ತರಬೇತಿಯಲ್ಲಿ ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಿ
Team Udayavani, Nov 28, 2021, 2:42 PM IST
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಡೇಟಾ ಎಂಟ್ರಿ ಆಪರೇಟರ್ಗಳ ಪಾತ್ರ ಪ್ರಮುಖವಾಗಿದೆ. ತಾವು ತರಬೇತಿ ಪಡೆದು ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಜಿಪಂ ಸಿಇಒ ಪಿ.ಶಿವಶಂಕರ್ ತಿಳಿಸಿದರು.
ನಗರದ ಜಿಪಂ ತರಬೇತಿ ಕೇಂದ್ರದಲ್ಲಿ ಡೇಟಾ ಎಂಟ್ರಿ ಆಪರೇಟರ್, ಬಿಎಫ್ಟಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮನುಷ್ಯನಿಗೆ ಸೇವೆ, ಚಿಕಿತ್ಸೆ ಹೇಗಿರುತ್ತದೆ. ಹಾಗೆಯೇ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಡೇಟಾ ಎಂಟ್ರಿ ಆಪರೇಟರ್ ತರಬೇತಿಯಲ್ಲಿ ಮತ್ತಷ್ಟು ಪರಿಣಿತಿ ಸಾಧಿ ಸಬೇಕೆಂದು ಕಿವಿಮಾತು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಮೂಲಕ ಅನೇಕ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಅದರಲ್ಲಿ ಉದ್ಯೋಗ ಖಾತ್ರಿ, ಸ್ವತ್ಛ ಭಾರತ್ ಮಿಷನ್, ವಸತಿ ಸೌಲಭ್ಯ, ಸಕಾಲ, ಇನ್ನಿತರೆ ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಗಳನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸಲು ಡೇಟಾ ಎಂಟ್ರಿ ಆಪರೇಟರ್ಗೆ ತರಬೇತಿ ಅಗತ್ಯ ಎಂದು ತಿಳಿಸಿದರು.
ಸೂಕ್ತ ಮಾರ್ಗದರ್ಶನ ನೀಡಿ: ಗ್ರಾಪಂನಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್ ಚುನಾಯಿತ ಪ್ರತಿನಿಧಿ ಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಜೊತೆಗೆ ಸರ್ಕಾರಿ ಕೆಲಸಗಳ ನಿಮಿತ್ತ ಬರುವ ಗ್ರಾಮಸ್ಥರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರಿಗೆ ಸರ್ಕಾರದ ಸೌಲಭ್ಯಗಳ ಕುರಿತು ಅಗತ್ಯ ಮಾಹಿತಿ ನೀಡುವ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡಿ ಸಹಕರಿಸಬೇಕೆಂದು ಸೂಚಿಸಿದರು.
ಈ ವೇಳೆ ಉದ್ಯೋಗ ಖಾತ್ರಿ ಯೋಜನೆ, ಸ್ವತ್ಛ ಭಾರತ್ ಮಿಷನ್, ಪಂಚತಂತ್ರ, ಇ -ಆಡಳಿತ, ಸಕಾಲ, ಮೊಬೈಲ್ ಮೂಲಕ ಅರ್ಜಿ ಸ್ವೀಕರಿಸಿ ಅಪ್ಲೋಡ್ ಮಾಡುವುದು, ಸರ್ಕಾರದ ವಿವಿಧ ಸಂಸ್ಥೆಗಳಿಗೆ ವರದಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿ ಸಿದಂತೆ, ಕಾನೂನಿನ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಯಿತು. ಜಿಲ್ಲೆಯ ಬಾಗೇಪಲ್ಲಿ, ಚಿಕ್ಕಬಳ್ಳಾಪುರ ತಾಲೂಕಿನ ಡೇಟಾ ಎಂಟ್ರಿ ಆಪರೇಟರ್, ಬಿಎಫ್ಟಿಗೆ ತರಬೇತಿ ನೀಡಲಾಯಿತು. ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ