2 ವರ್ಷಗಳಲ್ಲಿ ಗೌರಿಬಿದನೂರು ಚಿತ್ರಣ ಬದಲು


Team Udayavani, Feb 24, 2020, 3:00 AM IST

2varshagallali

ಗೌರಿಬಿದನೂರು: ನಗರದ ಬೆಂಗಳೂರು-ಹಿಂದೂಪುರ ರಸ್ತೆ ಅಭಿವೃದ್ಧಿಯಿಂದ ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ-ಮಧುಗಿರಿ ರಸ್ತೆ ಅಭಿವೃದ್ಧಿಯಾಗಲಿದ್ದು, ಇನ್ನೆರೆಡು ವರ್ಷಗಳಲ್ಲಿ ಗೌರಿಬಿದನೂರು ಚಿತ್ರಣ ಸಂಪೂರ್ಣ ಬದಲಾಣೆಯಾಗಲಿದೆ ಎಂದು ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿ ತಿಳಿಸಿದರು.

ನಗರದ ಬೆಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-234 ಮತ್ತು ಗುಂಡಾಪುರ ಹಿರೇಬಿದನೂರು ಸಂಪರ್ಕ ರಸ್ತೆಯ ಮೇಲ್ಸೆತುವೆ ಕಾಮಾಗಾರಿ ವೀಕ್ಷಿಸಿ ಮಾತನಾಡಿದ ಅವರು, ನಗರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದ್ದು, ಈಗಾಗಲೇ ನಗರದ ಬೆಂಗಳೂರು-ಹಿಂದೂಪುರ ರಸ್ತೆ ಅಭಿವೃದ್ಧಿ ಮಾಡಿದ್ದು ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದರು.

ಬೈಪಾಸ್‌ ರಸ್ತೆಯಿಂದ ಸಂಚಾರ ದಟ್ಟಣೆಗೆ ಕಡಿವಾಣ: ಗುಂಡಾಪುರದಿಂದ ಹಿರೇಬಿದನೂರು ಹೆದ್ದಾರಿ ಸಂಪರ್ಕ ರಸ್ತೆ ಹಾಗೂ ಬೆಂಗಳೂರು ರಸ್ತೆಯ ಅಂಡರ್‌ಪಾಸ್‌ ರಸ್ತೆ ನಿರ್ಮಾಣಕ್ಕೆ 100 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಅನುದಾನ ಸಹ ಸೇರಿದೆ. ಬೆಂಗಳೂರು ಮತ್ತು ಆಂಧ್ರಪ್ರದೇಶದ ಕಡೆಯಿಂದ ಬರುವ ಸರಕು ಸಾಗಾಣಿಕೆ ವಾಹನಗಳು ನಗರದೊಳಕ್ಕೆ ಸಂಚರಿಸುವ ಅವಶ್ಯಕತೆಯೇ ಇರುವುದಿಲ್ಲ ಎಂದರು.

ಬೆಂಗಳೂರು ಕಡೆಯಿಂದ ಬರುವ ಸರಕು ವಾಹನ ಹಾಗೂ ಇತರೆ ವಾಹನಗಳು ಬೈಪಾಸ್‌ ಮೂಲಕ ಹಿರೇಬಿದನೂರು ಬೈಪಾಸ್‌ ಮೂಲಕ ಆಂಧ್ರಕ್ಕೆ ಸಂಚರಿಸಬಹುದಾಗಿದೆ. ತುಮಕೂರು ಕಡೆಯಿಂದ ಬರುವ ವಾಹನಗಳು ಬೈಪಾಸ್‌ ಮೂಲಕ ಸಂಚರಿಸುತ್ತವೆ. ಇದರಿಂದ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣವಾಗುವುದರ ಜೊತೆಗೆ ಸುಗಮ ಸಂಚಾರಕ್ಕೆ ಸಹಕಾರಿಯಾಗಲಿದೆ.

ಕೈಗಾರಿಕೆ ಅಭಿವೃದಿಗೆ ದಿಕ್ಸೂಚಿ: ಬೆಂಗಳೂರು-ಹಿಂದೂಪುರ ರಸ್ತೆ ಸಮಗ್ರವಾಗಿ ಅಭಿವೃದ್ಧಿಯಾಗಿದ್ದು, ಕಡುಮಲಕುಂಟೆಯಲ್ಲಿನ ಕೈಗಾರಿಕಾ ಪ್ರಾಂಗಣಕ್ಕೆ ಬೃಹತ್‌ ಕೈಗಾರಿಕೆಗಳ ಉದ್ಯಮಗಳು ಹಾಗೂ ಹೊರದೇಶಗಳ ಕೈಗಾರಿಕಾ ಸಂಸ್ಥೆಗಳು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಬಹಳಷ್ಟು ಮಂದಿ ಬೃಹತ್‌ ಕೈಗಾರಿಕೆಗಳನ್ನು ಸ್ಥಾಪಿಸುವ ಭರವಸೆ ನೀಡಿದ್ದಾರೆ. ಇದರಿಂದ ತಾಲೂಕಿನಲ್ಲಿ ವಹಿವಾಟು ಹೆಚ್ಚಾಗುವ ಜತೆಗೆ ಅಭಿವೃದ್ಧಿಯಾಗಲಿದೆ ಎಂದರು.

ನಗರಸಭಾ ಸದಸ್ಯರಾದ ಅರ್‌.ಪಿ.ಗೋಪಿನಾಥ್‌ ಡಿ.ಎನ್‌.ವೆಂಕಟರೆಡ್ಡಿ ಮುಖಂಡರಾದ ಎಚ್‌,ಎನ್‌.ಪ್ರಕಾಶ್‌ ರೆಡ್ಡಿ ಶೂಲಪಾಣಿ ವೆಂಕಟೇಶ್‌ ವೇಣುಗೋಪಾಲ್‌ ವೆಂಕಟರಮಣ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.