂತೆ ಸ್ಥಳೀಯವಾಗಿ ಬೆಳೆಯಬಹುದಾದ ತೊಟಗಾರಿಕೆ, ಅರಣ್ಯ ಸಸಿಗಳ ಕುರಿತು ದಾಖಲಾತಿ ಮಾಡುವುದು ಈ ಸಮಿತಿಗಳ ಕೆಲಸವಾಗಿದೆ ಎಂದರು.
ನದಿ ಮೂಲಗಳು ಒತ್ತುವರಿ ಒತ್ತುವರಿ ತೆರವುಗೊಳಿಸಿದ ನಂತರ ಆ ಭಾಗದಲ್ಲಿ ಬೇಲಿ ಹಾಕುವ ಬದಲು ಅಚ್ಚುಕಟ್ಟು ಪ್ರದೇಶದಲ್ಲಿ ಉಪಯುಕ್ತವಾದ ಮರಗಳನ್ನು ಬೆಳೆಸುವುದರಿಂದ ಹಲವಾರು ಜೀವರಾಶಿಗಳಿಗೆ ಸಹಕಾರಿಯಾಗುತ್ತದೆ ಎಂದರು. ತಹಶೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ಚಂದ್ರಕಾಂತ್, ಅಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷಬೈರಾರೆಡ್ಡಿ, ಗ್ರಾಮ ವಿಕಾಸ ಸಂಸ್ಥೆಯ ಶ್ರೀಧರ್ ಸಾಗರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಕೃಷಿ, ತೋಟಗಾರಿಕೆ, ಸಾಮಾಜಿಕ ಹಾಗೂ ವಲಯ ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಪಂ, ಪಿಡಿಒಗಳು ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು