ಬೂತ್ ಮಟ್ಟದಿಂದ ಜೆಡಿಎಸ್ ಸಂಘಟನೆ
Team Udayavani, Mar 12, 2022, 3:30 PM IST
ಗುಡಿಬಂಡೆ: ಜೆಡಿಎಸ್ ಪಕ್ಷ ಬಡವರ, ಜನಪರ, ಅಲ್ಪಸಂಖ್ಯಾತರ ಪರವಾಗಿ ಹೋರಾಟ ಮಾಡುವಂತಹ ಪಕ್ಷವಾಗಿದ್ದು, ಗುಡಿಬಂಡೆ- ಬಾಗೇಪಲ್ಲಿ ಕ್ಷೇತ್ರ ದಲ್ಲಿ ಬೂತ್ ಮಟ್ಟದಿಂದಲೇ ಪಕ್ಷದ ಬಲವರ್ಧನೆಗೆ ಶ್ರಮ ವಹಿಸುವುದಾಗಿ ಜೆಡಿ ಎಸ್ ಪಕ್ಷದ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಪಿ.ನಾರಾಯಣ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತ ನಾಡಿ, ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಅಗತ್ಯತೆ ಹೆಚ್ಚಾಗಿದೆ. ಪಕ್ಷವನ್ನು ಗ್ರಾಮಿಣ ಮಟ್ಟದಿಂದಲೇ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇನೆ. ಈಗಾಗಲೇ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ಅವರ ಸಮಸ್ಯೆ ಗಳಿಗೂ ಸಹ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನಿರಂತರವಾಗಿ ಕ್ಷೇತ್ರದ ಕಾರ್ಯಕರ್ತರೊಂದಿಗೆ
ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ ಬಗೆಹರಿಸುವ ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದರು. ಬಳಿಕ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿ, ಜೆಡಿಎಸ್ ಪಕ್ಷದ ಕೆಲ ಮುಖಂಡರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾರೇ ಕ್ಷೇತ್ರಕ್ಕೆ ಬಂದರೂ ಸ್ಥಳೀಯ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಂಡು ಕೆಲಸ ಮಾಡಬೇ ಕಿದೆ. ಆದರೆ ಕೆಲ ನಾಯಕರು ನಮ್ಮನ್ನು ಕಡೆಗಣಿಸಿದ್ದು ಸರಿಯಲ್ಲ. ಇನ್ನೂ ನಾವೇಲ್ಲ ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದು, ಪಕ್ಷದಿಂದ ಯಾರೇ ವ್ಯಕ್ತಿಯನ್ನು ಚುನಾವನೆಗೆ ಕಳುಹಿಸಿದರೇ ಅವರ ಪರವಾಗಿಯೇ ಕೆಲಸ ಮಾಡುತ್ತೇವೆ ಎಂದರು.
ಜೆಡಿಎಸ್ ಪಕ್ಷದ ಮುಖಂಡ ಭಾಸ್ಕರ ರೆಡ್ಡಿ, ಪಪಂ ಮಾಜಿ ಅಧ್ಯಕ್ಷ ಅಪ್ಸರ್ ಬಾಷ, ಸದಸ್ಯ ರಾಜಣ್ಣ, ಪಾಪಿರೆಡ್ಡಿ, ವೆಂಕಟರೆಡ್ಡಿ, ಬಾಗೇಪಲ್ಲಿ ನೂರುಲ್ಲಾ, ಮುನೀರ್ ಅಹ್ಮದ್, ರವಿ, ಶ್ರೀನಿವಾಸ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ