ಬೀಗ ರಿಪೇರಿ ಮಾಡುವರನ್ನು ಕರೆಸಿ ದೇವರ ಕೋಣೆ ಲಾಕರ್ ಒಡೆದ ಐಟಿ ಅಧಿಕಾರಿಗಳು!
Team Udayavani, Oct 10, 2019, 2:55 PM IST
ಚಿಕ್ಕಬಳ್ಳಾಪುರ: ನಗರದ ಪ್ರಶಾಂತ ನಗರದಲ್ಲಿ ವಾಸವಾಗಿರುವ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಸಂಬಂಧಿ ಜಿ.ಹೆಚ್.ನಾಗರಾಜ್ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯ ಮಾಡುತ್ತಿರುವ ಆದಾಯ ತೆರಿಗೆ ಅಧಿಕಾರಿಗಳು ಮನೆಯಲ್ಲಿರುವ ದೇವರ ಕೊಣೆಯಲ್ಲಿ ಶೋಧ ಕಾರ್ಯ ನಡೆಸುವ ಮೂಲಕ ಜಾಲಪ್ಪ ಕುಟುಂಬಕ್ಕೆ ಶಾಕ್ ಕೊಟ್ಟಿದೆ.
ಬೆಂಗಳೂರಿನಿಂದ ಎರಡು ತಂಡಗಳಲ್ಲಿ ಮೂರು ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ಕೋಲಾರದ ಮೆಡಿಕಲ್ ಕಾಲೇಜು ಕಾರ್ಯದರ್ಶಿಯು ಆಗಿರುವ ಜಿ.ಹೆಚ್.ನಾಗರಾಜ್ ಮನೆಯನ್ನು ಇಂಚಿಂಚು ಬಿಡದೇ ಶೋಧ ನಡೆಸಿದ್ದಾರೆ. ಇದರ ನಡುವೆ ನಾಗರಾಜ್ ಮನೆಯ ದೇವರ ಕೊಣೆಯನ್ನು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು, ಮನೆಗೆ ಬೀಗ ರಿಪೇರಿ ಮಾಡುವರನ್ನು ಕರೆಸಿ ದೇವರ ಮನೆಯಲ್ಲಿನ ಲಾಕರ್ ಹೊಡೆದು ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಮನೆ ಸುತ್ತವರೆದ ಅಧಿಕಾರಿಗಳು
ಪೂರ್ವತಯಾರಿ ಮಾಡಿಕೊಂಡು ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕೋಲಾರ, ದೊಡ್ಡಬಳ್ಳಾಪುರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಂಸದ ಆರ್.ಎಲ್.ಜಾಲಪ್ಪ ಸಂಬಂಧಿಕರ ಮನೆ. ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹೆಚ್.ನಾಗರಾಜ್ ಮನೆಯನ್ನು ಐಟಿ ಅಧಿಕಾರಿಗಳು ಸಂಪೂರ್ಣ ಸುತ್ತವರೆದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ