ಹಳೇ ಮದಗದ ಕೆರೆಗೆ ಬೇಕಿದೆ ಕಾಯಕಲ್ಪ

ಪ್ರವಾಸೋದ್ಯಮ ಆರಂಭಿಸಲು ಸೂಕ್ತ ತಾಣ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯ

Team Udayavani, Jan 10, 2020, 12:59 PM IST

10-January-10

ಕಡೂರು: ತಾಲೂಕಿನ ಜೀವನಾಡಿಯಾಗಿರುವ ಐತಿಹಾಸಿಕ ಮದಗದ ಕೆರೆ, ಪ್ರಕೃತಿಯ ಸುಂದರ ತಾಣದಲ್ಲಿ ನೆಲೆಗೊಂಡಿದೆ. “ಮಾಯದಂತ ಮಳೆ ಬಂದು ಮದಗದ ಕೆರೆ ತುಂಬಿತು’ ಎಂಬ ಜಾನಪದ ನುಡಿಯಂತೆ ಮದಗದ ಕೆರೆ ತುಂಬುತ್ತದೆ. ಆದರೆ ಹಳೇ ಮದಗದಕೆರೆಯೇ ಇದಕ್ಕೆ ವ್ಯತಿರಿಕ್ತವಾಗಿದ್ದು, ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯದಿಂದ ಸಂಕಷ್ಟದ ಸ್ಥಿತಿಗೆ ತಲುಪಿದೆ.

210 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿರುವ ಹಳೇ ಮದಗದಕೆರೆ 50 ಮೀಟರ್‌ ಎತ್ತರವಿದೆ. ಸಣ್ಣ ನೀರಾವರಿ ಇಲಾಖೆಯ ಸುಪರ್ದಿಯಲ್ಲಿರುವ ಈ ಕೆರೆ ಅತ್ಯಂತ ನಿರ್ಲಕ್ಷ್ಯಕ್ಕೊಳಗಾಗಿದೆ. ಇಲಾಖೆಯ ಬೇಜವಾಬ್ದಾರಿಯಿಂದ ಪ್ರತಿ ಮಳೆಗಾಲದಲ್ಲಿ ತುಂಬಿ ಅತ್ಯಂತ ಮನೋಹರವಾಗಿ ಕಾಣುತ್ತಿದ್ದ ಕೆರೆಯ ಪರಿಸರ ಇಂದು ಸಂಪೂರ್ಣ ಹದಗೆಟ್ಟಿದೆ.

ಸುಂದರ ಪ್ರಕೃತಿಯ ತಾಣವಾಗಿರುವ ಕೆರೆ ಏರಿಯ ಸುತ್ತ ಮುಳ್ಳು ಗಂಟಿಗಳು ಬೆಳೆದು ಓಡಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಗೆ ಹೋಗಲು ಉತ್ತಮ ರಸ್ತೆ ಇಲ್ಲ. ಇರುವ ರಸ್ತೆಯಲ್ಲಿ ವಾಹನ ಓಡಿಸಲು ಸಾಧ್ಯವೆ ಇಲ್ಲದಂತಾಗಿದೆ. ಪ್ರಯತ್ನ ಪಟ್ಟಿದ್ದರೆ ಅತ್ಯಂತ ಸುಂದರ ಪ್ರವಾಸಿ ಸ್ಥಳವನ್ನಾಗಿ ಮಾಡಬಹುದು. ಆದರೆ, ಕೆರೆಯನ್ನು ನಿರ್ಲಕ್ಷಿಸಲಾಗಿದೆ ಎಂಬ ಅಳಲು ಸ್ಥಳೀಯರದ್ದಾಗಿದೆ.

ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇಂತಹ ಕೆರೆಗಳ ಅಭಿವೃದ್ಧಿಪಡಿಸಿದರೆ ಪ್ರವಾಸಿಗರನ್ನು ಸೆಳೆಯಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು, ಜನಪ್ರತಿನಿ ಗಳ ಪ್ರಯತ್ನ ಬೇಕಾಗಿದೆ. ತಾಲೂಕಿನ ಅಯ್ಯನಕೆರೆಯಂತೆಯೇ ಇದನ್ನೂ ಅಭಿವೃದ್ಧಿಪಡಿಸಲಿ ಎಂಬ ಕೂಗು ಕೇಳಿ ಬರುತ್ತಿದೆ. ಕಡೂರು ಮತ್ತು ಬೀರೂರು ಎರಡೂ ಪಟ್ಟಣಗಳಿಗೆ ಸಮಾನ ಅಂತರದಲ್ಲಿರುವ ಹಳೆ ಮದಗದಕೆರೆಗೆ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಬರುವ ನಿರೀಕ್ಷೆ ಇದೆ. ಹೊಸ ಮದಗದ ಕೆರೆಯ ನಿರ್ಮಾಣಕ್ಕಿಂತ ಮೊದಲೇ ರಚಿತವಾದ ಹಳೇಮದಗದ ಕೆರೆ ಮದಗದ ಕೆರೆಯಷ್ಟೇ ಪ್ರಮುಖವಾಗಿ ಕೃಷಿಗೆ ಆಧಾರವಾಗಿದೆ. ಆದರೆ ಹಲವಾರು ಕಾರಣದಿಂದ ಹಳೇಮದಗದ ಕೆರೆ ತನ್ನ ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಲ್ಲಿಗೆ ಬರುವ ನೀರಿನ ಮೂಲಗಳನ್ನೇ ತಡೆಯಲಾಗಿದೆ.

ಬ್ರಹ್ಮದೇವರ ಕಟ್ಟೆ, ಕಿತ್ತಲೆ ಮಡಬಾಯಿ ಎಂಬ ಎರಡು ಮಾನವ ನಿರ್ಮಿತ ಹಾಗೂ ತಾಯಿ ಹಳ್ಳ ಎಂಬ ನಿಸರ್ಗ ನಿರ್ಮಿತ ಹಳ್ಳದಿಂದ ಹಳೇಮದಗದ ಕೆರೆಗೆ ನೀರು ಬರುತ್ತದೆ. ಈ ಮೂಲಗಳ ಮೂಲ ಮದಗದ ಕೆರೆ. ಇನ್ನು ನೈಸರ್ಗಿಕವಾಗಿ ಹರಿಯುವ ತಾಯಿಹಳ್ಳ ನೇರವಾಗಿ ಹಳೇಮದಗದ ಕೆರೆಗೆ ತಲುಪುತ್ತಿತ್ತು. ಸಾವಿರಾರು ಎಕರೆ ಕೃಷಿ ಭೂಮಿಗೆ ನೀರುಣಿಸುವ, ಹತ್ತಾರು ಹಳ್ಳಿಗಳಿಗೆ ಕುಡಿಯುವ ನೀರಿನ ಆಸರೆಯಾಗಿರುವ ಅತ್ಯಂತ ಪ್ರಮುಖ ವಿಹಾರ ಕೇಂದ್ರವನ್ನಾಗಿಸುವ ಸಾಧ್ಯತೆಗಳಿರುವ ಹಳೆಮದಗದ ಕೆರೆಯ ಪುನರುಜ್ಜೀವನಕ್ಕೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಜನಪ್ರತಿನಿಧಿಗಳು ಇದರತ್ತ ಗಮನ ಹರಿಸಬೇಕಾಗಿದೆ.

10 ಹಳ್ಳಿಗಳಿಗೆ ಕುಡಿಯುವ ನೀರಿನ ಆಧಾರ ಸ್ತಂಭ
ಮದಗದ ಕೆರೆಯ ಕೋಡಿ ಬಿದ್ದ ನೀರು ಹಳೇಮದಗದ ಕೆರೆಗೆ ಹೋಗಿ ತುಂಬುವುದು ವಾಡಿಕೆ. ಹಳೇಮದಗದ ಕೆರೆ ತುಂಬಿ ಕೋಡಿ ಬಿದ್ದ ನೀರು ಅಲ್ಲಿಂದ ಮುಂದಕ್ಕೆ ಚಿಕ್ಕಂಗಳ, ಅಂದೇನಹಳ್ಳಿ, ಚೆನ್ನಾಪುರ, ಚಿಕ್ಕಪಟ್ಟಣಗೆರೆ, ಸಂತೆಕೆರೆ, ಎಂ.ಕೋಡಿಹಳ್ಳಿ ಕೆರೆ ಮುಂತಾದ ಕೆರೆಗಳು ತುಂಬುತ್ತವೆ. ಇದಲ್ಲದೆ ಇಲ್ಲಿ ಸುತ್ತಮುತ್ತ
ಇರುವ ಸುಮಾರು 10 ಹಳ್ಳಿಗಳಿಗೆ ಕುಡಿಯುವ ನೀರಿಗೆ ಈ ಕೆರೆಯೇ ಮುಖ್ಯ ಆಧಾರ. 30 ಕಿ.ಮೀ. ಸುತ್ತಮುತ್ತ ಅಂತರ್ಜಲ ಮಟ್ಟ ಸ್ಥಿರತೆಗೂ ಈ ಕೆರೆಯ ಕೊಡುಗೆಯಿದೆ.

ಎ.ಜೆ.ಪ್ರಕಾಶಮೂರ್ತಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.