ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ
Team Udayavani, Mar 17, 2021, 1:23 PM IST
ಚಿಕ್ಕಬಳ್ಳಾಪುರ: ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಎಚ್ಚರವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ಬೇಸಿಗೆ ಆರಂಭವಾಗುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆಯ ದೂರುಗಳು ಕೇಳಿ ಬರುತ್ತಿದ್ದು, ಅಧಿಕಾರಿಗಳು ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಮತ್ತು ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದರೆ ಅದರ ಮಾಹಿತಿ ಇಲಾಖೆ ಹಿರಿಯ ಅಧಿಕಾರಿ ಗಳಿಗೆ ಸಲ್ಲಿಸಬೇಕೆಂದು ತಾಕೀತು ಮಾಡಿದರು.
ಅನುದಾನ ವಾಪಸ್ ಹೋಗದಂತೆ ಜಾಗೃತಿವಹಿಸಿ: ಅಕ್ಷರ ದಾಸೋಹ ಯೋಜನೆಯಡಿ ಪ್ರತಿ ಮೂರು ತಿಂಗಳಿಗೊಮ್ಮೆ ಮಕ್ಕಳಿಗೆ ವಿತರಣೆಯಾಗುವ ಪೌಷ್ಟಿಕ ಆಹಾರವನ್ನು ಬ್ಯಾಗ್ಗಳ ಮೂಲಕ ಸಮರ್ಪಕವಾಗಿ ವ್ಯವಸ್ಥಿತವಿತರಣೆಯಾಗಬೇಕು. ಮಾರ್ಚ್ದೊಳಗೆ ಎಲ್ಲ ಇಲಾಖಾಧಿಕಾರಿಗಳು ಆನುದಾನವನ್ನುಸದುಪಯೋಗ ಮಾಡಿಕೊಂಡುಸಾರ್ವಜನಿಕರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ವಾಪಸ್ ಹೋಗದಂತೆ ಜಾಗೃತಿವಹಿಸಬೇಕೆಂದು ಸೂಚಿಸಿದರು.
ಸೌಲಭ್ಯ ಕುರಿತು ಅರಿವು ಮೂಡಿಸಿ: ಕೇಂದ್ರ,ರಾಜ್ಯ ಸರ್ಕಾರವಿವಿಧ ಇಲಾಖೆಗಳ ಮೂಲಕನೀಡುವ ಸೌಲಭ್ಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಮಾಂಸ ಆಹಾರವು ಬಹಳತುಟ್ಟಿಯಾಗುತ್ತಿದ್ದು, ಇದಕ್ಕೆಪರ್ಯಾಯವಾಗಿ ಮತ್ಸé ಆಹಾರಉತ್ಪನ್ನಗಳನ್ನು ಉತ್ತೇಜಿಸಲು ಪ್ರಧಾನಮಂತ್ರಿ ಮತ್ಸ್ಯ ಯೋಜನೆಯಡಿ ನೀಡುವಸಹಾಯಧನದ ಮಾಹಿತಿಯನ್ನು ಜಿಲ್ಲೆಯರೈತರಿಗೆ ಪ್ರಚಾರ ಪಡಿಸಬೇಕು. ಕಡಿಮೆನೀರಿನಲ್ಲಿ ಹೆಚ್ಚು ಮೀನು ಉತ್ಪಾದಿಸುವಪ್ರಾನ್ಸ್ ಬಯೋಕ್ಲಾಕ್ ತಂತ್ರಜ್ಞಾನ ರೈತರಿಗೆತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮರೂಪಿಸುವಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ಪಿ.ಶಿವಶಂಕರ್ ಮಾತನಾಡಿ,ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮ ಪಾಲಿಸಲು ಯಾರು ಅಲಕ್ಷ್ಯವಹಿಸಬಾರದು. ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನುಒಳಗೊಂಡ ಒಂದು ಟಾಸ್ಕ್ಪೋರ್ಸ್ತಂಡವನ್ನು ರಚಿಸಿಕೊಂಡು ಆರೋಗ್ಯ ಇಲಾಖೆ ಪ್ರಸ್ತುತ ಗುರುತಿಸಲ್ಪಟ್ಟವರ್ಗದವರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ ಸೂಚಿಸಿದರು.
ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಜಿಪಂಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್,ಬಂಕ್ ಮುನಿಯಪ್ಪ ಹಾಗೂ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಜಾನುವಾರಗಳಿಗೆ ನೀರು ಪೂರೈಸಿ :
ಜಿಲ್ಲೆಯಲ್ಲಿ 35 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ ಎಂದುಅಧಿಕಾರಿಯ ಮಾಹಿತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಜಿಪಂ ಅಧ್ಯಕ್ಷರು, ಜಿಲ್ಲೆಯಲ್ಲಿ ಈ ಸಂಬಂಧ ಪ್ರತಿ 15 ದಿನಕ್ಕೊಮ್ಮೆ ತಾಲೂಕುಮಟ್ಟದ ಅಧಿಕಾರಿಗಳು ಸಭೆ ಸೇರಬೇಕು. ಸಾರ್ವಜನಿಕರ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ತೊಟ್ಟಿಗಳನ್ನು ನಿರ್ಮಿಸಿ ಜಾನುವಾರಗಳಿಗೆ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ನಿರ್ದೇಶನ ನೀಡಿದರು.
ಕೋವಿಡ್ ನಿಯಮ ಪಾಲನೆ ಕಡ್ಡಾಯ : ಕೋವಿಡ್ ಸಾಂಕ್ರಾಮಿಕ ರೋಗವು ಹರಡುತ್ತಿರುವ 2ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿ, ಸರ್ಕಾರ ರೂಪಿಸಿರುವ ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಮಾರ್ಗಸೂಚಿ ನಿಯಮ ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಇಲಾಖೆ ಗುರುತಿಸಲ್ಪಟ್ಟ ವಯೋಮಾನದವರು, ವರ್ಗದವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಸೂಕ್ತ ಕ್ರಮವಹಿಸುವಂತೆ ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.
ಆಯುಷ್ ಇಲಾಖೆಗೆ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡುತ್ತಾರೆ. ಆ ಇಲಾಖೆ ಅಧಿಕಾರಿ-ಸಿಬ್ಬಂದಿಗೆಕಾರು ಕೊಡ್ತಾರೆ. ಅದು ಹೊರತುಪಡಿಸಿ ಇಲಾಖೆಯ ಕಾರ್ಯವೈಖರಿಸಮಾಧಾನಕರವಾಗಿಲ್ಲ. ಇಲಾಖೆ ಸದೃಢಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.-ಎಂ.ಬಿ ಚಿಕ್ಕನರಸಿಂಹಯ್ಯ, ಜಿಪಂ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ