ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ
Team Udayavani, Mar 4, 2021, 10:01 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿಗಳನ್ನು ಹೊಡೆದು ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ನಂದಿಗಿರಿಧಾಮ ಪೋಲಿಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ಏಕಲವ್ಯ ನಗರದ ಕಬಾಲ್ ಉರುಫ್ ಚಂದು(25), ಮಂಡ್ಯ ತಾಲೂಕು ಹಿಂಡುವಾಳ ಗ್ರಾಮದ ಸುಮಂತ (21) ಬಂಧಿತ ಆರೋಪಿಗಳು ಆರೋಪಿಗಳಿಂದ 6700 ರೂ.ಗಳು ನಗದು ಕೃತ್ಯಕ್ಕೆ ಬಳಸಿದ್ದ 50 ಸಾವಿರ ರೂಗಳ ಮೌಲ್ಯದ ದ್ವಿಚಕ್ರ ವಾಹನ ಮತ್ತು ಎರಡು ಕಬ್ಬಿಣದ ರಾಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ಕುಮಾರ್ ತಿಳಸಿದ್ದಾರೆ.
30-01-2021 ರಂದು ರಾತ್ರಿ ನಂದಿ ಗ್ರಾಮದ ಶೀ ಭೋಗನಂದೀಶ್ವರ ದೇವಾಲಯದಲ್ಲಿ ಗರ್ಭಗಡಿಯ ಮುಂಭಾಗದಲ್ಲಿ ಇಟ್ಟಿದ್ದ ಎರಡು ಕಾಣಿಕೆ ಹುಂಡಿಗಳ ಬೀಗವನ್ನು ಹೊಡೆದು ಅದರಲ್ಲಿದ್ದ ಹಣವನ್ನು ದೋಚಿ ಹುಂಡಿಯನ್ನು ಬಿಸಾಡಿ ಹೋಗಿದ್ದರು ಅದರ ಕುರಿತು ದೇವಾಲಯದ ಪಾರುಪತ್ತೆದಾರ ನಾಗರಾಜ್ ಅವರು ನಂದಿಗಿರಿಧಾಮ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ದೂರು ದಾಖಲಿಸಿಕೊಂಡ ಪೋಲಿಸರು ಜಿಲ್ಲಾ ಎಸ್ಪಿ ಜಿಕೆ ಮಿಥುನ್ ಕುಮಾರ್,ಡಿವೈಎಸ್ಪಿ ಕೆ.ರವಿಶಂಕರ್,ಸಿಪಿಐ ಪ್ರಶಾಂತ್ ಅವರ ನೇತೃತ್ವದಲ್ಲಿ ಪಿಎಸ್ಐ ಬಸನಗೌಡ ಕೆ ಪಾಟೀಲ್ ಮತ್ತು ಸಿಬ್ಬಂದಿ ಒಳಗೊಂಡಂತೆ ತನಿಖಾ ತಂಡಗಳನ್ನು ರಚಿಸಲಾಗಿತ್ತು ತನಿಖಾ ತಂಡ ಆರೋಪಿಗಳನ್ನು ರಾಜಘಟ್ಟದಿಂದ ದೊಡ್ಡಬಳ್ಳಾಪುರಕ್ಕೆ ತೆರಳುವ ಮಾರ್ಗದಲ್ಲಿರುವ ರೈಲ್ವೆ ಸೇತುವೆ ಬಳಿ ಬಂಧಿಸಿದ್ದಾರೆ.
ಇದನ್ನೂ ಓದಿ : ವಿಡಿಯೋ ಕಾಲ್ ಸೇವೆಯನ್ನು ಡೆಸ್ಕ್ ಟಾಪ್ಗೂ ವಿಸ್ತರಿದ ವಾಟ್ಸ್ ಆ್ಯಪ್
ವಿಚಾರಣೆಯ ವೇಳೆಯಲ್ಲಿ ಆರೋಪಿಗಳು ಮಂಡ್ಯ ಜಿಲ್ಲೆಯಲ್ಲಿ 10.01.2021 ರಂದು ಕೆ.ಆರ್.ಪೇಟೆ ತಾಲೂಕಿನ ಸಾಸಲು ಗ್ರಾಮದಲ್ಲಿರುವ ಶ್ರೀ ಸೋಮೇಶ್ವರ ಮತ್ತು ಶಂಭುಲಿಂಗೇಶ್ವರ ದೇವಾಲಯಗಳಲ್ಲಿ ಮೂರು ಹುಂಡಿಗಳನ್ನು ಹೊಡೆದು ಕಳುವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್ಕುಮಾರ್ ತಿಳಿಸಿದ್ದಾರೆ.
ಆರೋಪಿಗಳ ವಿರುಧ್ಧ ಈಗಾಗಲೇ ಬೆಂಗಳೂರು ನಗರದ ಅಮೃತಹಳ್ಳಿ, ದೇವನಹಳ್ಳಿ, ಮಾದನಾಯಕನಹಳ್ಳಿ, ಚಿಕ್ಕಪೇಟೆ, ಸೋಲದೇವನಹಳ್ಳಿ,ರಾಮನಗರ ಜಿಲ್ಲೆಯ ಚನ್ನಪಟ್ಟಣ, ಮಂಡ್ಯ ಜಿಲ್ಲೆಯ ಮದ್ದೂರು, ನಾಗಮಂಗಲ, ತುಮಕೂರು, ಮೈಸೂರು ನಗರದ ಲಷ್ಕರ್,ಮಂಡಿ ಮೊಹಲ್ಲಾ ಪೋಲಿಸ್ಠಾ ಣೆಗಳಲ್ಲಿ 15ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದು ಕಂಡುಬಂದಿದೆ .ನಂದಿಗಿರಿಧಾಮದ ಪೋಲಿಸರ ಕಾರ್ಯವೈಖರಿಯನ್ನು ಪ್ರಶಂಸಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ತನಿಖಾ ತಂಡಕ್ಕೆ ನಗದು ಬಹುಮಾನವನ್ನು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!