ಜನಹಿತ ಆ್ಯಪ್‌ ದೂರುಗಳಿಗೆ ಸಿಗದ ಸ್ಪಂದನೆ

ಫೇಸ್‌ಬುಕ್‌-ಟ್ವಿಟರ್‌ನಲ್ಲಿ ಒಂದು ದೂರು ಸಹ ದಾಖಲಾಗಿಲ್ಲ

Team Udayavani, Oct 20, 2020, 3:49 PM IST

cb-tdy-2

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಸರ್ಕಾರ ಅದೇ ರೀತಿಯಲ್ಲಿ ನಾಗರಿಕರ ಕುಂದು ಕೊರತೆಗಳನ್ನು ನಿವಾರಿಸುವ ಸಲುವಾಗಿ ಆರಂಭಿಸಲಾದ ಜನಹಿತ ಆ್ಯಪ್‌ ಮೂಲಕ ಸಲ್ಲಿಕೆಯಾಗುವ ದೂರುಗಳಿಗೆ ಸೂಕ್ತ ರೀತಿಯ ಸ್ಪಂದನೆ ಇಲ್ಲದಂತಾಗಿದೆ.

ಅಪಸ್ವರ: ಮಾಹಿತಿ ಮತ್ತು ತಂತ್ರಾಜ್ಞಾನದ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಹ ಆನ್‌ಲೈನ್‌ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರಿ ಯೋಜನೆಗಳನ್ನು ಅರ್ಜಿ ಸಲ್ಲಿಸುವ ಜೊತೆಗೆ ದೂರು ದುಮ್ಮಾನಗಳು ಸಹ ಆನ್‌ಲೈನ್‌ ಮೂಲಕವೇ ಅರ್ಜಿಗಳನ್ನು ಸ್ವೀಕರಿಸಿ ಪರಿಹರಿಸುವ ಸಲುವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಜನಹಿತ ಆ್ಯಪ್‌ ಯೋಜನೆಯಡಿ ದಾಖಲಿಸುವ ದೂರುಗಳಿಗೆ ಪೂರಕವಾಗಿ ಸ್ಪಂದನೆ ಸಿಗುತ್ತಿಲ್ಲ ಎಂಬ ಅಪಸ್ವರಕೇಳಿ ಬರುತ್ತಿದೆ.

ಸ್ವೀಕೃತಿ ಮಾತ್ರ: ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ನಾಗರಿಕ ಸಮಸ್ಯೆಗಳನ್ನು ಪರಿಹರಿಸುವಸಲುವಾಗಿ ಜನಹಿತ ಆ್ಯಪ್‌, ವಾಟ್ಸ್‌ಆಪ್‌, ಫೇಸ್‌ಬುಕ್‌, ಟ್ವೀಟರ್‌ ಜೊತೆಗೆ ಲಿಖೀತವಾಗಿ ದೂರು ಸ್ವೀಕರಿಸುವ ಯೋಜನೆ ಜಾರಿಯಲ್ಲಿದೆ. ಆದರೆಜನಹಿತ ಆ್ಯಪ್‌ ಮೂಲಕ ದಾಖಲಿಸುವ ದೂರುಗಳಿಗೆ ತ್ವರಿತವಾಗಿ ನಿಮ್ಮ ದೂರುಗಳನ್ನು ಪರಿಹರಿಸುತ್ತೇವೆಎಂದು ಸಿದ್ಧ ಉತ್ತರ (ಸ್ವೀಕೃತಿ) ದೊರೆಯುತ್ತದೆ ವಿನಃ ಮೊಬೈಲ್‌ಗ‌ಳಿಗೆ ಬರುವ ಸಂದೇಶಗಳನ್ವಯ ನಿಗದಿತ ಅವಧಿಯೊಳಗೆ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ.

ಯೋಜನೆಗೆ ಗ್ರಹಣ: ಕರ್ನಾಟಕ ಮುನ್ಸಿಪಲ್‌ ಟಾಡಾ ಸೊಸೈಟಿ ಸಹಯೋಗದೊಂದಿಗೆನಿರ್ವಹಿಸಲ್ಪಡುವ ಈ ಅಪ್ಲಿಕೇಷನ್‌ ಹೆಚ್ಚೆಚ್ಚು ಜನರು ಬಳಸಬೇಕು ಎಂದು ಅಂದಿನ ಸರ್ಕಾರ ನಾಗರಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಜಾರಿಗೊಳಿಸಿತು. ಆದರೆ ಜನಹಿತ ಆ್ಯಪ್‌ ಮೂಲಕ ದಾಖಲಾಗುವ ದೂರುಗಳು ತಿಂಗಳು ಕಳೆದರೂ ಸಹ ಅಧಿಕಾರಿಗಳಿಂದ ಸ್ಪಂದನೆ ಸಿಗುತ್ತಿಲ್ಲ. ಈ ಯೋಜನೆಒಂದು ರೀತಿಯಲ್ಲಿ ಗ್ರಹಣ ಬಡಿದಂತಾಗಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವ ರೀತಿ ದೂರು ಸಲ್ಲಿಸಬಹುದು: ರಸ್ತೆ, ನೀರು, ಬೀದಿ ದೀಪ ಅಳವಡಿಕೆ, ಒಳಚರಂಡಿ ಅವ್ಯವಸ್ಥೆ ಸಾರ್ವಜನಿಕ ಆರೋಗ್ಯ ಸೇರಿದಂತೆ ಹಲವಾರು ಕುಂದು ಕೊರತೆಗಳ ಬಗ್ಗೆ ಜನಹಿತ ಆ್ಯಪ್‌ ಮೂಲಕ ದೂರು ನೀಡಬಹುದು. ಅದರಲ್ಲದೇ ದೂರವಾಣಿ ಮೂಲಕ ಸಮಸ್ಯೆಗಳ ಬಗ್ಗೆ ದೂರು ದಾಖಲಿಸಬಹುದು. ವಾಟ್ಸ್‌ಆಪ್‌ ಬಳಕೆ ಮಾಡಿ ಸಹ ದೂರು ದಾಖಲಿಸಬಹುದು. ಆದರೆ ಈ ವ್ಯವಸ್ಥೆಯಕುರಿತು ವ್ಯಾಪಕ ಪ್ರಚಾರ ಆಗಬೇಕಾಗಿದೆ. ಜಿಲ್ಲೆಯಲ್ಲಿ 4 ನಗರಸಭೆ, ಒಂದು ಪುರಸಭೆ ಹಾಗೂ ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಂದುಕೊರತೆ ಪರಿಹರಿಸಲು ಅರ್ಜಿ ಸಲ್ಲಿಸಲಾಗಿದೆ. ಅದಕ್ಕೆ ಪೂರಕವಾಗಿ ಸಂಬಂಧಿಸಿದ ಅಧಿಕಾರಿಗಳಿಂದಆಗುತ್ತಿಲ್ಲವೆಂದು ದೂರು ಸಾಮಾನ್ಯವಾಗಿದೆ.

ಇದೇ ಕಾರಣಕ್ಕಾಗಿ ಇಂದಿನ ಆಧುನಿಕ ಯುಗದಲ್ಲಿಹೆಚ್ಚಾಗಿ ಬಳಕೆಯಲ್ಲಿರುವ ಫೇಸ್‌ಬುಕ್‌ ಮತ್ತು ಟ್ವೀಟರ್‌ನಲ್ಲಿ ಯಾರು ದೂರು ಸಲ್ಲಿಸುವ ಗೋಜಿಗೆ ಹೋಗಿಲ್ಲ.ಕುಂದುಕೊರತೆ ಆಲಿಸಲು ಇರುವ ವ್ಯವಸ್ಥೆ ಉತ್ತಮವಾಗಿದೆ. ಆದರೆ ಸೂಕ್ತ ರೀತಿಯ ಸ್ಪಂದನೆ ಇಲ್ಲ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕಾಗಿದೆ.

ದೂರು ದಾಖಲಿಸಲು ಹಿಂದೇಟು :  ಆನ್‌ಲೈನ್‌ ಮೂಲಕ ಕುಂದುಕೊರತೆಗಳ ನಿರ್ವಹಣೆಗೆ ಸ್ವಯಂಚಾಲಿತ ತಂತ್ರಾಂಶ ಬಳಕೆ ಮಾಡಲಾಗಿದೆ. ದೂರು ನೀಡಿದಾಗ ಬಳಿಕ ಕೂಡಲೇ ಒಂದು ಸಂದೇಶ ಮೊಬೈಲ್‌ಗ‌ಳಿಗೆ ಬರುತ್ತದೆ. ತಾವು ನೀಡಿರುವ ದೂರು ದಾಖಲಿಸಿಕೊಂಡಿದ್ದೇವೆ. ನಿಮ್ಮ ಸಮಸ್ಯೆಯನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಪರಿಹರಿಸುತ್ತೇವೆ ಎಂದು ಸಿದ್ಧ ಉತ್ತರ ಬರುತ್ತದೆ. ಆದರೆ ಸ್ಪಂದನ ಮಾತ್ರ ಆಟಕ್ಕುಂಟು ಲೆಕಕ್ಕಿಲ್ಲದಂತಾಗಿದೆ. ಇದರಿಂದ ನಾಗರಿಕರುಕುಂದುಕೊರತೆಗಳನ್ನು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ.

ಜನಹಿತ ಮತ್ತು ಆನ್‌ಲೈನ್‌ ಮೂಲಕ ಸಲ್ಲಿಕೆಯಾಗುವ ದೂರುಗಳನ್ನು ತ್ವರಿತವಾಗಿಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ನಾಗರಿಕರು ದೂರುದಾಖಲಿಸುವ ವೇಳೆಯಲ್ಲಿ ವಿಳಾಸ ಮತ್ತು ದೂರಿಗೆ ಸಂಬಂಧಿಸಿದ ಚಿತ್ರಗಳನ್ನು ಅಪ್‌ಲೋಡ್‌ ಮಾಡಿದರೆ ಸಮಸ್ಯೆಗಳು ಬಗೆಹರಿಸಿರುವ ಬಗ್ಗೆ ಖಾತ್ರಿಯಾಗುತ್ತದೆ. ದೂರುಗಳು ಪರಿಹರಿಸಲು ವಿಳಂಬ ಕುರಿತು ಪರಿಶೀಲನೆ ನಡೆಸುತ್ತೇನೆ. ರೇಣುಕಾ, ಜಿಲ್ಲಾ ಯೋಜನಾ ನಿರ್ದೇಶಕಿ, ನಗರಾಭಿವೃದ್ಧಿ ಕೋಶ

ನಗರಸಭೆ ವ್ಯಾಪ್ತಿಯಲ್ಲಿ ಅನೇಕ ರೀತಿಯ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸುವ ಸಲುವಾಗಿ ವ್ಯವಸ್ಥೆಗಳಿದ್ದರೂ ಸಹಅಧಿಕಾರಿಗಳು ಸರ್ಕಾರದಯೋಜನೆಗಳ ಕುರಿತು ಪ್ರಚಾರ ಪಡಿಸುವುದಿಲ್ಲ. ನಾಗರಿಕರು ಸಲ್ಲಿಸುವ ದೂರುಗಳುಕೇವಲ ಸ್ವೀಕೃತಿಗೆ ಸೀಮಿತವಾಗಿದೆ. ಸೋಮು ನಾಗರಿಕರ ಚಿಕ್ಕಬಳ್ಳಾಪುರ

 

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.