ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ

ಖಾಸಗಿ ರೈಸ್‌ ಮಿಲ್‌ ಮಾಲಿಕರ ವಿರುದ್ಧ ದೂರು ದಾಖಲು ; ಆಹಾರ ಇಲಾಖೆ ಉಪನಿರ್ದೇಶಕಿ ಸವಿತಾ ದಾಳಿ

Team Udayavani, Sep 23, 2021, 5:11 PM IST

Illicit collection of ration rice, sale

ಚಿಕ್ಕಬಳ್ಳಾಪುರ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸವಿತಾ ಹಾಗೂ ಆಹಾರ ಇಲಾಖೆಯ ಶಿರಸ್ತೇದಾರ್‌, ಚಿಕ್ಕಬಳ್ಳಾಪುರ ತಾಲೂಕಿನ ಕಂದವಾರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಸಪ್ತಗಿರಿ ಗ್ರಾಮೋದಯ ಅಕ್ಕಿ ಗಿರಣಿಗೆ ಅನಿರೀಕ್ಷಿತವಾಗಿ ದಾಳಿ ನಡೆಸಿ, ಅಕ್ಕಿ ಗಿರಣಿಯಲ್ಲಿ ಅಕ್ಕಿಯನ್ನು ರೀಪಾಲಿಶ್‌ ಮಾಡಿ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಿದ್ಧಪಡಿಸುತ್ತಿದ್ದ ಅಂಶ ಬೆಳಕಿಗೆ ತಂದಿದ್ದಾರೆ.

ಅಕ್ಕಿ ಗಿರಣಿಯ ಮುಖ್ಯ ಬಾಗಿಲು ಮುಚ್ಚಿ ಪಕ್ಕದಲ್ಲಿರುವ ಕಿರಿಯ ಬಾಗಿಲು ತೆರೆದು ಅಕ್ಕಿಯನ್ನು ರೀ ಪಾಲಿಶ್‌ ಮಾಡಿ ಅಕ್ಕಿ ಮತ್ತು ನುಚ್ಚಕ್ಕಿ ಬೇರ್ಪಡಿಸಿ ತಲಾ 25 ಕೆ.ಜಿಯಂತೆ ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿ ಮಯೂರ ಬ್ರಾಂಡ್‌ ಹೆಸರಿನಲ್ಲಿ ಸಿದ್ಧಗೊಳಿಸುತ್ತಿರುವಾಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸವಿತಾ ಹಾಗೂ ಆಹಾರ ಇಲಾಖೆಯ ಶಿರಸ್ತೆದಾರ್‌ ದಾಳಿ ನಡೆಸಿದ್ದಾರೆ.

ಕಾಳಸಂತೆಯಲ್ಲಿ ಮಾರಾಟ: ಗಿರಣಿಯ ಮಾಲಿಕ ವೇಣುಗೋಪಾಲ್‌ ಅವರು ಸ್ಥಳದಲ್ಲಿಯೇ ಇದ್ದು, ಸದರಿ ಅಕ್ಕಿ ಕುರಿತು ಲೆಕ್ಕಪತ್ರಗಳ ನಿರ್ವಹಣೆಯನ್ನು ವಿಚಾರಿಸಲಾಯಿತು. ಅವರು, ಯಾವುದೇ ರೀತಿಯ ದಾಖಲೆಗಳನ್ನು ನೀಡಿಲ್ಲ. ಅನ ಧಿಕೃತವಾಗಿ ಸರ್ಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ:ಅರಮನೆ ಆವರಣದಲ್ಲಿ ಗರಿಗೆದರಿದ ದಸರಾ ಸಿದ್ಧತೆ

ಅಕ್ಕಿ, ಪರಿಕರಗಳ ಜಪ್ತಿ: ಈ ಹಿನ್ನೆಲೆಯಲ್ಲಿ ಸಪ್ತಗಿರಿ ಅಕ್ಕಿ ಗಿರಣಿಯಲ್ಲಿ ಅಕ್ರಮವಾಗಿ ಪತ್ತೆಯಾದ ಮಯೂರ ಬ್ರಾಂಡ್‌ ಹೆಸರಿನ 61 ಚೀಲಗಳಲ್ಲಿ 15.25 ಕ್ವಿಂಟಲ್‌ ನುಚ್ಚಕ್ಕಿ ಹಾಗೂ ಅದೇ ಬ್ರಾಂಡ್‌ನ‌ 122 ಚೀಲಗಳಲ್ಲಿ 27.75 ಕ್ವಿಂಟಲ್‌ ಅಕ್ಕಿ ಸೇರಿ ಒಟ್ಟು 183 ಚೀಲಗಳಲ್ಲಿ 43.00 ಕ್ವಿಂಟಲ್‌ನಷ್ಟು ಅಕ್ಕಿ, ನುಚ್ಚಕ್ಕಿಯನ್ನು ಹಾಗೂ ಎಲೆಕ್ಟ್ರಾನಿಕ್‌ ವೇಯಿಂಗ್‌ ಸ್ಕೇಲ್‌ ಮತ್ತು ಚೀಲಗಳ ಬಾಯಿ ಹೊಲಿಯಲು ಉಪಯೋಗಿಸುತ್ತಿದ್ದ ಸ್ಟೀಚಿಂಗ್‌ ಮಿಷನ್‌ ಅನ್ನು ಸರ್ಕಾರದ ಪರವಾಗಿ ಜಪ್ತಿ ಮಾಡಿ ತಾಲೂಕಿನ ನಂದಿ ಗಿರಿಧಾಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದೇ ಗಿರಣಿ ಮಾಲಿಕರು ವಿರುದ್ಧ ಇದು ಎರಡನೇ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ 350 ಕ್ವಿಂಟಲ್‌ ಅಕ್ಕಿ, ನುಚ್ಚಕ್ಕಿ ಜಪ್ತಿ ಮಾಡಿ ಕೇಸು ದಾಖಲು
ಈ ಹಿಂದೆ 4.6.2021ರಂದು ಈ ಅಕ್ಕಿ ಗಿರಣಿಯಲ್ಲಿ ಅನ ಧಿಕೃತವಾಗಿ ರೀ ಪಾಲಿಶ್‌ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ಸರ್ಕಾರದ ವಿವಿಧ ಯೋಜನೆಗಳ 350 ಕ್ವಿಂಟಲ್‌ ಅಕ್ಕಿ ಮತ್ತು ನುಚ್ಚಕ್ಕಿಯನ್ನು ಜಪ್ತಿ ಮಾಡಿ ಅದೇ ದಿನದಂದು ಚಿಕ್ಕಬಳ್ಳಾಪುರ ತಾಲೂಕು ನಂದಿ ಗಿರಿಧಾಮ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ, ಅಕ್ಕಿ ಗಿರಣಿದಾರರು ಸಾರ್ವಜನಿಕರಿಂದ ಸರ್ಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಅದನ್ನು ರೀ ಪಾಲಿಶ್‌ ಮಾಡಿ ಅಕ್ರಮವಾಗಿ ಬೇರೆ ಬೇರೆ ನಕಲಿ ಬ್ರಾಂಡ್‌ಗಳ ಹೆಸರಿನಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೆಲಸದಲ್ಲಿ ತೊಡಗಿರುವುದು ಕಂಡುಬಂದಿದೆ. ಸಾರ್ವಜನಿಕರು, ಪಡಿತರ ಚೀಟಿದಾರರರು ತಮ್ಮ ಹಕ್ಕಿನ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡು ವುದು ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶ 2016ರ ಅನ್ವಯ ಅಪರಾಧವಾಗಿದ್ದು, ಅಂತಹ ಪಡಿತರ ಚೀಟಿ ನಿಯಮಾನುಸಾರ 6 ತಿಂಗಳ ಕಾಲ ಅಮಾನತುಪಡಿಸಲಾಗುವುದೆಂದು ಇಲಾಖೆ ಅ ಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.