ದುರಾಡಳಿತ ಆರೋಪ ಸಾಬೀತಿಗೆ ಸವಾಲು
Team Udayavani, Dec 21, 2020, 3:54 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಮೇಲೂರು ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಎಲ್ಲಾ ಹಿರಿಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಾತೀತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದೇನೆ. ದುರಾಡಳಿತ ನಡೆಸಿರುವುದು ಸಾಬೀತುಪಡಿಸಿದರೆ ರಾಜಕೀಯವಾಗಿ ನಿವೃತ್ತಿ ಘೋಷಿಸುತ್ತೇನೆ ಎಂದು ಮೇಲೂರು ಗ್ರಾಪಂ ಮಾಜಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ ಸವಾಲು ಹಾಕಿದರು.
ಜಿಲ್ಲೆಯ ಮೇಲೂರು ಗ್ರಾಪಂ ಕೇಂದ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೇಲೂರು ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಂಜುನಾಥ್ ಅವರು ಕಳೆದ ಮೂರು ವರ್ಷಗಳ ಅವಧಿಯಲ್ಲಿ ದುರಾಳಿಡಳಿತ ನಡೆದಿದೆ ಮತ್ತು ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಆರೋಪಿಸಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಸನ್ಯಾಸ್ಯತ್ವ ಸ್ವೀಕರಿಸುವರೇ?: ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ರೀತಿಯ ದುರಾಡಳಿತ ನಡೆದಿಲ್ಲ. ಒಂದು ವೇಳೆ ನಡೆದಿರುವುದನ್ನು ಸಾಬೀತುಪಡಿಸಿದರೇ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ ಕೆ.ಮಂಜುನಾಥ್ ಅವರು ರಾಜಕೀಯದಿಂದ ಸನ್ಯಾಸ್ವತ್ವ ಸ್ವೀಕರಿಸುವುರೇ ಎಂದು ಸವಾಲು ಹಾಕಿದರು.
ಸೋಲಿನ ಭೀತಿ: ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಂಜುನಾಥ್ ಅವರು ರಾಜಕೀಯ ದುರುದ್ದೇಶದಿಂದ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದು,ಯಾವುದೇ ರೀತಿಯ ಸತ್ಯಾಂಶವಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರಿಗೆ ದೊರೆಯುತ್ತಿರುವ ಜನ ಬೆಂಬಲ ನೋಡಿ ಹತಾಶರಾಗಿ ಸೋಲಿನ ಭೀತಿಯಿಂದ ರಾಜಕೀಯ ಪ್ರೇರಿತವಾಗಿ ಆರೋಪ ಮಾಡಿದ್ದಾರೆ ಎಂದು ದೂರಿದರು.
ಮಾದರಿ ಗ್ರಾಪಂ ಕಟ್ಟಡ: ಗ್ರಾಪಂನ ಕಟ್ಟಡ ನಿರ್ಮಿಸಲು ಈಗಾಗಲೇ ಮಜಿನರೇಗಾ ಯೋಜನೆ ಯಡಿ ಅನುದಾನ ಮೀಸಲಿಟ್ಟಿದ್ದೇವೆ. ಆದರೆ ಅನುದಾನದ ಕೊರತೆಯಿಂದ ಕಟ್ಟಡದ ಕಾಮಗಾರಿ ಆರಂಭಿಸಲು ಸಾಧ್ಯವಾಗಿಲ್ಲ. ಈ ಬಾರಿ ಚುನಾವಣೆಯಲ್ಲಿ ಜಯ ಸಾಧಿಸಿದ ಬಳಿಕ ರಾಜ್ಯದಲ್ಲಿಯೇ ಮಾದರಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಂಜುನಾಥ್ರ ಮಾತುಗಳಿಗೆ ಯಾರು ಮರುಳಾಗಬಾರದು ಎಂದರು.
ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಅಭ್ಯರ್ಥಿ ಎನ್. ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಭಾಗ್ಯಲಕ್ಷ್ಮೀ ಶಿವಕುಮಾರ್, ಗ್ರಾಪಂ ಮಾಜಿ ಸದಸ್ಯ ಬಸ್ ಶ್ರೀನಿವಾಸ್, ಬಿ.ಎಂ.ಶ್ರೀನಿವಾಸರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ವಿಷಯದಲ್ಲಿ ಸಹಭಾಗಿ ಯಾಗಿದ್ದ ಗ್ರಾಪಂ ಮಾಜಿ ಅಧ್ಯಕ್ಷ ಕೆ. ಮಂಜುನಾಥ್ ಪ್ರತಿಯೊಂದು ಸಭೆಯಲ್ಲಿ ಭಾಗವಹಿಸಿ ಕೈಗೊಂಡ ನಿರ್ಣಯಗಳಿಗೆ ಬೆಂಬಲಿಸಿ ಸಹಿ ಮಾಡಿದ್ದಾರೆ. ಅಂದುಅಭಿವೃದ್ಧಿ ವಿಷಯದಲ್ಲಿಯಾಕೆ ಆಕ್ಷೇಪಣೆಮಾಡಿಲ್ಲ.- ಜಮುನಾ ಧರ್ಮೇಂದ್ರ, ಮೇಲೂರು ಗ್ರಾಪಂ ಮಾಜಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ