ಅಕ್ರಮ ಖಾತೆ: ತಪ್ಪಿತಸ್ಥರ ವಿರುದ್ಧ ಕ್ರಮ


Team Udayavani, Oct 20, 2019, 3:00 AM IST

akrama-Khate

ಶಿಡ್ಲಘಟ್ಟ: ತಾಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿಯ ಅಂಕತಟ್ಟಿ ಗ್ರಾಮದಲ್ಲಿ ಗ್ರಾಮಠಾಣೆಯ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿದರೆನ್ನಲಾದ ಪ್ರಕರಣವನ್ನು ಜಿಲ್ಲಾ ಮಟ್ಟದ ವಿಶೇಷ ಅಧಿಕಾರಿಗಳ ತಂಡದಿಂದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಜಿಪಂ ಸಿಇಒ ಫೌಝೀಯಾ ತರುನ್ನುಮ್‌ ತಿಳಿಸಿದರು.

ತಾಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿ ಮುಂದೆ ಧರಣಿ ನಡೆಸುತ್ತಿದ್ದ ಅಂಕತಟ್ಟಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ ಅವರು, ಯಾವುದೇ ಒಂದು ಸಮಸ್ಯೆ ಅಥವಾ ಪ್ರಕರಣವನ್ನು ತ್ವರಿತವಾಗಿ ಬಗೆಹರಿಸಲು ಸಾಧ್ಯವಿಲ್ಲ. ಗ್ರಾಮಠಾಣೆಯ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕೆಂದು ತಾಪಂ ಇಒ ಶಿವಕುಮಾರ್‌ ಅವರಿಗೆ ಸ್ಥಳದಲ್ಲೇ ಆದೇಶಿಸಿದರು.

ಕಠಿಣ ಕ್ರಮ ಭರವಸೆ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಮೀನಿನ ವಿಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒಳಗೊಂಡ ಕಡತವನ್ನು ಕೂಡಲೇ ತಾಪಂ ಇಒ ಸುಪರ್ದಿಗೆ ನೀಡಲು ಪಿಡಿಒಗೆ ಸೂಚಿಸಿ ಗ್ರಾಮದಲ್ಲಿ ಗ್ರಾಮಠಾಣೆಯ ಜಾಗ ಎಷ್ಟಿದೆ? ಎಂಬುದರ ಕುರಿತು ಮರು ಸರ್ವೆ ನಡೆಸಿ ಸರ್ಕಾರಿ ಜಮೀನು ಕಬಳಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶಾಮೀಲಾಗಿದ್ದರೆ ಅವರ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಜಿಪಂ ಸಿಇಒ ಭರವಸೆ ನೀಡಿದರು.

ಮೊಕದ್ದಮೆ ದಾಖಲಿಸಲು ಸೂಚನೆ: ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡು ವಾದಿ-ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ತೀವ್ರಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಾಪಂ ಇಒಗೆ ಸೂಚಿಸಿದರು. ಪ್ರಕರಣ ಸಂಬಂಧ ಈಗಾಗಲೇ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಮಾಹಿತಿ ನೀಡಬೇಕೆಂದು ಎಎಸ್‌ಐ ಅವರಿಗೆ ಸೂಚಿಸಿದರು.

ಭಯದ ವಾತಾವರಣ: ಪ್ರತಿಭಟನಾಕಾರರೊಂದಿಗೆ ಮುಕ್ತವಾಗಿ ಮಾತನಾಡಿದ ಜಿಪಂ ಸಿಇಒ, ಗ್ರಾಮಸ್ಥರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದರಲ್ಲದೇ ಗ್ರಾಮದಲ್ಲಿ ಮಹಿಳೆಯರಿಗೆ ಆಗುತ್ತಿರುವ ತೊಂದರಗಳೇನು? ಕಾರಣಕರ್ತರು ಯಾರು ಎಂದು ತಿಳಿದುಕೊಂಡರು. ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಗ್ರಾಪಂ ಸದಸ್ಯ ಚಂದ್ರಶೇಖರ್‌ ಅವರ ದೌರ್ಜನ್ಯ ಮತ್ತು ದಬ್ಟಾಳಿಕೆ ಹೆಚ್ಚಾಗಿದೆ. ಭಯದ ವಾತಾವರಣದಲ್ಲಿ ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲುತೋಡಿಕೊಂಡರು.

ಪ್ರಾಂತ ರೈತ ಸಂಘದ ಮುಖಂಡ ಮಳ್ಳೂರು ಶಿವಣ್ಣ, ಗ್ರಾಪಂ ಅಧ್ಯಕ್ಷೆ ರಾಧಾ, ಕಾರ್ಯದರ್ಶಿ ಕೃಷ್ಣಪ್ಪ, ಪಿಡಿಒ ಮಮತಾ, ಮಳ್ಳೂರು ಗಿರೀಶ್‌, ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ವೆಂಕಟಸ್ವಾಮಿ, ಚೌಡಸಂದ್ರ ಶ್ರೀನಿವಾಸ್‌, ದೇವರಾಜ್‌, ಜಗನ್ನಾಥ್‌, ಬಾಬು, ನಾರಾಯಣಸ್ವಾಮಿ, ಅನಿತಾ, ಅಮೃತ, ರತ್ನಮ್ಮ, ಗೌರಮ್ಮ, ರಾಧ ಉಪಸ್ಥಿತರಿದ್ದರು.

ಜಿಪಂ ಸಿಇಒ ಭರವಸೆ – ಧರಣಿ ಅಂತ್ಯ: ಅಂಕತಟ್ಟಿ ಗ್ರಾಮದಲ್ಲಿ ಗ್ರಾಮಠಾಣಾ ಜಾಗದ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಜಿಪಂ ಸಿಇಓ ಫೌಝೀಯಾ ತರುನ್ನುಮ್‌ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳ್ಳೂರು ಗ್ರಾಪಂ ಮುಂದೆ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಗ್ರಾಮಸ್ಥರು ಹಿಂಪಡೆದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.