ಐತಿಹಾಸಿಕ ಕಂದವಾರ ಕೆರೆಯಲ್ಲೂ ಮರಳುಗೆ ಕನ್ನ


Team Udayavani, Jun 26, 2019, 3:00 AM IST

aitihasika

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ಕಂದವಾರ ಕೆರೆಯಲ್ಲಿ ಹಲವು ದಿನಗಳಿಂದ ಅಕ್ರಮ ಮರಳು ದಂಧೆ ಶುರುವಾಗಿದ್ದರೂ ಸ್ಥಳೀಯ ನಗರಸಭೆ ಅಧಿಕಾರಿಗಳಾಗಲೀ ಅಥವಾ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಾಗಲೀ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಹೇಳ್ಳೋರು ಕೇಳ್ಳೋರು ಇಲ್ಲ: ಗ್ರಾಮೀಣ ಪ್ರದೇಶದಲ್ಲಿ ಇತ್ತೀಚೆಗೆ ಅಕ್ರಮ ಮರಳು ದಂಧೆ ಜೋರಾಗಿದ್ದು ಅದರಲ್ಲೂ ಮಳೆಗಾಲ ಶುರುವಾದ ನಂತರ ಮರಳು ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಕೂಗಳತೆಯ ದೂರದಲ್ಲಿರುವ ಕಂದವಾರ ಕೆರೆಯಲ್ಲಿ ಟ್ರ್ಯಾಕ್ಟರ್‌ ಹಾಗೂ ಎತ್ತಿನ ಬಂಡಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ಅವ್ಯಾಹತವಾಗಿ ನಡೆಯುತ್ತಿದ್ದರೂ ಹೇಳ್ಳೋರು ಕೇಳ್ಳೋರು ಇಲ್ಲವಾಗಿದೆ.

ಎತ್ತಿನಬಂಡಿ, ಟ್ರ್ಯಾಕ್ಟರ್‌ಗಳಲ್ಲಿ ಸಾಗಾಟ: ಇತ್ತೀಚೆಗೆ ಬಿದ್ದ ಮಳೆಯಿಂದ ಕಂದವಾರ ಕೆರೆಗೆ ನೀರು ಹರಿದು ಬಂದಿದ್ದು, ಕೆರೆಯ ಕಾಲುವೆಗಳಲ್ಲಿ ಸಂಗ್ರಹವಾಗಿರುವ ಮರಳು ಜೊತೆಗೆ ಕೆರೆಯ ಮಧ್ಯ ಭಾಗಕ್ಕೆ ಎತ್ತಿನ ಬಂಡಿಗಳಲ್ಲಿ ತೆರಳಿ ರಾಜಾರೋಷವಾಗಿ ಮರಳು ತುಂಬಿಸಿಕೊಂಡು ಬಂದು ನಗರ ಪ್ರದೇಶದಲ್ಲಿ ಮಾರಾಟಕ್ಕೆ ಮುಂದಾಗಿದ್ದಾರೆ. ಎತ್ತಿನಬಂಡಿಗಳಲ್ಲಿ ತರುವ ಮರಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿಸಿಕೊಂಡು ಸಾವಿರಾರು ರೂ.ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಮರಳು ದಂಧೆಗೆ ಕುಮ್ಮಕ್ಕು: ಈಗಾಗಲೇ ರಾಜ್ಯ ಸರ್ಕಾರ ರೂಪಿಸಿರುವ ಹೆಬ್ಟಾಳ, ನಾಗವಾರ ತ್ಯಾಜ್ಯ ನೀರನ್ನು ಸಂಸ್ಕರಣಾ ಘಟಕದಿಂದ ಬಾಗಲೂರು ಕೆರೆಯಿಂದ ಕಂದವಾರ ಕೆರೆಗೆ ಹರಿಸಲು ಕಾಮಗಾರಿ ಭರದಿಂದ ಸಾಗಿವೆ. ಅಂತರ್ಜಲ ವೃದ್ಧಿಸುವ ದೃಷ್ಟಿಯಿಂದ ಸರ್ಕಾರ ಎಚ್‌.ಎನ್‌. ವ್ಯಾಲಿ ಯೋಜನೆ ರೂಪಿಸಿದೆ.

ಆದರೆ ಮಳೆ ನೀರನ್ನು ಅಂತರ್ಜಲಕ್ಕೆ ಇಂಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮರಳನ್ನು ದಂಧೆಕೋರರು ಈಗ ಕೆರೆಯಿಂದ ಹೊರ ತರುತ್ತಿರುವುದು ಎದ್ದು ಕಾಣುತ್ತಿದ್ದರೂ ಸಂಬಂದಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದೇ ಪರೋಕ್ಷವಾಗಿ ಮರಳು ದಂಧೆಗೆ ಬೆಂಬಲವಾಗಿ ನಿಂತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.

ಈಗಾಗಲೇ ಕಂದವಾರ ಕೆರೆಯಲ್ಲಿ ಮರಳು ತೆಗೆಯಲು ಸಾಕಷ್ಟು ಗುಂಡಿಗಳನ್ನು ತೋಡಿರುವ ದಂಧೆಕೋರರು ವ್ಯಾಪಕ ಪ್ರಮಾಣದಲ್ಲಿ ಮರಳು ಸಾಗಾಟ ಮಾಡುತ್ತಿದ್ದಾರೆ. ಕಂದವಾರ ಕೆರೆಯ ಮಧ್ಯ ಭಾಗಕ್ಕೆ ಹೋಗಲು ಎತ್ತಿನಬಂಡಿ ಹಾಗೂ ಟ್ರ್ಯಾಕ್ಟರ್‌ ಮಾಲೀಕರು ದೊಡ್ಡ ದಾರಿಯನ್ನೇ ಮಾಡಿಕೊಂಡಿದ್ದಾರೆ.

ಕಡಿವಾಣ ಹಾಕಬೇಕಿದೆ: ಒಟ್ಟಿನಲ್ಲಿ ಮೊದಲೇ ಒತ್ತುವರಿದಾರರಿಂದ ವರ್ಷದಿಂದ ವರ್ಷಕ್ಕೆ ತನ್ನ ಸ್ವರೂಪ ಕಳೆದುಕೊಳ್ಳುತ್ತಿರುವ ಕಂದವಾರ ಕೆರೆಯಲ್ಲಿ ಈಗ ಎಗ್ಗಿಲ್ಲದೇ ಮರಳು ದಂಧೆ ರಾಜಾರೋಷವಾಗಿ ಹಾಡಹಗಲೇ ಹಾಗೂ ರಾತ್ರೋರಾತ್ರಿ ನಡೆಯುತ್ತಿದ್ದರೂ ಯಾರು ಕೋಳ್ಳೋರು ಇಲ್ಲದಂತಾಗಿದೆ. ಜಿಲ್ಲಾಡಳಿತ ಇತ್ತಕಡೆ ಗಮನ ಹರಿಸಿ ಮರಳು ದಂಧೆಕೋರರಿಗೆ ಕಡಿವಾಣ ಹಾಕಬೇಕಿದೆ.

ಬೆಳಗ್ಗೆ ಎತ್ತಿನಬಂಡಿ.. ರಾತ್ರಿ ಟ್ರ್ಯಾಕ್ಟರ್‌ನಲ್ಲಿ ಸಾಗಾಟ: ಕಂದವಾರ ಕೆರೆಗೆ ಅಂಟಿಕೊಂಡಿರುವ ಚಿಕ್ಕಬಳ್ಳಾಪುರದ ಗಂಗನಮಿದ್ದೆ ಪ್ರದೇಶದ ನಿವಾಸಿಗಳು ಹೇಳುವ ಪ್ರಕಾರ ಹಗಲಲ್ಲಿ ಎತ್ತಿನಬಂಡಿಗಳ ಮೂಲಕ ಮರಳು ಸಾಗಾಟ ನಡೆಯುತ್ತದೆ. ರಾತ್ರಿ ವೇಳೆಯಲ್ಲೂ ಟ್ರ್ಯಾಕ್ಟರ್‌ಗಳಲ್ಲಿ ಸಾಗಾಟ ಮಾಡಲಾಗುತ್ತಿದೆ. ಈ ಬಗ್ಗೆ ಯಾರು ಕೇಳ್ಳೋರು ಇಲ್ಲ. ಈ ಬಗ್ಗೆ ಯಾರಿಗೆ ದೂರು ನೀಡಬೇಕೋ ನಮಗೆ ಗೊತ್ತಿಲ್ಲ ಎಂದು ಗಂಗನಮಿದ್ದೆಯ ನಿವಾಸಿ ರಮೇಶ್‌ ಉದಯವಾಣಿಗೆ ತಿಳಿಸಿದರು.

ಕೆರೆ ನಮ್ಮ ವ್ಯಾಪ್ತಿಗೆ ಬರಲ್ಲ ಎಂದ ಆಯುಕ್ತರು: ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿರುವ ಕಂದವಾರ ಕೆರೆಯಲ್ಲಿ ಅಕ್ರಮ ಮರಳು ಸಾಗಾಟದ ಬಗ್ಗೆ ನಗರಸಭೆ ಆಯುಕ್ತ ಉಮಾಕಾಂತ್‌ರನ್ನು ಉದಯವಾಣಿ ಸಂಪರ್ಕಿಸಿದರೆ ಕಂದವಾರ ಕೆರೆ ವ್ಯಾಪ್ತಿ ನಮಗೆ ಬರಲ್ಲ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎಂದರು. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾರು ಸ್ವೀಕರಿಸಲೇ ಇಲ್ಲ.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.