ಕುಗ್ರಾಮಗಳಲ್ಲಿ ಅಕ್ರಮ ಮದ್ಯದ ಹೊಳೆ

ನಿದ್ದೆಗೆ ಜಾರಿದ ಅಬಕಾರಿ ಇಲಾಖೆ ಅಧಿಕಾರಿಗಳು • ತಿಂಗಳಲ್ಲಿ 150 ಕ್ಕೂ ಹೆಚ್ಚು ಪ್ರಕರಣ ದಾಖಲು

Team Udayavani, Jun 7, 2019, 7:30 AM IST

cb-tdy-2..

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಾರಿಯಲ್ಲಿದ್ದ ಮಾದರಿ ನೀತಿ ಸಂಹಿತೆಯಿಂದ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟಕ್ಕೆ ಜಿಲ್ಲಾದ್ಯಂತ ಬ್ರೇಕ್‌ ಹಾಕಿ ಸಾರ್ವಜನಿಕರ ಗಮನ ಸೆಳೆದಿದ್ದ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು, ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಅಕ್ರಮ ಮದ್ಯ ಮಾರಾಟಕ್ಕೆ ರಹದಾರಿ ಮಾಡಿಕೊಟ್ಟಿರುವ ಅನುಮಾನ ಕಾಡುತ್ತಿದೆ.

ಇದಕ್ಕೆ ಕಳೆದ 20 ದಿನಗಳಿಂದ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಅಬಕಾರಿ ಅಕ್ರಮ ಪ್ರಕರಣಗಳು ಸಾಕ್ಷಿಯಾಗಿವೆ.

ಪ್ರಕರಣ ದಾಖಲು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ 400 ಕ್ಕೂ ಹೆಚ್ಚು ಅಬಕಾರಿ ಅಕ್ರಮಗಳನ್ನು ಜಿಲ್ಲಾದ್ಯಂತ ಪತ್ತೆ ಮಾಡಿ 40 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿ ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದ್ದ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು, ಇದೀಗ ಲೋಕ ಸಮರ ಮುಗಿದ ಬೆನ್ನಲ್ಲೇ ನಿದ್ದೆಗೆ ಜಾರಿದ್ದಾರೆ.

ಅಕ್ರಮ ಮದ್ಯ ಮಾರಾಟದ ಕಾರುಬಾರು ಹೆಚ್ಚಾಗಿದ್ದು, ಇದಕ್ಕೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರತಿ ದಿನ ದಾಖಲಾಗುತ್ತಿರುವ ಅಕ್ರಮ ಮದ್ಯ ಮಾರಾಟದ ಪ್ರಕರಣಗಳು ನಿರ್ದೇಶನವಾಗಿ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಯನ್ನು ಅನುಮಾನದಿಂದ ನೋಡುವಂತಾಗಿದೆ.

ಕುಗ್ರಾಮಗಳಲ್ಲಿ ಮದ್ಯದ ಹೊಳೆ: ಜಿಲ್ಲೆಯಲ್ಲಿ ಈಗಾಗಲೇ ಬರದ ಕರಿನೆರಳು ಆವರಿಸಿ ರೈತಾಪಿ ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ಸುಮಾರು 337 ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಕೊಳವೆ ಬಾವಿಗಳು ಕೊರೆದರೂ ನೀರು ಹೊರ ಬರುವುದು ಅಪರೂಪವಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ಸ್ಥಿಗತಗೊಂಡು ದುಡಿಯುವ ಜನರ ಕೈಗೆ ಕೆಲಸ ಇಲ್ಲದೇ ಪರದಾಡುತ್ತಿದ್ದಾರೆ.

ಆದರೆ ಜಿಲ್ಲೆಯಲ್ಲಿ ಮಾತ್ರ ನೀರಿಗೂ ಬರ ಇದ್ದರೂ ಮದ್ಯಕ್ಕೆ ಬರ ಇಲ್ಲ ಎನ್ನುವಂತೆ ಜಿಲ್ಲೆಯ ಗ್ರಾಮೀಣ ಭಾಗದ ಕುಗ್ರಾಮಗಳಲ್ಲಿ ಗಲ್ಲಿ ಗಲ್ಲಿಗೂ ಮದ್ಯದ ಹೊಳೆ ಹರಿಯುತ್ತಿದ್ದು, ಇದರಿಂದ ಮೊದಲೇ ಬರದಿಂದ ಸಂಕಷ್ಟದಲ್ಲಿರುವ ಬಡ ಕುಟುಂಬಗಳು ಮತ್ತೂಷ್ಟು ಬೀದಿಗೆ ಬರುವಂತಾಗಿದೆಯೆಂಬ ಆರೋಪ ಕೇಳಿ ಬರುತ್ತಿದೆ.

ಜಿಲ್ಲೆಯಲ್ಲಿ ನಿತ್ಯ ಆರೇಳು ಕೇಸ್‌ ಪಕ್ಕಾ: ಜಿಲ್ಲೆಯಲ್ಲಿ ಎಷ್ಟರ ಮಟ್ಟಿಗೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆಯೆಂದರೆ ಚಿಕ್ಕಬಳ್ಳಾಪುರ ಹಾಗು ಚಿಂತಾಮಣಿ ಉಪ ವಿಭಾಗಳಲ್ಲಿ ಆರು ತಾಲೂಕುಗಳ ಪೈಕಿ ಒಂದಲ್ಲ ಒಂದು ತಾಲೂಕಿನಲ್ಲಿ 6 ರಿಂದ 10 ಪ್ರಕರಣಗಳು ಅಕ್ರಮ ಮದ್ಯ ಮಾರಾಟ ಬಗ್ಗೆ ದಾಖಲುಗೊಳ್ಳುತ್ತಿದ್ದು, ಕದ್ದುಮುಚ್ಚಿ ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡುವ ಪ್ರಕರಣಗಳಿಗೆ ಲೆಕ್ಕವಿಲ್ಲದಂತಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಚಿಲ್ಲರೆ ಅಂಗಡಿಗಳೇ ಅಕ್ರಮ ಮದ್ಯ ಮಾರಾಟದ ಕೇಂದ್ರಗಳಾಗಿದ್ದು, ಜನ ನಿದ್ದೆಯಿಂದ ಹೇಳುವುದಕ್ಕೂ ಮೊದಲೇ ಮದ್ಯ ಮಾರಾಟ ಮಾಡುತ್ತಿರುವುದು ಗ್ರಾಮಗಳಲ್ಲಿ ಕಂಡು ಬರುತ್ತಿದೆ.

ಗ್ರಾಮೀಣ ಪ್ರದೇಶಕ್ಕೆ ನಗರ ಪ್ರದೇಶದ ಬಾರ್‌ ಅಂಡ್‌ ರೆಸ್ಟೋರೆಂಟ್ ಮಾಲೀಕರು ಕೆಲ ಮಧ್ಯವರ್ತಿಗಳನ್ನು ಇಟ್ಟುಕೊಂಡು ರಾಜಾರೋಷವಾಗಿ ಮದ್ಯ ಸಾಗಾಟ ಮಾಡಿ ಚಿಲ್ಲರೆ ಅಂಗಡಿಗಳಿಗೆ ತಲುಪಿಸುತ್ತಿದ್ದು, ಗ್ರಾಮಗಳಲ್ಲಿ ಬೆಳಗ್ಗೆ ಸಂಜೆ ಮದ್ಯದ ಆರಾದನೆ ಎಗ್ಗಿಲ್ಲದೇ ನಡೆದು ಬಡ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕುವಂತಾಗಿದೆ. ಅಬಕಾರಿ ಅಕ್ರಮಗಳು ಚುನಾವಣೆ ಬಳಿಕ ನಡೆಯುತ್ತಿದ್ದರೂ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಎಚ್ಚೆತ್ತಿಕೊಂಡಿಲ್ಲ. ಆದರೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾಡುವ ಕೆಲಸವನ್ನು ಈಗ ಜಿಲ್ಲೆಯ ಪೊಲೀಸ್‌ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.

ಒಬ್ಬ ವ್ಯಕ್ತಿ ಬಳಿ 2.3 ಲೀಟರ್‌ಗಿಂತ ಅಧಿಕ ಮದ್ಯ ಇರಬಾರದು. ಆದರೆ ಚಿಲ್ಲರೆ ಅಂಗಡಿಗಳಲ್ಲಿ ಮಾತ್ರ ಬಾರ್‌ ಹಾಗೂ ರೆಸ್ಟೋರೆಂಟ್ ಮಾಲೀಕರು ಕಳುಹಿಸುವ ತರಹೇವಾರಿ ಮದ್ಯದ ಬಾಟಲುಗಳು ಕಂಡು ಬರುತ್ತಿದ್ದು, ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡುತನ ವರ್ತಿಸುತ್ತಿದ್ದಾರೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.