ನೀರಿನ ಸಂರಕ್ಷಣೆಗೆ ಮಳೆಕೊಯ್ಲು ಅಳವಡಿಕೆ
Team Udayavani, Aug 25, 2019, 3:00 AM IST
ಗೌರಿಬಿದನೂರು: ತಾಲೂಕಿನಲ್ಲಿ ಮಳೆಯ ಕೊರತೆ ಹಾಗೂ ನೀರಿನ ತೀವ್ರ ಅಭಾವ, ಸತತ ಬರಗಾಲಕ್ಕೆ ತುತ್ತಾಗಿರುವುದನ್ನು ಗಮನಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ನೀರಿನ ಸಂರಕ್ಷಣೆಗಾಗಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಸಮಗ್ರ ಮಳೆಕೊಯ್ಲು, ಕೃಷಿ ಭೂಮಿಯ ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಹಲವು ಪ್ರಗತಿದಾಯಕ ನಿರ್ಧಾರ ಕೈಗೊಂಡಿದ್ದಾರೆ.
ಅವುಗಳು ಫಲಪ್ರದವಾಗುವ ಉದ್ದೇಶದಿಂದ ಕೃಷಿ ಇಲಾಖೆಯ ಹಾಗೂ ವಿವಿಧ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಗೌರಿಬಿದನೂರು ತಾಲೂಕಿನ ಆಯ್ದ ಗ್ರಾಮ ಪಂಚಾಯತಿ ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಸಭೆ ನಡೆಸಿ ರೈತರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಾಲೂಕಿನ ಗಂಗಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಪಂ ಕಚೇರಿಯಲ್ಲಿ ಸೇರಿದ್ದ ಸ್ಥಳೀಯ ಜನಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಸಂಘಗಳು, ರೈತರು ಹಾಗೂ ರೈತ ಮಹಿಳೆಯರೊಂದಿಗೆ ಚರ್ಚಿಸಿದ್ದಾರೆ.
ಅನುದಾನ ಸದ್ಬಳಕೆಗೆ ಸೂಚನೆ: ನೀರಿನ ಕೊರತೆ ಹಾಗೂ ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿರುವ ಜಿಲ್ಲಾಡಳಿತ, ಜಿಪಂ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಸದರಿ ಗ್ರಾಮದಲ್ಲಿ ಸಮಗ್ರ ಮಳೆ ನೀರು ಕೊಯ್ಲು, ಕೃಷಿ ಭೂಮಿಯಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆ ಕ್ರಮಗಳು, ಉದ್ಯೋಗ ಖಾತ್ರಿ ಯೋಜನೆಯ ಘಟಕಗಳ ಅನುಷ್ಠಾನ.
ಸಮಗ್ರ ಕೃಷಿ ಪದ್ಧತಿಗಳ ಅಳವಡಿಕೆ, ಸಿರಿಧಾನ್ಯಗಳ ಉತ್ಪಾದನೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವ್ಯವಸ್ಥೆಗಳ ಬಗ್ಗೆ ಅರಿವು ಮೂಡಿಸಿ ಎಲ್ಲಾ ಘಟಕಗಳನ್ನು ಸಮಗ್ರವಾಗಿ ಅನುಷ್ಠಾನ ಮಾಡಲು ಸರ್ಕಾರದ ವತಿಯಿಂದ ವಿವಿಧ ಇಲಾಖೆಗಳ ವಿವಿಧ ಯೋಜನೆಗಳಡಿ ಲಭ್ಯವಿರುವ ಅನುದಾನ ಬಳಸಿಕೊಳ್ಳಲು ಸೂಚಿಸಿದೆ. ಈ ಎಲ್ಲಾ ಘಟಕಗಳನ್ನು ಸಮಗ್ರವಾಗಿ ಅನುಷ್ಠಾನ ಮಾಡಲು ಸರ್ಕಾರ ವತಿಯಿಂದ ವಿವಿಧ ಇಲಾಖೆಗಳ ವಿವಿಧ ಯೋಜನೆಗಳಲ್ಲಿ ಲಭ್ಯವಿರುವ ಅನುದಾನ ಬಳಸಿಕೊಳ್ಳಲು ಸೂಚನೆ ನೀಡಿದೆ.
4000 ರೂ. ಪ್ರೋತ್ಸಾಹಧನ: ಇಲಾಖೆಯಿಂದ ಈಗಾಗಲೇ ರೈತಸಿರಿ ಯೋಜನೆಯಡಿ ಸುಮಾರು 35 ಎಕರೆ ಜಮೀನಿನಲ್ಲಿ ಸಿರಿಧಾನ್ಯಗಳನ್ನು ಬೆಳೆದಿದ್ದು, 4000 ರೂ. ಪೋ›ತ್ಸಾಹಧನ ನೀಡಲಿದ್ದು ಹಿರೇಬಿದನೂರು ಗ್ರಾಮದಲ್ಲಿ ಸಿರಿ ಧಾನ್ಯಗಳ ಸಂಸ್ಕರಣೆ ಮೌಲ್ಯವರ್ಧನೆ ಮತ್ತು ಪ್ಯಾಕಿಂಗ್ ಮಾಡುವ ಕಾರ್ಖಾನೆಯನ್ನು ಇಲಾಖೆಯ ಯೋಜನೆಯಡಿಯಲ್ಲಿ ಸ್ಥಾಪಿಸಿರುವುದು ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ರೈತರು ಬೆಳೆದಿರುವ ಸಿರಿಧಾನ್ಯಗಳ ಬೆಳೆಗಳ ತಾಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅವುಗಳನ್ನು ವೀಕ್ಷಿಸಿ ರೈತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ರೈತರಿಂದ ಮಾಹಿತಿ ಪಡೆದ ಡೀಸಿ: ವಿವಿಧ ಯೋಜನೆಯಡಿ ಬೆಳೆದಿದ್ದ ತೋಟಗಾರಿಕಾ ಬೆಳೆಗಳನ್ನು ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಬೆಳೆದಿದ್ದ ತೊಗರಿ ತಾಕುಗಳನ್ನು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ವೀಕ್ಷಿಸಿ ರೈತರಿಂದ ಮಾಹಿತಿ ಪಡೆದರು. ಹಿರೇಬಿದನೂರು ಹೊರ ವಲಯದಲ್ಲಿ ಗೋವಿಂದರಾಜು ಅವರು ಕೃಷಿ ಇಲಾಖೆಯ ರೈತ ಸಿರಿ ಯೋಜನೆಯಲ್ಲಿ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಗಾಗಿ ಸ್ಥಾಪಿಸಿರುವ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಘಟಕದ ಕುರಿತು ಸಮಗ್ರ ವಿವರಗಳನ್ನು ಅವರಿಂದ ಪಡೆದರು.
ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರೂಪಾ, ತಹಶೀಲ್ದಾರ್ ಶ್ರೀನಿವಾಸ್, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್, ಗ್ರಾಪಂ ಅಧ್ಯಕ್ಷ ಲಕ್ಷ್ಮೀನಾರಾಯಣ, ಸದಸ್ಯರು, ಅಧಿಕಾರಿಗಳಾದ ಚಿದಾನಂದ, ತಿಮ್ಮರಾಯಸ್ವಾಮಿ, ಕಂದಾಯ ಇಲಾಖೆಯ ಅಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ರೈತರು ಮತ್ತು ರೈತ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.
ಸಿರಿಧಾನ್ಯ ಆಹಾರ ಪದ್ಧತಿಯಲ್ಲಿ ಅಳವಡಿಕೆ: ಮುಂದಿನ ದಿನಗಳಲ್ಲಿ ಗೌರಿಬಿದನೂರು ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಸಿರಿಧಾನ್ಯ ಉತ್ಪಾದನೆ ಸಂಸ್ಕರಣೆ ಮೌಲ್ಯವರ್ಧನೆ ಹಾಗೂ ಆಹಾರದಲ್ಲಿ ಅವುಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಸದರಿ ಸಂಸ್ಕರಿಸಿದಂತಹ ಸಿರಿಧಾನ್ಯಗಳನ್ನು ತಾಲೂಕಿನ ಹಾಗೂ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಮೂಲಕ ಉತ್ತಮ ಆರೋಗ್ಯದ ದೃಷ್ಟಿಯಿಂದ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
* ಗಣೇಶ್ ವಿ.ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ