ಕೋಚಿಮುಲ್‌ ವಿಭಜನೆ ಆದೇಶ ವಾಪಸ್‌


Team Udayavani, Jun 28, 2023, 2:31 PM IST

ಕೋಚಿಮುಲ್‌ ವಿಭಜನೆ ಆದೇಶ ವಾಪಸ್‌

ಚಿಕ್ಕಬಳ್ಳಾಪುರ: ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ವಿಭಜಿಸಿ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೆ ಪ್ರತ್ಯೇಕವಾಗಿ ರಚಿಸಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೋಂದಣಿ ಆದೇಶವನ್ನು ರಾಜ್ಯ ಸರ್ಕಾರ ಮಂಗಳವಾರ ಹಿಂದಕ್ಕೆ ಪಡೆದಿದ್ದು, ವಿಭಜನೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ್ದ ಜಿಲ್ಲೆಯ ಕಾಂಗ್ರೆಸ್‌ನ ಕೋಚಿಮುಲ್‌ ನಿರ್ದೇಶಕರಿಗೆ ಜಯ ಸಿಕ್ಕಿದೆ.

ಕೋಲಾರ ಜಿಲ್ಲೆಯ ಭಾಗವಾಗಿದ್ದ ಜಿಲ್ಲೆಯನ್ನು ಕೋಚಿಮುಲ್‌ನಿಂದ ಬೇರ್ಪಡಿಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ 2022 ಜೂ.22 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಎಂದು ಪ್ರತ್ಯೇಕವಾಗಿ ರಾಜ್ಯ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದರು.

ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು: ಆದರೆ, ರಾಜ್ಯ ಸರ್ಕಾರದ ಕೋಚಿಮುಲ್‌ ವಿಭಜನೆ ಆದೇಶದ ವಿರುದ್ಧ ಜಿಲ್ಲೆಯ ಕೋಚಿಮುಲ್‌ ನಿರ್ದೇಶಕರು ಅದರಲ್ಲೂ ಕಾಂಗ್ರೆಸ್‌ ಪಕ್ಷದಿಂದ ಕೋಚಿಮುಲ್‌ಗೆ ಚುನಾಯಿತ ರಾಗಿದ್ದ ಚಿಕ್ಕಬಳ್ಳಾಪುರದ ಭರಣಿ ವೆಂಕಟೇಶ್‌, ಚಿಂತಾಮ ಣಿಯ ಊಲವಾಡಿ ಅಶ್ವತ್ಥನಾರಾಯಣ ಬಾಬು, ಶಿಡ್ಲಘಟ್ಟದ ಶ್ರೀನಿವಾಸ್‌, ಬಾಗೇಪಲ್ಲಿ ನಿರ್ದೇಶಕರಾದ ಮಂಜುನಾಥ ಮತ್ತಿತರರು ಕೋಚಿಮುಲ್‌ ವಿಭಜನೆ ಮಾಡಿ ಸಹಕಾರ ಸಂಘಗಳ ಜಂಟಿ ನಿಬಂದಕರು ಹೊರ ಡಿಸಿದ್ದ ಆದೇಶವನ್ನು ರದ್ದುಗೊಳಿಸುವಂತೆ ಹಾಗೂ ಕೋಚಿ ಮುಲ್‌ ವಿಭಜನೆ ಪ್ರಕ್ರಿಯೆ ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತೀರ್ಪು ಪ್ರಕಟವಾಗುವ ಹೊತ್ತಲ್ಲಿ ಆದೇಶ ವಾಪಸ್‌: ಕೋಚಿಮುಲ್‌ ವಿಭಜನೆ ವಿಚಾರದಲ್ಲಿ ಪರ, ವಿರುದ್ಧ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರದಲ್ಲಿ ಹಲವು ತಿಂಗಳಿಂದ ವಾದ, ಪ್ರತಿವಾದ ನಡೆದು ಅಂತಿಮ ತೀರ್ಪು ನೀಡುವ ಹೊತ್ತಿನಲ್ಲಿಯೇ ಕೋಚಿ ಮುಲ್‌ನ್ನು ವಿಭಜಿಸಿ ಆದೇಶ ಹೊರಡಿಸಿದ್ದ ಸಹಕಾರ ಸಂಘಗಳ ಜಂಟಿ ನಿಬಂಧಕ ರಾದ ಅಶ್ವತ್ಥನಾರಾಯಣ ಅವರು, ತಮ್ಮ ಆದೇಶವನ್ನು ಸರ್ಕಾರದ ಪರವಾಗಿ ಹೈಕೋರ್ಟ್‌ನಲ್ಲಿ ವಾಪಸ್‌ ಪಡೆದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋಚಿಮುಲ್‌ ವಿಭಜನೆ ಆದೇಶಕ್ಕೆ ಬ್ರೇಕ್‌ ಬಿದ್ದಂತಾಗಿದೆ.

ಸೋತವರಿಗೆ ಪಟ್ಟಕ್ಕಾಗಿ ವಿಭಜನೆ ತಂತ್ರ: ಚುನಾವಣೆಯಲ್ಲಿ ಸೋತವರಿಗೆ (ಕೆ.ವಿ.ನಾಗರಾಜ್‌) ಅಧಿಕಾರ ಕೊಡಿಸಬೇಕೆಂಬ ಏಕೈಕ ಉದ್ದೇಶದಿಂದ ಯಾವುದೇ ಮೂಲ ಸೌಕರ್ಯ ಇಲ್ಲದೇ ಇದ್ದರೂ ಕೋಚಿಮುಲ್‌ ವಿಭಜಿಸಿ ಚಿಮುಲ್‌ ಮಾಡಿದರು. ಜೊತೆಗೆ ಕೋಚಿಮುಲ್‌ನ ಅಧ್ಯಕ್ಷರು, ನಿರ್ದೇಶಕರನ್ನು ಅಲ್ಲಿಯೇ ಮುಂದುವರೆಸುತ್ತಾರೆ. ಆದರೆ, ಚಿಮುಲ್‌ ಆಡಳಿತ ಮಂಡಳಿಗೆ ಹೊಸ ನಿರ್ದೇಶಕರನ್ನ ಚುನಾವಣೆ ಮೂಲಕ ಆರಿಸಬೇಕೆಂದು ಸರ್ಕಾರ ಸೂಚಿಸುತ್ತದೆ. ಆದ್ದರಿಂದ ನಾವು ನಿರ್ದೇಶಕರಾಗಿ 2 ವರ್ಷ ಆಗಿಲ್ಲ. ಆಗಲೇ ಮತ್ತೆ ಚುನಾವಣೆ ಎದುರಿಸಬೇಕೆಂಬ ಹಿನ್ನೆಲೆಯಲ್ಲಿ ವಿಭಜನೆ ಆದೇಶದ ವಿರುದ್ಧ ಹೈಕೋರ್ಟ್‌ಗೆ ತಕಾರರು ಅರ್ಜಿ ಸಲ್ಲಿಸಿದ್ದೆವು. ನ್ಯಾಯಾಲಯ ಎಲ್ಲವನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವ ಮುನ್ನವೇ ಸರ್ಕಾರ ವಿಭಜನೆ ಆದೇಶವನ್ನು ಹಿಂಪಡೆದಿದೆ ಎಂದು ಕೋಚಿಮುಲ್‌ ನಿರ್ದೇಶಕರಾದ (ಚಿಕ್ಕಬಳ್ಳಾಪುರ ವ್ಯಾಪ್ತಿ) ಭರಣಿ ವೆಂಕಟೇಶ್‌ ಉದಯವಾಣಿಗೆ ತಿಳಿಸಿದರು.

ಆದೇಶ ವಾಪಸ್‌ಗೆ ಕಾರಣ ಏನು?: ಜಿಲ್ಲೆಯಲ್ಲಿ ಚಿಮುಲ್‌ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಿದರೆ ಚಿಮುಲ್‌ ಡೇರಿಗೆ ಹೆಚ್ಚುವರಿಯಾಗಿ ಬೇಕಾದ 10 ಎಕರೆ ಜಾಗದ ಕೊರತೆ ಇದೆ. ಜೊತೆಗೆ ಡೇರಿ ಮೂಲ ಸೌಕರ್ಯಕ್ಕೆ ಬೇಕಾದ 150 ರಿಂದ 200 ಕೋಟಿ ರೂ. ವಿಶೇಷ ಅನುದಾನ ಒದಗಿಸಲು ಸದ್ಯ ಸಾಧ್ಯವಾಗುತ್ತಿಲ್ಲ. ಜೊತೆಗೆ ಜಿಲ್ಲೆಯಲ್ಲಿ ಹಾಲಿನ ಪ್ರಮಾಣ ಕಡಿಮೆ ಇರುವ ಕಾರಣದಿಂದ ಚಿಮುಲ್‌ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದು ಬೇಡ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕರು ಹೊರಡಿಸಿದ್ದ ವಿಭಜನೆ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಕೋಚಿಮುಲ್‌ ನಿರ್ದೇಶಕರೊಬ್ಬರು ಉದಯವಾಣಿಗೆ ತಿಳಿಸಿದರು.

ವಿಭಜನೆ ಹೆಸರಲ್ಲಿ ತಾರಕಕ್ಕೇರಿತ್ತು ನಾಯಕರ ಕೆಸರೆರಚಾಟ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಗಿನ ಆಡಳಿತರೂಢ ಬಿಜೆಪಿ ಹಾಗೂ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್‌ ನಾಯಕರ ನಡುವೆ ಕೋಚಿಮುಲ್‌ ವಿಭಜನೆ ವಿಚಾರ ಸಾಕಷ್ಟು ಸದ್ದು ಮಾಡಿ ತೀವ್ರ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಕಾಂಗ್ರೆಸ್‌ ವಿರೋಧದ ನಡುವೆಯೂ ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಹಠಹಿಡಿದು ಜಿಲ್ಲೆಗೆ ಚಿಮುಲ್‌ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಿದ್ದರು. ಇದರ ವಿರುದ್ಧ ಮತ್ತೆ ಜಿಲ್ಲೆಯ ಕಾಂಗ್ರೆಸ್‌ ನಾಯಕರು ಹಾಗೂ ಕೋಚಿಮುಲ್‌ ನಿರ್ದೇಶಕರು ಹೈಕೋರ್ಟ್‌ ಮೆಟ್ಟಿಲೇರಿದ್ದ ಬಗ್ಗೆ ಪರಸ್ಪರ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ವಿರುದ್ಧ ಮಾತಿನ ಸಮರ ತೀವ್ರವಾಗಿತ್ತು. ಆದರೆ, ಈಗ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆದು ಚಿಮುಲ್‌ ಪ್ರತ್ಯೇಕವನ್ನು ರದ್ದುಗೊಳಿಸಿರುವುದು ಮುಂದಿನ ದಿನಗಳಲ್ಲಿ ಜಿಲ್ಲೆಯ ಕಾಂಗ್ರೆಸ್‌, ಬಿಜೆಪಿ ನಾಯಕರ ಜಟಾಪಟಿಗೆ ಕಾರಣವಾಗಲಿದೆ.

ಜಿಲ್ಲೆಯ ನಿರ್ದೇಶಕರಿಗೆ ಅಧಿಕಾರ ಇರಲಿಲ್ಲ : ಮತ್ತೂಂದು ವಿಚಾರ ಅಂದರೆ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೆ ಚಿಮುಲ್‌ ಪ್ರತ್ಯೇಕವಾಗಿ ಮಾಡಿದರೂ ಕೂಡ ಜಿಲ್ಲೆಯಿಂದ ಕೋಚಿಮುಲ್‌ಗೆ ಚುನಾಯಿತರಾಗಿದ್ದ ಜಿಲ್ಲೆಯ ನಿರ್ದೇಶಕರಿಗೆ ಚಿಮುಲ್‌ ಆಡಳಿತದಲ್ಲಿ ಯಾವುದೇ ಪ್ರಾತಿನಿಧ್ಯ ಕೊಡದೇ ಕೋಚಿಮುಲ್‌ನಲ್ಲಿ ಮುಂದವರೆಸಿತ್ತು. ಹೀಗಾಗಿ ಸರ್ಕಾರದ ಧೋರಣೆ ವಿರುದ್ಧ ಜಿಲ್ಲೆಯ ಕಾಂಗ್ರೆಸ್‌ ನಿರ್ದೇಶಕರು ಸಿಟ್ಟಿಗೆದ್ದು ವಿಭಜನೆ ಆದೇಶದ ವಿರುದ್ಧ ಹೈಕೋರ್ಟ್‌ ಮೇಟ್ಟಿಲೇರಿದ್ದರು. ಕೊನೆಗೂ ಸರ್ಕಾರ ತನ್ನ ಆದೇಶವನ್ನು ರದ್ದುಗೊಳಿಸುವ ಮೂಲಕ ಜಿಲ್ಲೆಗೆ ಪ್ರತ್ಯೇಕಗೊಂಡು ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಚಿಮುಲ್‌ ತನ್ನ ಅಸ್ತಿತ್ವ ಕಳೆದುಕೊಂಡಿದೆ.

ಹಿಂದಿನ ಬಿಜೆಪಿ ಸರ್ಕಾರ ಉಸ್ತುವಾರಿ ಸಚಿವರಾಗಿದ್ದವರು ರಾಜಕೀಯ ದ್ವೇಷ ದಿಂದ ಜನರಿಂದ ಆಯ್ಕೆಗೊಂಡ ನಮ್ಮ ಅಧಿಕಾರ ಮೊಟಕೊಗೊಳಿಸಲು ಚಿಮುಲ್‌ನ್ನು ಪ್ರತ್ಯೇಕಗೊಳಿಸಿದ್ದರು. ಆದರೆ ಸರ್ಕಾರ ವಿಭಜನೆ ಆದೇಶವನ್ನು ಹಿಂಪ ಡೆದಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಗೆ ಜಯ ಸಿಕ್ಕಿದೆ. -ಊಲವಾಡಿ ಅಶ್ವತ್ಥನಾರಾಯಣಬಾಬು, ಕೋಚಿಮುಲ್‌ ನಿರ್ದೇಶಕರು

ಕೋಚಿಮುಲ್‌ ಒಕ್ಕೂಟ ಇಂದಲ್ಲ ನಾಳೆ ವಿಭಜನೆ ಆಗಲೇಬೇಕು. ಆದರೆ ಅದಕ್ಕಿಂತ ಮೊದಲು ಮೂಲ ಸೌಕರ್ಯ ಕಲ್ಪಿಸಬೇಕು. ಕೋಲಾರ ದಲ್ಲಿ ಸಾಕಷ್ಟು ಮೂಲ ಸೌಕರ್ಯ ಇದೆ. ಆಡಳಿತ ಮಂಡಳಿಗೋಸ್ಕರ ಪ್ರತ್ಯೇಕಗೊಳಿಸಿದರೆ ಒಳ್ಳೆ ಯದು. ಕೆಲವರು ಅಧ್ಯಕ್ಷರಾಗಬೇಕೆಂಬ ಆತುರದಿಂದ ಹಿಂದಿನ ಸರ್ಕಾರ ಪ್ರತ್ಯೇಕಗೊಳಿಸಿತು. – ಕೆ.ಪಿ.ಬಚ್ಚೇಗೌಡ, ಮಾಜಿ ಶಾಸಕರು, ಚಿಕ್ಕಬಳ್ಳಾಪುರ

ಹೈಕೋರ್ಟ್‌ನಲ್ಲಿ ವಾದ, ಪ್ರತಿವಾದ ಆಲಿಸಿ ನ್ಯಾಯಾಧೀಶರು ತೀರ್ಪು ಕೊಡುವ ಸಂದರ್ಭದಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಚಿಮುಲ್‌ ಪ್ರತ್ಯೇಕಗೊಳಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್‌ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸದ್ಯದಲೇ ಸುದ್ದಿಗೋಷ್ಠಿ ನಡೆಸಿ ವಿವರ ಕೊಡುತ್ತೇವೆ. – ಕೆ.ವಿ.ನಾಗರಾಜ್‌, ಕೋಚಿಮುಲ್‌ ಮಾಜಿ ಅಧ್ಯಕ್ಷರು 

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.