ಶಿಡ್ಲಘಟ್ಟದಲ್ಲಿ ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷನ ಕೊಲೆ ಆರೋಪಿಗಳ ಬಂಧನ
Team Udayavani, Mar 20, 2021, 10:29 PM IST
ಸಾಂದರ್ಭಿಕ ಚಿತ್ರ
ಶಿಡ್ಲಘಟ್ಟ: ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಮೀಪ ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷ ಅಮ್ಜದ್ ನವಾಜ್ ಎಂಬಾತನನ್ನು ಹಾಡುಹಗಲೇ ಭೀಕರವಾಗಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲ್ಲು ಅಲಿಯಾಸ್ ಖಲಂದರ್, ಅಮಿತ್, ರಘು ಅಲಿಯಾಸ್ ರಾಘವೇಂದ್ರ, ಅಕ್ಷಯ್,ಶ್ರೀನಾಥ್ ಬಂಧಿತ ಆರೋಪಿಗಳು.
ಜನನಿಬಿಡ ಪ್ರದೇಶದಲ್ಲಿ ಹಾಡುಹಗಲೇ ಸಿನಿಮಾ ಶೈಲಿಯಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಿದ ದೃಶ್ಯವನ್ನು ಕಂಡು ನಾಗರಿಕರು ಭಯಭೀತರಾಗಿ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಅಮ್ಜದ್ ನವಾಝ್ ಸಂಬಂಧಿ ಕಲ್ಲು ಅಲಿಯಾಸ್ ಕಲಂದರ್ ಎಂಬಾತನ ಮೇಲೆ ಕೆಲ ವರ್ಷಗಳ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು ಸುಮಾರು ವರ್ಷಗಳಿಂದ ಅವಕಾಶಕ್ಕೆ ಕಾಯುತ್ತಿದ್ದ ಕಲ್ಲು ಅಲಿಯಾಸ್ ಕಲಂದರ್ ಮತ್ತು ಆತನ ಸಹಚರರು ಸಂಚು ರೂಪಿಸಿ ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷ ಅಮ್ಜದ್ ನವಾಜ್ ಹತ್ಯೆ ನಡೆಸಿದರು.
ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ