ಜಿಲ್ಲೆಯಲ್ಲಿ ಹಳ್ಳ ಹಿಡಿದ ಫ‌ಸಲ್‌ ಬಿಮಾ ಯೋಜನೆ


Team Udayavani, Jul 20, 2019, 3:00 AM IST

jille-halla

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಲಕ್ಷಾಂತರ ಸಣ್ಣ, ಅತಿ ಸಣ್ಣ ರೈತರು ಇದ್ದರೂ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ಜಿಲ್ಲಾದ್ಯಂತ ಕೃಷಿ ಇಲಾಖೆ ನೋಂದಣಿಯಿಸಿರುವ ರೈತರ ಸಂಖ್ಯೆ ಬರೋಬ್ಬರಿ 377 ಮಂದಿ ಮಾತ್ರ.

ಹೌದು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯ ನೋಂದಣಿ ಕಾರ್ಯ ಜಿಲ್ಲಾದ್ಯಂತ ಕುಸಿತಗೊಂಡಿದ್ದು, ಒಂದಡೆ ಕಳೆದ ವರ್ಷದ ವಿಮೆ ಹಣ ಕೈ ಸೇರದ ಹಿನ್ನೆಲೆಯಲ್ಲಿ ಬೆಳೆ ವಿಮೆಗೆ ರೈತರು ನಿರಾಸಕ್ತಿ ತೋರಿದ್ದರೆ ಮತ್ತೂಂದಡೆ ಯೋಜನೆಯ ಅರಿವು ಇಲ್ಲದೇ ರೈತರು ಯೋಜನೆಯಿಂದ ಹೊರಗುಳಿಯುವಂತಾಗಿದೆ ಎಂಬ ಮಾತು ಜಿಲ್ಲೆಯ ರೈತಾಪಿ ಜನರಲ್ಲಿ ಕೇಳಿ ಬರುತ್ತಿದೆ.

ಜಿಲ್ಲಾದ್ಯಂತ ಬರೋಬ್ಬರಿ 1.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಸಾಗುವಳಿ ಇದ್ದು, ಜಿಲ್ಲೆಯಲ್ಲಿ ಒಟ್ಟು 2,14,355 ರೈತ ಕುಟುಂಬಗಳು ಇದ್ದರೆ ಆ ಪೈಕಿ 1,40,975 ಅತಿ ಸಣ್ಣ ರೈತರು ಹಾಗೂ 45, 637 ಮಂದಿ ಸಣ್ಣ ರೈತರು ಹಾಗೂ 27,743 ಮಂದಿ ಇತರೇ ರೈತರು ಇದ್ದಾರೆ. ಆದರೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ರೈತರು ಇದ್ದರೂ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆ ನೋಂದಣಿ ಈ ವರ್ಷ ಕುಂಠಿತಗೊಂಡಿರುವುದು ಕೃಷಿ ಇಲಾಖೆ ಕಾರ್ಯವೈಖರಿಯನ್ನು ಪ್ರಶ್ನಿಸುವಂತಾಗಿದೆ.

377 ಮಂದಿ ಮಾತ್ರ ನೋಂದಣಿ: ಮುಂಗಾರು ಆರಂಭಗೊಂಡ ಎರಡು ತಿಂಗಳಾದರೂ ಜಿಲ್ಲೆಯಲ್ಲಿ ಇದುವರೆಗೂ ಪಿಎಂಎಫ್ಬಿವೈ ಯೋಜನೆಗೆ ಕೇವಲ 377 ಮಂದಿ ರೈತರು ಮಾತ್ರ ಇದುವರೆಗೂ ನೋಂದಾಯಿಕೊಂಡಿದ್ದು, ಆ ಪೈಕಿ ಬಾಗೇಪಲ್ಲಿ ತಾಲೂಕಿನಲ್ಲಿ 1, ಚಿಕ್ಕಬಳ್ಳಾಪುರ 80. ಚಿಂತಾಮಣಿ ತಾಲೂಕಿನಲ್ಲಿ 32, ಗೌರಿಬಿದನೂರು ತಾಲೂಕಿನಲ್ಲಿ 140, ಗುಡಿಬಂಡೆ ತಾಲೂಕಿನಲ್ಲಿ 43 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 81 ಮಂದಿ ರೈತರು ಸೇರಿ ಒಟ್ಟು 377 ಮಂದಿ ರೈತರು ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ತಮ್ಮ ಹೆಸರುಗಳನ್ನು ನೋಂದಾಯಿಸಿರುವುದು ಬಿಟ್ಟರೆ ಜಿಲ್ಲೆಯಲ್ಲಿ ಶೇ.99 ರಷ್ಟು ರೈತರು ಬೆಳೆ ವಿಮಾ ಯೋಜನೆಯಿಂದ ದೂರು ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅದರಲ್ಲೂ ಕೃಷಿ ಸಚಿವರು ಜಿಲ್ಲೆಯವರೇ ಆಗಿದ್ದರೂ ಮಹತ್ವದ ಬೆಳೆ ವಿಮೆ ಯೋಜನೆ ಪ್ರಗತಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಸಮರ್ಪಕ ಮಾಹಿತಿ ಕೊರತೆ, ಬ್ಯಾಂಕುಗಳ ನಿರ್ಲಕ್ಷ್ಯದ ಜೊತೆಗೆ ಕೃಷಿ ಇಲಾಖೆ ರೈತರಲ್ಲಿ ಬೆಳೆ ವಿಮೆ ಯೋಜನೆಗಳ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವಲ್ಲಿ ವಿಫ‌ಲವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ಸಚಿವರ ಮಾತಿಗೂ ಕಿಮ್ಮತ್ತಿಲ್ಲ: ಜಿಲ್ಲೆಯಲ್ಲಿ ಬೆಳ ವಿಮೆ ಯೋಜನೆ ಬಗ್ಗೆ ರೈತರಲ್ಲಿರುವ ಗೊಂದಲ ನಿವಾರಿಸಿ ಅವರನ್ನು ಮನವೊಲಿಸಿ ಬೆಳೆ ವಿಮೆ ಯೋಜನೆಗೆ ಹೆಸರು ನೋಂದಾಯಿಸುವಂತೆ ಜಿಲ್ಲಾ ಉಸ್ತುವಾರಿಗಳಾದ ಕೃಷಿ ಸಚಿವರು ಹಲವಾರು ಬಾರಿ ಜಿಪಂ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಒತ್ತಿ ಒತ್ತಿ ಹೇಳಿದ್ದಾರೆ.

ಆದರೆ ಕೃಷಿ ಇಲಾಖೆ ಮಾತ್ರ ಇದುವರೆಗೂ ಬೆಳೆ ವಿಮೆ ವ್ಯಾಪ್ತಿಗೆ ತಂದಿರುವ ರೈತರ ಸಂಖ್ಯೆ ನೋಡಿದರೆ ಕೃಷಿ ಇಲಾಖೆ ಕಾರ್ಯವೈಖರಿ ಗೊತ್ತಾಗುತ್ತದೆ. ಕೃಷಿ ಸಚಿವರ ತವರಿನಲ್ಲಿಯೆ ಬರೀ 140 ಮಂದಿ ರೈತರು ನೋಂದಾಯಿಕೊಂಡಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇರುವ ಬಾಗೇಪಲ್ಲಿ, ಚಿಂತಾಮಣಿಯಲ್ಲಿ ಎರಡಂಕಿ ದಾಟಿಯೇ ಇಲ್ಲ.

ಕಳೆದ ವರ್ಷದ್ದೇ ವಿಮೆ ಬಂದಿಲ್ಲ: ಇನ್ನೂ ಈ ಪರಿ ಬೆಳೆ ವಿಮೆ ನೋಂದಣಿ ಪ್ರಗತಿ ಕುಂಠಿತಕ್ಕೆ ಕಳೆದ ವರ್ಷ ನೋಂದಣಿ ಮಾಡಿದ್ದ ರೈತರಿಗೆ ಇದುವರೆಗೂ ಬೆಳೆ ವಿಮೆ ಪರಿಹಾರ ಕೈ ಸೇರಿಲ್ಲ ಎಂಬ ಆರೋಪ ಜಿಲ್ಲೆಯ ರೈತರಿಂದ ಕೇಳಿ ಬರುತ್ತಿದೆ. ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೋಟ್ಯಂತರ ರೂ., ಬಾಕಿ ಇದೆ. ಜೊತೆಗೆ ಬೆಳೆ ವಿಮೆ ಕಂತು ದುಬಾರಿಯಾಗಿ ಎಂಬ ಮಾತು ರೈತರಿಂದ ಕೇಳಿ ಬರುತ್ತಿದೆ.

ಕಳೆದ ವರ್ಷ 24,854 ಮಂದಿ ನೋಂದಣಿ: ಕಳೆದ ವರ್ಷ ವಿವಿಧ ಬೆಳೆ ವಿಮೆ ಯೋಜನೆಗಳಡಿಯಲ್ಲಿ ಜಿಲ್ಲೆಯ ರೈತರು ಬರೋಬ್ಬರಿ 23,854 ಮಂದಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದರು ಆ ಪೈಕಿ ಬಾಗೇಪಲ್ಲಿ 8,340, ಚಿಕ್ಕಬಳ್ಳಾಪುರ 421, ಚಿಂತಾಮಣಿ 1,388, ಗೌರಿಬಿದನೂರು 7,841, ಗುಡಿಬಂಡೆ 2,895 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 3,969 ಮಂದಿ ಸೇರಿ ಒಟ್ಟು 24,854 ಮಂದಿ ರೈತರು ಬೆಳೆ ವಿಮೆ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಈ ವರ್ಷ ಬರೀ 377 ಮಂದಿ ಮಾತ್ರ ಬೆಳೆ ವಿಮೆಗೆ ಹೆಸರು ನೋಂದಾಯಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆ ನೋಂದಣಿ ಬಗ್ಗೆ ಜಿಲ್ಲೆಯ ರೈತರಲ್ಲಿ ಸಾಕಷ್ಟು ಅರಿವು ಮೂಡಿಸಲಾಗಿದೆ. ಕರಪತ್ರಗಳನ್ನು ಹಂಚಲಾಗಿದೆ. ಇದುವರೆಗೂ ಕೇವಲ 377 ಮಂದಿ ರೈತರು ಮಾತ್ರ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ.
-ಎಲ್‌.ರೂಪ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.