ಚಿಕ್ಕಬಳ್ಳಾಪುರದಲ್ಲಿ ಮನೆ ಮಾಡಿ ರಾಜಕೀಯ ಹೋರಾಟ ಮುಂದುವರೆಸುವೆ: ಎನ್.ರಾಧಕೃಷ್ಣ
Team Udayavani, Dec 14, 2019, 11:46 AM IST
ಚಿಕ್ಕಬಳ್ಳಾಪುರ: ಉಪ ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ಕ್ಷೇತ್ರ ಬಿಡುವ ಪ್ರಶ್ನೆ ಇಲ್ಲ. ಕ್ಷೇತ್ರದಲ್ಲಿಯೇ ಮನೆ ಮಾಡಿ ಪಕ್ಷ ಸಂಘಟನೆಯ ಕೆಲಸ ಮಾಡುವುದಾಗಿ ಜೆಡಿಎಸ್ ಪರಾಜಿತ ಅಭ್ಯರ್ಥಿ ಎನ್.ರಾಧಕೃಷ್ಣ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಪತ್ರಕರ್ತ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊನೇಯ ಕ್ಷಣದಲ್ಲಿ ನಾನು ಉಪ ಚುನಾವಣೆ ಅಭ್ಯರ್ಥಿ ಆದೆ. ಆದ್ದರಿಂದ ಪಕ್ಷದ ಕಾರ್ಯಕರ್ತರನ್ನು ತಲುಪಲು ಸಾಧ್ಯವಾಗಲಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸೋಲಾಯಿತು. ಆದರೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿಯೇ ಮನೆ ಮಾಡಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇವೆ. ಕ್ಷೇತ್ರದ ಅಭಿವೃದ್ಧಿಗೆ ಮಂತ್ರಿಯಾಗುತ್ತಿರುವ ಸುಧಾಕರ್ ಜೊತೆ ಪಕ್ಷಾತೀತವಾಗಿ ಕೈ ಜೋಡಿಸುತ್ತೇವೆ. ಜನ ವಿರೋಧಿ ಧೋರಣೆ ಅನುಸರಿಸಿದರೆ ಹೋರಾಟ ನಡೆಸುತ್ತೇವೆಂದರು.
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ಚುನಾವಣೆಯಲ್ಲಿ ಸಾಕಷ್ಟು ಅಕ್ರಮ, ಆನ್ಯಾಯಗಳು ಅಗಿರುವುದರಿಂದ ನಮಗೆ ಸೋಲಾಗಿದೆ ಎಂದು ಆರೋಪಿಸಿದರು.
ಜಿಲ್ಲಾಡಳಿತ ಏಕಪಕ್ಷೀಯವಾಗಿ ಕೆಲಸ ಮಾಡಿದೆ. ಸಹಜವಾಗಿ ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷಗಳು ಗೆಲುವು ಸಾಧಿಸುವುದು ಸಹಜ. ಆದರೆ ನಾವು ಸೋತ ಮಾತ್ರಕ್ಕೆ ಪಲಾಯನ ಮಾಡದೇ ಕ್ಷೇತ್ರದಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲಾಗುವುದೆಂದರು.
ಸುದ್ದಿಗೋಷ್ಟಿಯಲ್ಲಿ ಜಿಪಂ ಸದಸ್ಯರಾದ ಮುನೇಗೌಡ, ರಜಾಕಾಂತ್, ಮುಖಡರಾದ ಬಾಸ್ಕರ್, ಅವುಲುಕೊಂಡ ರಾಯಪ್ಪ, ಮಟಮಪ್ಪ, ರಾಜಕುಮಾರ್, ಬಾಲಕುಂಟಹಳ್ಳಿ ಮುನಿಯಪ್ಪ, ಶಿವ ಕುಮಾರ್, ಅಪ್ಪಿ, ಸಾಧಿಕ್ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ