ಜಲ ಸಂರಕ್ಷಣಾ ಯೋಜನೆಗಳ ಪರಿಶೀಲನೆ


Team Udayavani, Aug 26, 2019, 2:24 PM IST

cb-tdy-1

ಗೌರಿಬಿದನೂರು: ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯಾವ ರೀತಿ ಅನುಷ್ಠಾನಗೊಳಿಸಲಾಗಿದೆ ಎಂಬ ಬಗ್ಗೆ ದಿಢೀರ್‌ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್‌ ತಿಳಿಸಿದರು.

ತಾಲೂಕಿನ ವಿವಿಧ ಹೋಬಳಿಗಳಲ್ಲಿನ ಆಯ್ದ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಜಿಯಾ ತರನ್ನುಮ್‌ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಆಯ್ದ ಪಂಚಾಯಿತಿಗಳಿಗೆ ಭೇಟಿ ನೀಡಿ ಅಂತರ್ಜಲ ಸಂರಕ್ಷಣೆಗೆ ರೂಪಿಸಿರುವ ಯೋಜನೆಗಳ ಅನುಷ್ಠಾನದ ಬಗ್ಗೆ ಪಂಚಾಯಿತಿಗಳಿಂದ ಮಾಹಿತಿ ಪಡೆದರು.

ಯೋಜನೆಗಳ ಪರಿಶೀಲನೆ: ಜಿಲ್ಲೆಯಲ್ಲಿ ಅಂತರ್ಜಲ ಕುಸಿತವಾಗಿ ದಶಕಗಳೇ ಕಳೆದಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂತರ್ಜಲ ಹೆಚ್ಚಿಸಲು ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಪಟ್ಟಿಯಲ್ಲಿ ಜಿಲ್ಲೆಗೆ ಸ್ಥಾನ: ಕೇಂದ್ರ ಸರ್ಕಾರ ರಾಷ್ಟ್ರೀಯ ಮಟ್ಟದಲ್ಲಿ 242 ಜಿಲ್ಲೆಗಳಲ್ಲಿ ಅಂತರ್ಜಲ ಕುಸಿತ ಮತ್ತು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದೆ ಎಂದು ಪಟ್ಟಿ ಮಾಡಿದ್ದು, ಅದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಸೇರಿದೆ. ಮುಂಬರುವ ದಿನಗಳಲ್ಲಿ ಅಂತರ್ಜಲ ಸಂರಕ್ಷಣಾ ಯೋಜನೆಗಳನ್ನು ಪರಿಶೀಲನೆ ನಡೆಸಲು ಬರಲಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸುವ ಸಲುವಾಗಿ ಕೆಲವು ಪಂಚಾಯಿತಿಗಳಿಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಕಾರ್ಯಾನುಷ್ಠಾನದ ಬಗ್ಗೆ ಪರಿಶೀಲನೆ: ಜಿಲ್ಲೆಗಳಲ್ಲಿ ಜಲಸಂರಕ್ಷಣೆಗಾಗಿ ನರೇಗಾ, ಕೃಷಿಹೊಂಡ, ಜಮೀನಿನಲ್ಲಿ ಬದುಗಳ ನಿರ್ಮಾಣ, ಗಿಡಗಳ ನಾಟಿ, ಮಳೆಕೊಯ್ಲು ಇವುಗಳ ಕಾರ್ಯಾನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಾಯಿತು ಎಂದರು.

ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 36 ಕಡೆಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಹೊಸೂರಿನಲ್ಲಿ ಪ್ರಾಯೋಗಿಕವಾಗಿ ಕಳೆದ ವರ್ಷ 12 ಲಕ್ಷ ರೂ.ವೆಚ್ಚದಲ್ಲಿ ಪ್ರಾರಂಭಿಸಿರುವ ತ್ಯಾಜ್ಯ ನಿರ್ವಹಣಾ ಘಟಕವನ್ನು ಉನ್ನತೀಕರಣಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜಿಪಂ ಸಿಇಒ ಫೌಜಿಯಾ ತರನ್ನುಮ್‌ ಅವರೊಂದಿಗೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾಪಂ ಇಒ ಮುನಿರಾಜು, ಹೊಸೂರು ಗ್ರಾಪಂ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣರಾವ್‌, ಹಾಲಿ ಅಧ್ಯಕ್ಷ ತಿರುಮಲೇಶ್‌, ನರೇಗಾ ಸಹಾಯಕ ನಿರ್ದೇಶಕ ಚಿನ್ನಪ್ಪ, ಜಿಪಂ ನೀರು ಸರಬರಾಜು ವಿಭಾಗದ ಪ್ರಭಾರಿ ಸಹಾಯಕ ಅಭಿಯಂತರರಾದ ಆದಿನಾರಾಯಣಪ್ಪ, ಅಂಬರೀಶ್‌ ಯಾದವ್‌, ರಮೇಶ್‌, ವೆಂಕಟೇಶ್‌, ಪಿಡಿಒಗಳಾದ ಕರಿಯಪ್ಪ, ಫ‌ಯಾಜ್‌, ಮಡಿವಾಳಪ್ಪ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.