ಕ್ಷಯಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

ಕ್ಷಯ ರೋಗವನ್ನು ದೇಶದಲ್ಲಿ ಕೊನೆಗಾಣಿಸಿ ಕ್ಷಯಮುಕ್ತ ಭಾರತ ಎಂದು ಘೋಷಿಸುವ ಗುರಿ

Team Udayavani, Jul 22, 2022, 6:36 PM IST

ಕ್ಷಯಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

ಚಿಕ್ಕಬಳ್ಳಾಪುರ: ಮನೆ ಬಾಗಿಲಿಗೆ ತೆರಳಿ ಕ್ಷಯರೋಗ ಪತ್ತೆ ಹಚ್ಚುವ ಜೊತೆಗೆ ಅದನ್ನು ನಿರ್ಮೂಲನೆ ಮಾಡುವಲ್ಲಿ ರಾಜ್ಯ ಸರ್ಕಾರ ಆ.15ರವರೆಗೆ ಎಲ್ಲಾ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನವನ್ನು ಇತ್ತೀಚಿಗೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ 11 ಸದಸ್ಯರ ಜೆಎಸ್‌ಎಸ್‌ ತಂಡವು ಚಿಕ್ಕಬಳ್ಳಾಪುರಕ್ಕೂ ಭೇಟಿ ನೀಡಿತ್ತು.

ನಗರ ಹೊರವಲಯದ ಜಿಪಂ ಮಿನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಾ  ಕಾರ್ಯಕ್ರಮವನ್ನು ಜೆ.ಎಸ್‌.ಎಸ್‌ ತಂಡವು ಉದ್ಘಾಟಿಸಿ, ನಂತರ ಜಿಲ್ಲೆಯ ಕ್ಷಯರೋಗ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುವ ಮೂಲಕ ಪ್ರಗತಿ ಪರಿಶೀಲನೆ ನಡೆಸಿತು.

ಕ್ಷಯ ರೋಗ ಕೊನೆಗಾಣಿಸಿ: ಕರಪತ್ರ ಮತ್ತು ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸುವ ಮೂಲಕ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ತಂಡದ ಸದಸ್ಯ ಡಾ. ರಾಜೇಂದ್ರ ಪಿ.ಜೋಶಿ, 2025ರ ವೇಳೆಗೆ ಕ್ಷಯ ರೋಗವನ್ನು ದೇಶದಲ್ಲಿ ಕೊನೆಗಾಣಿಸಿ ಕ್ಷಯಮುಕ್ತ ಭಾರತ ಎಂದು ಘೋಷಿಸುವ ಗುರಿಯನ್ನು ಹೊಂದಲಾಗಿದೆ. ಎಲ್ಲರೂ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕಫ‌ ಪರೀಕ್ಷಿಸಿಕೊಳ್ಳಲು ಸಲಹೆ ನೀಡಿ: ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಹಚ್ಚಲು ಆರೋಗ್ಯ ಇಲಾಖೆಯು ಮತ್ತಷ್ಟು ಅರಿವು ಮೂಡಿಸುವ ಚಟುವಟಿಕೆಗಳನ್ನು ರೂಪಿಸಬೇಕು. ರೋಗದ ಲಕ್ಷಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸರ್ಕಾರಿ ಆಸ್ಪತ್ರೆಗೆ ಬಂದು, ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೆಚ್ಚು ಅರಿವು ಮೂಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕ್ಷಯಮುಕ್ತ ರಾಜ್ಯವನ್ನಾಗಿಸೋಣ: ಎಲ್ಲರೂ ಒಗ್ಗೂಡಿ ಕ್ಷಯ ರೋಗದ ವಿರುದ್ಧ ಹೋರಾಟ ನಡೆಸಿ, ಕರ್ನಾಟಕವನ್ನು ಕ್ಷಯಮುಕ್ತ ರಾಜ್ಯವನ್ನಾಗಿಸೋಣ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಅಥವಾ ನಿಕ್ಷಯ್‌ ಸಹಾಯವಾಣಿ 1800116666ಕ್ಕೆ ಕರೆ ಮಾಡಬಹುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಜೆಎಸ್‌ಎಸ್‌ ತಂಡದ ಸದಸ್ಯರಾದ ಡಾ.ರಂಜನಿ ರಾಮಚಂದ್ರನ್‌, ಡಾ.ರಾಜೇಶ್‌ ಎಲ್‌. ಕಡೆಮಣಿ, ಡಾ.ಜಾರ್ಜ್‌ ಬೆಲಾ ಸ್ಟೇಕ್‌, ಡಾ.ಎಸ್‌.ಆನಂದ, ಡಾ.ಶೀಬು ಬಾಲಕೃಷ್ಣ, ಡಾ.ಶಿವವಲ್ಲಿನಾಥನ್‌ ಅರುಣಾಚಲಂ, ವಿN°àಶ್ವರನ್‌, ಸೋಮಸುಂದರನ್‌, ಡಾ.ಹರ್ಷಿದ್‌ ಲಾಂಡೆ, ಡಾ.ಸಮಂತಾ ಗ್ರೇಸ್‌, ಡಾ.ಕೊಪ್ಪಳ್‌ ಶ್ರೀವತ್ಸವಾ, ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಸ್‌.ಎಸ್‌.ಮಹೇಶ್‌ ಕುಮಾರ್‌, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಯೆಲ್ಲಾ ರಮೇಶ್‌ ಬಾಬು, ಡಾ.ಅನಿಲ್‌ ಸೇರಿದಂತೆ ಆರೋಗ್ಯ ಇಲಾಖೆಯ ಅಧಿ ಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.