ಅಕ್ರಮ ಕೊಳಾಯಿ ಸಂಪರ್ಕ: ಕ್ರಮದ ಎಚ್ಚರಿಕೆ
Team Udayavani, Jul 23, 2019, 3:00 AM IST
ಶಿಡ್ಲಘಟ್ಟ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಅಕ್ರಮವಾಗಿ ಕೊಳಾಯಿ ಸಂಪರ್ಕ ಮತ್ತು ಮೋಟಾರ್ ಅಳವಡಿಸಿಕೊಂಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರಸಭೆಯ ಪೌರಾಯುಕ್ತ ಜಿ.ಎನ್.ಚಲಪತಿ ಎಚ್ಚರಿಕೆ ನೀಡಿದರು. ನಗರದ 20ನೇ ವಾರ್ಡ್ನ ನಿಸಾರ್ ಪಾಳ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ವೀಕ್ಷಿಸಿ ನಂತರ ಮಾತನಾಡಿದರು.
ನಗರದಲ್ಲಿ ಪ್ರತಿಯೊಬ್ಬ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ಆಡಳಿತ ಬದ್ಧವಾಗಿದೆ. ಕುಡಿಯುವ ನೀರು ಪೂರೈಕೆಗಾಗಿ ಕೊರೆಯುತ್ತಿರುವ ಕೊಳವೆಬಾವಿಗಳು ವೈಫಲ್ಯದಿಂದ ನೀರಿನ ಸಮಸ್ಯೆ ಉದ್ಭವಿಸಿದೆ. ಯಾವ ಕೊಳವೆಬಾವಿಯಲ್ಲಿ ನೀರಿನ ಪ್ರಮಾಣ ಎಷ್ಟಿದೆ ಎಂಬುದನ್ನು ಪರಿಶೀಲಿಸಿ ಸಮಾನವಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾನೂನು ಕ್ರಮ: ನಗರದಲ್ಲಿ ಕುಡಿಯುವ ನೀರು ಪಡೆಯುವ ಸಲುವಾಗಿ ಕೆಲವರು ಅಕ್ರಮವಾಗಿ ಕೊಳಾಯಿ ಸಂಪರ್ಕ ಪಡೆದುಕೊಂಡಿದ್ದಾರೆ. ಮೋಟಾರ್ ಅಳವಡಿಸಿ ನೀರು ಪಡೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರತಿಯೊಂದು ವಾರ್ಡ್ಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದು, ಯಾರಾದರೂ ಅಕ್ರಮವಾಗಿ ನೀರು ಸಂಪರ್ಕ ಪಡೆದುಕೊಂಡಿರುವುದು ಪತ್ತೆಯಾದರಲ್ಲಿ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ನೀರುಗಂಟಿಗಳಿಗೆ ಸೂಚನೆ: ಕುಡಿಯುವ ನೀರು ಪೂರೈಕೆಗಾಗಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ತರುವಾಯ ಯಾರಿಗೂ ನೀರು ಪೂರೈಕೆ ವಿಚಾರದಲ್ಲಿ ತಾರತಮ್ಯ ಆಗಬಾರದು ಎಂದು ನೀರುಗಂಟಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ನಿಸಾರ್ ಪಾಳ್ಯದಲ್ಲಿ ಅಕ್ರಮವಾಗಿ ನೀರು ಸಂಪರ್ಕ ಪಡೆದುಕೊಂಡಿದ್ದರೆ ಅಥವಾ ಮೋಟಾರ್ ಅಳವಡಿಸಿದರೆ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ ಪೌರಾಯುಕ್ತರು ತಮಗೆ ಮಾಹಿತಿ ನೀಡಬೇಕೆಂದು ನಾಗರಿಕರಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮನೆಯ ಕೊಳಚೆ ನೀರು ರಸ್ತೆಗೆ ಹರಿಸುತ್ತಿರುವುದನ್ನು ನೋಡಿ ಕಿಡಿಕಾರಿದ ಪೌರಾಯುಕ್ತರು, ನೀರು ಸರಾಗವಾಗಿ ಹರಿಯಲು ಪೈಪ್ ಅಳವಡಿಸಿಕೊಳ್ಳಬೇಕೆಂದು ಸೂಚಿಸಿದರು. ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಕಾಪಾಡಲು ಆದ್ಯತೆ ನೀಡಲಾಗಿದೆ ಎಂದರು. ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಆಂಜಿನಪ್ಪ, ಸಿಬ್ಬಂದಿ ಅಪ್ಪಿ, ಕಾಂಗ್ರೆಸ್ ಮುಖಂಡ ಮಹೆಬೂಬ್ ಪಾಷ, ವಕೀಲ ನೌಷಾದ್ ಅಲಿ, ಬಾಬು, ಫಯಾಝ್ ಪಾಷ ಉಪಸ್ಥಿತರಿದ್ದರು.
ಶಾಸಕರ ಕಾಳಜಿಯಿಂದ ನಾಗರಿಕರಿಗೆ ಶುದ್ಧ ನೀರು ಪೂರೈಕೆ ಮಾಡಲು ನಗರದ ವಿವಿಧ ವಾರ್ಡ್ಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಅಳವಡಿಸಲು ಯೋಜನೆ ಸಿದ್ಧಪಡಿಸಿದ್ದು, ಶೀಘ್ರವೇ ಅನುಷ್ಠಾನಕ್ಕೆ ತರಲಾಗುವುದು.
-ಜಿ.ಎನ್.ಚಲಪತಿ, ಪೌರಾಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ