ಅದ್ದೂರಿ ಕಮಠೇಶ್ವರ ಸ್ವಾಮಿ ಹೂವಿನ ಕರಗ ಮಹೋತ್ಸವ


Team Udayavani, Jun 3, 2019, 3:00 AM IST

adduri

ಚಿಕ್ಕಬಳ್ಳಾಪುರ: ನಗರದ ಕಂದವಾರಪೇಟೆಯಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಭ ಕಮಠೇಶ್ವರಸ್ವಾಮಿ ದೇವಾಲಯದ ಸೇವಾ ಸಮಿತಿ ವತಿಯಿಂದ ಶನಿವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಆರನೇ ವರ್ಷದ ಶ್ರೀ ಕಾಳಿಕಾಂಭ ಕಮಠೇಶ್ವರ ಸ್ವಾಮಿ ಹೂವಿನ ಕರಗ ಮಹೋತ್ಸವ ಅಪರ ಭಕ್ತ ಸಮೂಹಕ್ಕೆ ಸಾಕ್ಷಿಯಾಗಿ ಅದ್ದೂರಿಯಾಗಿ ನೆರವೇರಿತು.

ಕೋಲಾರ ಜಿಲ್ಲೆಯ ಕಾಕಿನತ್ತ ಗ್ರಾಮದ ಬಾಲರಾಜು ಅರಿಶಿಣ ಬಣ್ಣದ ಸೀರೆ ಉಟ್ಟು ಹೂವಿನ ಕರಗ ಹೊತ್ತು ದೇಗುಲದಲ್ಲಿ ಕಾಳಿಕಾಂಭ ಕಮಠೇಶ್ವರಮಿಗೆ ಸಾಂಪ್ರದಾಯಕವಾಗಿ ವಿವಿಧ ಧಾರ್ಮಿಕ ಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ಸಲ್ಲಿಸಿ ಹೊರ ಬರುತ್ತಿದ್ದಂತೆ ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಭಕ್ತರು ಭವ್ಯ ಸ್ವಾಗತ ಕೋರಿದರು.

ಮೆರವಣಿಗೆ: ಹೂವಿನ ಕರಗ ಹೊತ್ತು ಬಾಲರಾಜು ಮಂಗಳವಾದ್ಯ ತಮಟೆಯ ಸದ್ದಿಗೆ ಹೆಜ್ಜೆ ಹಾಕುತ್ತಾ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಅವರನ್ನು ಹಿಂಬಾಲಿಸಿ ಕೈಯಲ್ಲಿ ಕತ್ತಿ, ಗುರಾಣಿ ಹಿಡಿದಿದ್ದ ವೀರಕುಮಾರರರು ಗೋವಿಂದ ಗೋವಿಂದಾ ನಾಮಸ್ಮರಣೆ ಮೊಳಗಿಸಿ ನೆರದಿದ್ದವರಲ್ಲಿ ಭಕ್ತಿಯ ಪರಕಾಷ್ಠೆ ಮೆರೆದರು.

ಹೂವಿನ ಕರಗ ಸಾಗಿದ ಮುಖ್ಯ ರಸ್ತೆಗಳಲ್ಲಿ ಜನ ತಂಡೋಪ ತಂಡವಾಗಿ ಕಿಕ್ಕಿರಿದು ತುಂಬಿದ್ದರು. ಮನೆಗಳ ಮುಂದೆ ಕರಗ ಬಂದಾಗ ಭಕ್ತಿಭಾವದಿಂದ ಕರಗದ ಪೂಜಾರಿಗೆ ಭಕ್ತಿ ನಮನ ಸಲ್ಲಿಸಿದ ನಗರದ ಜನತೆಗೆ ವಿಶೇಷವಾಗಿ ಮಹಿಳೆಯರು ಕರಗಕ್ಕೆ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು.

ಝಗಮಗಿಸಿದ ದೀಪಾಲಂಕಾರ: ಹೂವಿನ ಕರಗದ ಅಂಗನವಾಗಿ ದೇವಾಲಯಕ್ಕೆ ಮಾಡಲಾಗಿದ್ದ ಆಕರ್ಷಕ ಹೂವಿನ ಅಲಂಕಾರ ಹಾಗೂ ವಿದ್ಯುತ್‌ ದೀಪಾಲಂಕಾರ ಎಲ್ಲರ ಗಮನ ಸೆಳೆಯಿತು. ಇಡೀ ಕಂದವಾರಪೇಟೆಯ ಮುಖ್ಯ ಬೀದಿಗಳಿಗೆ ದೀಪಾಲಂಕಾರ ಮಾಡಿದ್ದರ ಜೊತೆಗೆ ದೇವಾಲಯವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.

ಮೊದಲಿಗೆ ದೇವಾಲಯದ ಆವರಣದ ಮುಂಭಾಗ ನಿರ್ಮಿಸಿದ್ದ ವೇದಿಕೆಯಲ್ಲಿ ಕರಗದ ನೃತ್ಯ ಪ್ರದರ್ಶಿಸಲಾಯಿತು. ತಮಟೆಯ ತಂಡದ ಸದ್ದಿಗೆ ಕರಗ ಹೊತ್ತ ಬಾಲರಾಜು ನೃತ್ಯ ಪ್ರದರ್ಶಿಸಿ ನೆರೆದಿದ್ದ ಕರಗ ಪ್ರೇಮಿಗಳನ್ನು ತಲೆದೂಗುವಂತೆ ಮಾಡಿತು.

ಕಾಳಿಕಾಂಭ ಕಮಠೇಶ್ವರ ಸ್ವಾಮಿ ದೇವಾಲಯದ ಟ್ರಸ್ಟ್‌ ಅಧ್ಯಕ್ಷ ಕೆ.ವಿ.ನವೀನ್‌ ಕಿರಣ್‌, ಸೇವಾ ಸಮಿತಿ ಕಾರ್ಯದರ್ಶಿ ಪ್ರಕಾಶ್‌ ಬಾಬು, ದೇವಾಲಯದ ಅರ್ಚಕ ಗಂಗಾಧರ ಶಾಸ್ತ್ರಿ, ಮುಖಂಡರಾದ ಆಲೂಗಡ್ಡೆ ಮಹೇಶ್‌, ಸತೀಶ್‌, ಡಿ.ವಿ.ಮುನಿರಾಜು, ವೆಂಕಟೇಶ್‌, ನಗರಸಭಾ ಮಾಜಿ ಅಧ್ಯಕ್ಷ ಅಪ್ಪಾಲು ಮಂಜು, ದೇವರಾಜು, ಸಮಿತಿಯ ಕೆ.ಕೆ ಬಾಯ್ಸ ತಂಡದ ಸದಸ್ಯರು ಹಾಜರಿದ್ದರು.

ಹೂವಿನ ಕರಗಕ್ಕೆ ಸಾಂಸ್ಕೃತಿಕ ಮೆರಗು: ಚಿಕ್ಕಬಳ್ಳಾಪುರದ ಕಂದವಾರಪೇಟೆಯಲ್ಲಿ ಆಯೋಜಿಸಲಾಗಿದ್ದ ಹೂವಿನ ಕರಗ ಮಹೋತ್ಸವಕ್ಕೆ ಸಾಂಸ್ಕೃತಿಕ ಮೆರಗು ಗಮನ ಸೆಳೆಯಿತು. ಕರಗದ ಜೊತೆ ಜೊತೆಗೆ ವೀರಗಾಸೆ ಕುಣಿತ, ಕೀಲು ಕುದುರೆ, ಬೊಂಬೆ ಕುಣಿತ, ಕರಡಿ ವೇಷ ಮತ್ತಿತರ ವಿವಿಧ ಜಾನಪದ ಶೈಲಿಯ ಕಲಾತಂಡಗಳು ಕರಗಕ್ಕೆ ಆಕರ್ಷಕ ಮೆರಗು ನೀಡಿದವು. ಕರಗ ಮಹೋತ್ಸವದ ಪ್ರಯುಕ್ತ ಭಕ್ತರಿಗೆ ವಿವಿಧೆಡೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಮುಂಜಾಗ್ರತವಾಗಿ ಅಹಿತಕರ ಘಟನೆಗಳು ನಡೆಯದಂತೆ ನಗರ ಠಾಣೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು.

ಅಗ್ನಿಕುಂಡ ಪ್ರವೇಶ: ಶ್ರೀ ಕಾಳಿಕಾಂಭ ಕಮಠೇಶ್ವರಸ್ವಾಮಿ ಹೂವಿನ ಕರಗ ಹೊತ್ತ ಬಾಲರಾಜು ಶನಿವಾರ ರಾತ್ರಿ ಇಡೀ ನೃತ್ಯ ಪ್ರದರ್ಶಿಸಿ ಗಮನ ಸೆಳೆದರೆ, ಭಾನುವಾರ ಬೆಳಗ್ಗೆ ಕಾಳಿಕಾಂಭ ದೇವಾಲಯದ ಪಕ್ಕದಲ್ಲಿ ಅಗ್ನಿಕುಂಡ ಪ್ರವೇಶಿಸಿ ಭಕ್ತಿಯ ಪರಾಕಷ್ಠೆ ಮೆರೆದರು. ಬಳಿಕ 9 ಗಂಟೆಗೆ ಸುಮಾರಿಗೆ ಕಾಳಿಕಾಂಭ ದೇವಾಲಯದ ಮುಂಭಾಗದಲ್ಲಿ ಬಾಲರಾಜು ತಲೆಯ ಮೇಲೆ ಒನಕೆ ಕರಗ ಹೊತ್ತು ಒನಕೆಯ ಮೇಲೆ ಅರಿಶಿಣ ನೀರು ತುಂಬಿಟ್ಟು ತಾಮ್ರದ ಪಾತ್ರೆ ಇಟ್ಟುಕೊಂಡು ತಮಟೆಯ ವಾದನಕ್ಕೆ ತಕ್ಕಂತೆ ವಿವಿಧ ಭಂಗಿಗಳಲ್ಲಿ ಆಕರ್ಷಕ ನೃತ್ಯ ಮಾಡುವ ಮೂಲಕ ನೆರೆದಿದ್ದ ಜನರನ್ನು ಸೂಜಿಗಲ್ಲಿನಂತೆ ತಮತ್ತ ಸೆಳೆದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.