12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ


Team Udayavani, Oct 26, 2021, 2:44 PM IST

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

ಚಿಂತಾಮಣಿ: ಭೂಮಿಗೆ ಬಿದ್ದ ಬೀಜ, ಜೆಡಿಎಸ್‌ಗೆ ಬಿದ್ದ ಮತ ಎಂದಿಗೂ ವ್ಯರ್ಥವಾಗುವುದಿಲ್ಲ, 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದರೆ, ಹತ್ತು ಹಲವು ಜನಪರ ಯೋಜನೆ ಜಾರಿಗೆ ತಂದು ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅಭಿಪ್ರಾಯಪಟ್ಟರು.

ನಗರದ ವಾರ್ಡ್‌ ನಂ.31ರ ತಿಮ್ಮಸಂದ್ರದ ಬಿಎಂವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜೆಡಿಎಸ್‌ ರಾಷ್ಟ್ರೀಯ ಪಕ್ಷವಾಗಿಉಳಿಯಬೇಕಾದರೆ ಕನಿಷ್ಠ ಒಂದು ಲಕ್ಷದಷ್ಟು ಸದಸ್ಯತ್ವ ಕಡ್ಡಾಯವಾಗಿದೆ. ತಾಲೂಕಿನಿಂದ 12 ಸಾವಿರ ಜನ ಸದಸ್ಯತ್ವ ಪಡೆಯಬೇಕು ಎಂದು ಹೇಳಿದರು.

ಸಂಘಟನೆಗೆ ಮುಂದಾಗಿ: 2006ರಿಂದ 2008 ರವರೆಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಕೊಟ್ಟಿರುವ ಹಲವು ಯೋಜನೆಗಳು ಜನಪ್ರಿಯವಾಗಿದ್ದು. 2018ರಲ್ಲೂ ಒಂದು ವರ್ಷ ಸಿಎಂ ಆಗಿದ್ದು, ಮತ್ತೂಮ್ಮೆ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ನೋಡಬೇಕು, ರಾಜ್ಯಅಭಿವೃದ್ಧಿ ಹೊಂದಬೇಕಾದರೆ ಜೆಡಿಎಸ್‌ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆಗೆ ಮುಂದಾಗಬೇಕು ಎಂದು ವಿವರಿಸಿದರು.

ಯೋಜನೆಗಳ ರೂಪು: ಅಧುನಿಕ ಶಿಕ್ಷಣ, ರೈತ ಅಭಿವೃದ್ಧಿ ಯೋಜನೆ, ಆರೋಗ್ಯ, ಯುವ ಮತ್ತು ನವ ಮಾರ್ಗ, ಮಹಿಳೆಯರಿಗೆ ಉದ್ಯೋಗ ಕಲ್ಪಿಸುವುದು, ವಸತಿ ಸೇರಿ ಇತರೆ ಯೋಜನೆಗಳನ್ನು ರೂಪಿಸಿದ್ದು, ಜನರಿಗೆ ಸೇರುವಂತೆ ಮಾಡಬೇಕಾಗಿದೆ ಎಂದು ಹೇಳಿದರು.

ನಮ್ಮದು ಜೆಡಿಎಸ್‌ ಪಕ್ಷ: ನಾವು ಎಂದಿಗೂ ಜೆಡಿಎಸ್‌ ಪಕ್ಷದಲ್ಲೇ ಇರುತ್ತೇವೆ. ನಾವು ಗ್ರಾಮೀಣ ಭಾಗದಲ್ಲಿ ಒಂದು ಪಕ್ಷ, ನಗರ ಭಾಗದಲ್ಲಿ ಒಂದು ಪಕ್ಷದ ನಾಯಕರ ಜೊತೆ ಗುರುತಿಸಿಕೊಳ್ಳುವುದಿಲ್ಲ, ಎಲ್ಲೇ ಇದ್ದರೂ ಯಾರ ಜೊತೆ ಹೋದರೂ ನಾವು ಒಂದೇ ಪಕ್ಷ. ಅದು ಜೆಡಿಎಸ್‌. ಇನ್ನೊಬ್ಬರ ತರ ನಾವು ದಿನಕ್ಕೆ ಒಬ್ಬೊಬ್ಬ ನಾಯಕರ ಜೊತೆ ಗುರ್ತಿಸಿಕೊಳ್ಳುವುದಿಲ್ಲ ಎಂದು ತಮ್ಮ ರಾಜಕೀಯ ವಿರೋಧಿಗಳ ತಿರುಗೇಟು ನೀಡಿದರು.

ಗೆಲ್ಲಲು ಆಗುತ್ತಿರಲಿಲ್ಲ: ಯಾರಿಗೆ ಏನು ತೊಂದರೆ ಆಗಿದಿಯೋ ಗೊತ್ತಿಲ್ಲ, ಕೆಲವರು ನನ್ನನ್ನು 9 ವರ್ಷಗಳ ಹಿಂದಿನಿಂದ ಕ್ಷೇತ್ರದಿಂದ ಓಡಿಸಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಾನು ಮೊದಲನೇ ಬಾರಿ ಚುನಾವಣೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದೆ, ಎರಡನೇ ಬಾರಿಯೂ ಐದು ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದೇನೆ. ಜೆ.ಕೆ.ಕೃಷ್ಣಾರೆಡ್ಡಿ ಅಭಿವೃದ್ಧಿ, ಜನ ಸಾಮಾನ್ಯರ ಪರ ಇಲ್ಲದಿದ್ದರೆ ಎರಡನೇ ಬಾರಿ ಗೆಲ್ಲುವುದಕ್ಕೆ ಆಗುತ್ತಿರಲಿಲ್ಲ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಪ್ರವಾಸಿ ಮಂದಿರದಿಂದ ಜೆಡಿಎಸ್‌ ಕಾರ್ಯಕರ್ತರು ಬೈಕ್‌ ರ್ಯಾಲಿ ಆರಂಭಿಸಿ, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಿಮ್ಮಸಂದ್ರದ ವೇದಿಕೆ ಕಾರ್ಯಕ್ರಮಕ್ಕೆ ಸೇರಿಕೊಂಡರು.

ಜೆಡಿಎಸ್‌ ನಗರ ಅಧ್ಯಕ್ಷ ವೆಂಕಟರವಣಪ್ಪ, ಘಟಕಗಳ ಅಧ್ಯಕ್ಷರು, ನಗರಸಭಾ ಸದಸ್ಯರು, ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.