![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ವೈದ್ಯಕೀಯ ವೆಚ್ಚ ಮರುಪಾವತಿಯಲ್ಲಿ ಅಕ್ರಮ
Team Udayavani, Jun 2, 2020, 7:00 AM IST
![vydyakeeya](https://www.udayavani.com/wp-content/uploads/2020/06/vydyakeeya-620x413.jpg)
ಚಿಕ್ಕಬಳ್ಳಾಪುರ: ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವ ವಿಷಯದಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಚ್. ವಂಶಿಕೃಷ್ಣ ಎಂಬಾತ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಹಿ ನಕಲು ಮಾಡಿ ಲಕ್ಷಾಂತರ ರೂ. ಅಕ್ರಮ ಬಿಲ್ ಪಾವತಿಗೆ ಅನುಮೋದನೆ ನೀಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಗೌರಿಬಿದನೂರಿನ 107 ಮಂದಿ ಶಿಕ್ಷಕರಿಗೆ ವಿಚಾರಣೆಗೆ ಹಾಜರಾಗುವಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಏನಿದು ಪ್ರಕರಣ?: ಸರ್ಕಾರಿ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ತಮಗೆ ತಗಲುವ ವೈ ವೆಚ್ಚವನ್ನು ಮರು ಪಾವತಿ ಮಾಡಿಕೊಳ್ಳಲು ಅವಕಾಶ ಇದ್ದು ಇದಕ್ಕೆ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರ ದೃಢೀಕರಣ ಅಗತ್ಯ. ಆದರೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ 107 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚ ಮರು ಪಾವತಿಸುವ ವಿಚಾರದಲ್ಲಿ ಜಿಲ್ಲಾಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ವಂಶಿಕೃಷ್ಣ ಎಂಬಾತ ಶಸ್ತ್ರಚಿಕಿತ್ಸಕರ ಸಹಿ ನಕಲು ಮಾಡಿ ಅಕ್ರಮವೆಸಗಿರುವ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಚಿಕ್ಕಬಳ್ಳಾಪುರ ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ಕೋರಿದ್ದರು.
ಶಿಕ್ಷಕರಿಗೆ ನೋಟಿಸ್: ಈಗ 2015 ಜೂನ್ 4ರಿಂದ 2018ರ ಜನವರಿ 1 ರವರೆಗೂ ವೈದ್ಯಕೀಯ ವೆಚ್ಚ ಮರು ಪಾವತಿ ಮಾಡಿಕೊಳ್ಳಲು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರ ಸಹಿಯನ್ನು ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ನಕಲು ಮಾಡಿ 107 ಮಂದಿಗೆ ದೃಢೀಕರಣ ನೀಡಿರುವ ಹಿನ್ನೆಲೆಯಲ್ಲಿ 107 ಮಂದಿ ಶಿಕ್ಷಕರನ್ನು ವಿಚಾರಣೆಗೆ ಕರೆದಿದ್ದು, ಸೋಮವಾರ 15 ಮಂದಿ ಶಿಕ್ಷಕರು ವಿಚಾರಣೆಗೆ ಹಾಜರಾಗಿದ್ದರು. ಒಟ್ಟು 7 ದಿನಗಳನ್ನು ನಿಗದಿಪಡಿಸಿ ಶಿಕ್ಷಕರ ನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ವಿಚಾರಣೆಗೆ ಕರೆದಿದ್ದು, ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದೆ.
ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ವಂಶಿಕೃಷ್ಣ ಈ ಹಿಂದೆ ಶಸ್ತ್ರಚಿಕಿತ್ಸಕರ ಸಹಿ ನಕಲು ಮಾಡಿ ಕೆಲ ಶಿಕ್ಷಕರಿಗೆ ವೈದ್ಯಕೀಯ ವೆಚ್ಚ ಮರು ಪಾವತಿಗೆ ದೃಢೀಕರಣ ಮಾಡಿದ್ದು, ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ವಹಿಸುವಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.
-ಡಾ.ರಮೇಶ್, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯರು
* ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.