ಸಾಲಕ್ಕೆ ಜಮಾ ಕೃಷಿ ಸಮ್ಮಾನ್, ಜನಧನ್ ಹಣ!
ಕೋವಿಡ್ ಅಟ್ಟಹಾಸ: ಲಾಕ್ಡೌನ್ ಸಂಕಷ್ಟದಲ್ಲಿ ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಶಾಕ್
Team Udayavani, Apr 22, 2020, 5:52 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಲಾಕ್ಡೌನ್ನಿಂದ ಕಂಗಾಲಾಗಿರುವ ರೈತರಿಗೆ ಹಾಗೂ ಮಹಿಳೆಯರ ಕೈ ಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಧನ್ ಖಾತೆದಾರರಿಗೆ ಮೊದಲ ಕಂತಾಗಿ 500 ರೂ. ಹಾಗೂ ಪ್ರಧಾನ ಮಂತ್ರಿ ಕೃಷಿ ಸನ್ಮಾನ್ ಯೋಜನೆಯಡಿ ಬಿಡುಗಡೆಗೊಂಡಿರುವ ತಲಾ 2000 ರೂ.ಗಳನ್ನು ಕೆಲವು ಬ್ಯಾಂಕ್ಗಳು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.
ಕೋವಿಡ್ ಸೋಂಕು ತಡೆಯುವ ಉದ್ದೇಶದಿಂದ ಇಡೀ ದೇಶವನ್ನು ಕೇಂದ್ರ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದು ಮೇ.3 ರ ತನಕ ಮುಂದುವರಿಯಲಿದೆ. ಇದರ ನಡುವೆ ಸರ್ಕಾರಗಳು ಜನರ ಸಂಕಷ್ಟಗಳಿಗೆ ನೆರವಾಗಲು ಜನಧನ್ ಖಾತೆಗೆ 500 ರೂ. ಹಾಗೂ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ 2000 ರೂ. ಬಿಡುಗಡೆ ಮಾಡಿ ರೈತರ ಹಾಗೂ ಕೃಷಿ ಕೂಲಿಕಾರರ ಕೈ ಹಿಡಿದಿದೆ.
ಸಾಲಕ್ಕೆ ಜಮೆ: ಆದರೆ ಕೇಂದ್ರ ಸರ್ಕಾರ ಹಾಕಿದ ಹಣವನ್ನು ಖುಷಿಯಿಂದ ಡ್ರಾ ಮಾಡಲು ಹೋಗುತ್ತಿರುವ ಗ್ರಾಹಕರಿಗೆ ಶಾಕ್ ನೀಡುವ ಕೆಲಸವನ್ನು ಬ್ಯಾಂಕ್ಗಳು ಮಾಡುತ್ತಿದ್ದು,
ಕಷ್ಟಕಾಲದಲ್ಲಿ ಮಾನವೀಯತೆ ಮರೆತು ಸಾಲದ ಹಣಕ್ಕೆ ಪಿಂಚಣಿ, ಜನಧನ್ ಖಾತೆಗೆ ಹಾಕಿರುವ ಹಣವನ್ನು ಜಮೆ ಮಾಡಿಕೊಳ್ಳುತ್ತಿದ್ದು, ಸದ್ಯದ ಗ್ರಾಹಕರ ಸ್ಥಿತಿ ದೇವರು ವರ
ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ. ಲಾಕ್ಡೌನ್ನಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಜೀವನ ತೀವ್ರ ಸಂಕಷ್ಟದಲ್ಲಿದೆ. ಆದರೆ ಜಿಲ್ಲೆಯ ಕೆಲ ಖಾಸಗಿ
ಹಾಗೂ ಸಾರ್ವಜನಿಕ ಬ್ಯಾಂಕ್ಗಳು ಜನರ ನೆರವಿಗೆ ಕೊಟ್ಟ ಹಣವನ್ನು ಸಾಲಕ್ಕೆ ಮುರಿದುಕೊಳ್ಳುವ ಕಾಯಕದಲ್ಲಿ ನಿರತವಾಗಿದ್ದು, ಜನರ ಆಕ್ರೋಶಕ್ಕೆ ತುತ್ತಾಗಿವೆ. ಜಿಲ್ಲೆಯಲ್ಲಿ ಅತಿ ಹಿಂದುಳಿದ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ತಾಲೂಕುಗಳಲ್ಲಿ ಇತಂಹ ಆರೋಪಗಳು ಸಾರ್ವಜನಿಕರಿಂದ ವ್ಯಕ್ತವಾಗಿದ್ದು, ಈ ಬಗ್ಗೆ ಸಂಬಂದಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಎಚ್ಚೆತ್ತಿಕೊಂಡು ಬ್ಯಾಂಕ್ಗಳಿಗೆ ಸೂಕ್ತ ನಿರ್ದೇಶನ ನೀಡಬೇಕಿದೆ.
ಪಿಂಚಣಿ ಹಾಗೂ ಜನಧನ್ ಖಾತೆಗೆ ಜಮೆ ಆಗಿರುವ ಹಣವನ್ನು ಬ್ಯಾಂಕ್ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ. ಈ ಬಗ್ಗೆ ಯಾವುದೇ ಬ್ಯಾಂಕ್ನಲ್ಲಿ ಆಗಿದ್ದರೂ ನಾಗರಿಕರು ದೂರು
ಕೊಡಬಹುದು. ನರೇಗಾ ಕೂಲಿ ಹಣ ಸಾಲಕ್ಕೆ ಹಿಡಿಯುತ್ತಿದ್ದರ ಬಗ್ಗೆ ದೂರು ಬಂದ ತಕ್ಷಣ ಸ್ಪಂದಿಸಿ ಬ್ಯಾಂಕ್ಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಸವರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರು
ವೃದ್ಧಗೆ ಬಿಡುಗಡೆಗೊಂಡಿರುವ ಪಿಂಚಣಿ, ಮಹಿಳೆಯ ಜನಧನ್ ಖಾತೆಗೆ ಜಮೆ ಆಗಿರುವ ಹಣ ಕೆಲವು ಬ್ಯಾಂಕ್ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ. ಲಾಕ್ಡೌನ್ ಮುಗಿದ ಮೇಲೆ ಕಟ್ಟು ತ್ತೇವೆಂದು ಹೇಳಿದರೂ ಕೇಳುತ್ತಿಲ್ಲ. ಸರ್ಕಾರ ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಪಡೆಯುತ್ತಿದೆ. ಬಿಳ್ಳೂರು ನಾಗರಾಜ್, ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯ
ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ