ನಿಗದಿತ ಅವಧಿಯಲ್ಲಿ ಜನನ, ಮರಣ ಪತ್ರ ನೀಡಿ; ಡೀಸಿ ಆರ್.ಲತಾ
ಈ ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು
Team Udayavani, Jun 30, 2022, 5:37 PM IST
ಚಿಕ್ಕಬಳ್ಳಾಪುರ: ಜನನ ಮತ್ತು ಮರಣ ಪ್ರಕರಣಗಳ ನೋಂದಣಿಯು ನಿಗದಿತ ಕಾಲಮಿತಿ ಯೊಳಗೆ ನಿಗದಿತ ತಂತ್ರಾಂಶಗಳಲ್ಲಿ ನೋಂದಣಿ ಯಾಗಿ ಪ್ರಮಾಣ ಪತ್ರಗಳು ಸಮರ್ಪಕವಾಗಿ ಕಾಲಮಿತಿಯೊಳಗೆ ವಿತರಿಸುವ ಸುವ್ಯವಸ್ಥೆ ಆಗಬೇಕು. ಆ ನಿಟ್ಟಿನಲ್ಲಿ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ನೋಂದಣಿ ಮಾಡುವ ಸಕ್ಷಮ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ವೈಖರಿ ಪರಿಶೀಲಿಸಿ, ಕಾಲ ಕಾಲಕ್ಕೆ ವರದಿ ನೀಡಬೇಕು ಎಂದು ಡೀಸಿ ಆರ್.ಲತಾ ಜಿಲ್ಲಾ ಸಾಂಖ್ಯಿಕ
ನೋಂದಣಾಧಿಕಾರಿಗೆ ಸೂಚನೆ ನೀಡಿದರು.
ಬುಧವಾರ ಡೀಸಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನನ, ಮರಣ ನೋಂದಣಿಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಘಟಿಸುವ ಜನನ, ಮರಣ ಪ್ರಕರಣಗಳನ್ನು ಸಂಬಂಧಪಟ್ಟ ತಂತ್ರಾಂಶಗಳಲ್ಲಿ ನಮೂದಿಸಿ, ಸ್ಥಳೀಯಾಡಳಿತ ಸಂಸ್ಥೆಗಳಿಗೆ ಆನ್ಲೈನ್ ಮೂಲಕ ವಿವರ ರವಾನಿಸಬೇಕು. ಸದರಿ ವಿವರವನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಂಬಂಧಪಟ್ಟ ಅಧಿಕಾರಿ, ಗ್ರಾಮಲೆಕ್ಕಿಗರು ಪರಿಶೀಲಿಸಿ ಪ್ರಮಾಣ ಪತ್ರಗಳನ್ನು ನಿಗದಿತ ಕಾಲ ಮಿತಿಯೊಳಗೆ ವಿತರಿಸಬೇಕು ಎಂದರು.
ಸಮರ್ಪಕವಾಗಿ ಕೆಲಸ ನಿರ್ವಹಿಸಿ: ಆಸ್ಪತ್ರೆ ಗಳನ್ನು ಹೊರತುಪಡಿಸಿ ಘಟಿಸುವ ಜನನ, ಮರಣ ಪ್ರಕರಣಗಳನ್ನು ಸ್ಥಳೀಯ ಆಡಳಿತದ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ತಮ್ಮ ಕಾರ್ಯವ್ಯಾಪ್ತಿಯ ಘಟನೆಗಳ ಮಾಹಿತಿ ಪಡೆದು ಪರಿಶೀಲಿಸಿ, ತಂತ್ರಾಂಶದಲ್ಲಿ ನೋಂದಣಿ ಜೊತೆಗೆ ಪ್ರಮಾಣ ಪತ್ರ ವಿತರಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ನಮೂದು ಪ್ರಕ್ರಿಯೆ ಮೇಲೆ ನಿಗಾವಹಿಸಬೇಕು.ಈ ಎಲ್ಲಾ ಕಾರ್ಯಗಳ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಮಹಾಲನೋಬಿಸ್ ಮಹಾನ್ ಸಂಖ್ಯಾಶಾಸ್ತ್ರಜ್ಞ: ಜಿಪಂ ಯೋಜನಾ ನಿರ್ದೇಶಕಿ ಧನುರೇಣುಕ ಮಾತನಾಡಿ, ಮಹಾಲನೋಬಿಸ್ ಅವರು ಭಾರತ ಕಂಡ ಮಹಾನ್ ಸಂಖ್ಯಾಶಾಸ್ತ್ರಜ್ಞರಾಗಿದ್ದರು. ಸ್ವಾತಂತ್ರ ಭಾರತದ ಪ್ರಥಮ ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸಿಟ್ಯೂಟ್ ಸ್ಥಾಪನೆ ಮಾಡಿ, ದೊಡ್ಡ ಪ್ರಮಾಣದ ಮಾದರಿ ಸಮೀಕ್ಷೆಗಳ ವಿನ್ಯಾಸಗಳ ಬಗ್ಗೆ, ಕೃಷಿ ಕ್ಷೇತ್ರದಲ್ಲಿ ಬೆಳೆ ಇಳುವರಿ ಅಂದಾಜು ಪದ್ಧತಿ, ಬೆಳೆ ಸಮೀಕ್ಷೆ, ಬೆಳೆ ಕಟಾವು ಪ್ರಯೋಗಳ ಕುರಿತು ವೈಜ್ಞಾನಿಕ ತಿಳುವಳಿಕೆ ನೀಡಿದ್ದರು. 2ನೇ ಪಂಚವಾರ್ಷಿಕ ಯೋಜನೆಗೆ ಅವರ ಪಾತ್ರ ಪ್ರಮುಖವಾಗಿತ್ತು. ಇವರ ಸೇವೆಯನ್ನು ಗುರ್ತಿಸಿದ ಭಾರತ ಸರ್ಕಾರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆಯ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಯೋಜನಾ ಪಟ್ಟಿ ಬಿಡುಗಡೆ: ಸಭೆಯಲ್ಲಿ 2020-21ನೇ ಸಾಲಿನ ಜಿಲ್ಲಾ ಅಂಕಿ-ಅಂಶಗಳ ನೋಟ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅವಲೋಕನ ಪುಸ್ತಕವನ್ನು ಹಾಗೂ 2022-23ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ ಬೆಳೆ ಅಂದಾಜು ಸಮೀಕ್ಷೆಯ ಕಾರ್ಯಯೋಜನಾ ಪಟ್ಟಿ ಬಿಡುಗಡೆಗೊಳಿಸಿದರು. ಪ್ರೊ.ಪಿ.ಸಿ. ಮಹಾಲನೋಬಿಸ್ ಜನ್ಮದಿನಾಚರಣೆ, 16ನೇ ವರ್ಷದ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ ಅಂಗವಾಗಿ ಪ್ರೊ.ಪಿ.ಸಿ.ಮಹಾಲನೋಬಿಸ್ ಭಾವಚಿತ್ರಕ್ಕೆ ಡೀಸಿ ಪುಷ್ಪನಮನ ಸಲ್ಲಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಅಪರ ಜನನ, ಮರಣ ನೋಂದಣಾಧಿಕಾರಿ ಪ್ರಕಾಶ್ ರಾಯ್ಕರ್, ಸಹಾಯಕ ನಿರ್ದೇಶಕ ಶಿವಕುಮಾರ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!
Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ